ಯುಪಿಎಂಸಿ ಪ್ರೀಮಿಯರ್‌ ಲೀಗ್‌-24 ಕ್ರಿಕೆಟ್‌ ಪಂದ್ಯಾಟ

KannadaprabhaNewsNetwork |  
Published : May 07, 2024, 01:00 AM IST
ಯುಪಿಎಂಸಿ6 | Kannada Prabha

ಸಾರಾಂಶ

ಕಾಲೇಜಿನ ಪ್ರಾಚಾರ್ಯ ಆಶಾ ಕುಮಾರಿ ಪಂದ್ಯಾಟವನ್ನು ಕ್ರಿಕೆಟ್ ಜರ್ಸಿ ಮತ್ತು ಟ್ರೋಫಿ ಅನಾವರಣ ಮಾಡುವ ಮೂಲಕ ಉದ್ಘಾಟಿಸಿದರು. ಐಪಿಎಲ್ ಮಾದರಿಯಲ್ಲಿ ವಿದ್ಯಾರ್ಥಿ ಆಟಗಾರರ ಹರಾಜು ನಡೆಸಿ ಐದು ತಂಡಗಳನ್ನು ರಚಿಸಲಾಗಿದೆ.

ಕನ್ನಡಪ್ರಭ ವಾರ್ತೆ ಉಡುಪಿ

ನಗರದ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಸೋಮವಾರ ಯುಪಿಎಂಸಿ ಪ್ರಿಮಿಯರ್ ಲೀಗ್ - ೨೪ ಕ್ರಿಕೆಟ್ ಪಂದ್ಯಾಟವು ಯಶಸ್ವಿಯಾಗಿ ಸಂಪನ್ನಗೊಂಡಿತು.

ಕಾಲೇಜಿನ ಪ್ರಾಚಾರ್ಯ ಆಶಾ ಕುಮಾರಿ ಪಂದ್ಯಾಟವನ್ನು ಕ್ರಿಕೆಟ್ ಜರ್ಸಿ ಮತ್ತು ಟ್ರೋಫಿ ಅನಾವರಣ ಮಾಡುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕಾಲೇಜಿನ ಬಿ.ಕಾಮ್. ಮತ್ತು ಬಿ.ಬಿ.ಎ. ತರಗತಿಯ ಪಾಠಗಳಿಗೆ ಪ್ರಾಯೋಗಿಕತೆಯನ್ನು ಕಲ್ಪಿಸುವ ದೃಷ್ಟಿಯಿಂದ ಆಯೋಜನೆಯ ಸಂಪೂರ್ಣ ಜವಾಬ್ದಾರಿ ವಿದ್ಯಾರ್ಥಿಗಳಿಗೆ ವಹಿಸಿ ಈ ಪಂದ್ಯಾಟವನ್ನು ಆಯೋಜಿಸಲಾಗುತ್ತಿದೆ. ಐಪಿಎಲ್ ಮಾದರಿಯಲ್ಲಿ ವಿದ್ಯಾರ್ಥಿ ಆಟಗಾರರ ಹರಾಜು ನಡೆಸಿ ಐದು ತಂಡಗಳನ್ನು ರಚಿಸಲಾಗಿದೆ. ವಿದ್ಯಾರ್ಥಿಗಳು ನಡೆಸಿದ ಈ ಪಂದ್ಯಾಟವು ಅವರಲ್ಲಿ ನಾಯಕತ್ವವೇ ಮೊದಲಾದ ಗುಣಗಳನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಎಂದು ತಿಳಿಸಿದರು.

ಕಾಲೇಜಿನ ಉಪನ್ಯಾಸಕರಾದ ಚಂದ್ರಶೇಖರ್, ರಾಘವೇಂದ್ರ ಜಿ. ಜಿ., ಹರಿಕೇಶವ್, ಶಶಿಕಾಂತ್ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಗಣೇಶ್ ಕೋಟ್ಯಾನ್, ಪ್ರವೀಣ್, ವಿದ್ಯಾರ್ಥಿ ತಂಡಗಳ ಮಾಲಕರಾದ ಪ್ರೀತಂ ಶೆಟ್ಟಿ, ನಿಹಾಲ್ ನಾಗೇಶ್, ತುಷಾರ್, ಸಿನನ್, ಮತ್ತು ಹಳೆ ವಿದ್ಯಾರ್ಥಿ ಪ್ರಜ್ವಲ್ ಕಾಮತ್ ಇದ್ದರು.

ಸಾಕ್ಷಿ ಸ್ವಾಗತಿಸಿದರು, ನಿರೀಕ್ಷ ವಂದಿಸಿದರು. ನೌಶೀನ್ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ