ಯುಪಿಎಂಸಿ: ‘ಪರಿಣಾಮಕಾರಿ ಸಂವಹನ ಕಲೆ’ ವಿಶೇಷ ತರಬೇತಿ

KannadaprabhaNewsNetwork |  
Published : Nov 25, 2025, 03:00 AM IST
24ಯುಪಿಎಂಸಿ | Kannada Prabha

ಸಾರಾಂಶ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ ಸೋಮವಾರ ಪರಿಣಾಮಕಾರಿ ಸಂವಹನ ಕಲೆಯ ಕುರಿತಾಗಿ ವಿಶೇಷ ತರಬೇತಿ ಕಾರ್ಯಕ್ರಮ ಕಾಲೇಜಿನ ಉಪೇಂದ್ರ ಮಂಟಪದಲ್ಲಿ ಜರಗಿತು.

ಉಡುಪಿ: ಇಲ್ಲಿನ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ ಸೋಮವಾರ ಪರಿಣಾಮಕಾರಿ ಸಂವಹನ ಕಲೆಯ ಕುರಿತಾಗಿ ವಿಶೇಷ ತರಬೇತಿ ಕಾರ್ಯಕ್ರಮ ಕಾಲೇಜಿನ ಉಪೇಂದ್ರ ಮಂಟಪದಲ್ಲಿ ಜರಗಿತು.

ಉಡುಪಿ ತಾಲೂಕು ಕಸಾಪ ಸಂಘಟನಾ ಕಾರ್ಯದರ್ಶಿಯಾಗಿರುವ ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಅವರು ಸಂಸ್ಥೆಯ 2025- 26ನೇ ಸಾಲಿನ ಸಾಹಿತ್ಯ ಸಂಘದ ಚಟುವಟಿಕೆಗಳನ್ನು ಉದ್ಘಾಟಿಸಿ, ಪರಿಣಾಮಕಾರಿ ಸಂವಹನ ಕಲೆಯ ಕುರಿತಾಗಿ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು.

ಅವರು ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಮಾತಿನಲ್ಲಿ ಅಥವಾ ಬರವಣಿಗೆಯಲ್ಲಿ ನಿಖರತೆ, ಸ್ಪಷ್ಟತೆ, ವಸ್ತುನಿಷ್ಠತೆ ಇರಬೇಕು ಇದು ಸಂವಹನ ಕೌಶಲ ಉತ್ತಮ ಪಡಿಸಿಕೊಳ್ಳಲು ಸಹಕಾರಿ, ಲವಲವಿಕೆಯಿಂದ ತಂತಮ್ಮ ಕ್ಷೇತ್ರಗಳಲ್ಲಿ ಆಸಕ್ತಿಯಿಂದ ತೊಡಗಿದರೆ ವ್ಯಕ್ತಿ ಸಾಧಕನಾಗಬಲ್ಲ ಎಂದರು.

ಕಾಲೇಜಿನ ಪ್ರಾಚಾರ್ಯ ಆಶಾ ಕುಮಾರಿ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಸಂಘದ ಸಹ ಸಂಚಾಲಕ ಹಾಗೂ ಕನ್ನಡ ಉಪನ್ಯಾಸಕ ಶಶಿಕಾಂತ್ ಎಸ್. ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಹಿಂದಿ ಉಪನ್ಯಾಸಕಿ ಸುನಿತಾ ಕಾಮತ್ ಉಪಸ್ಥಿತರಿದ್ದರು. ಸಾಹಿತ್ಯ ಸಂಘದ ಸಂಚಾಲಕ ಹಾಗೂ ವಾಣಿಜ್ಯ ಉಪನ್ಯಾಸಕ ರಾಘವೇಂದ್ರ ಜಿ ಜಿ ಕಾರ್ಯಕ್ರಮ ಸಂಯೋಜಿಸಿದರು. ವಿದ್ಯಾರ್ಥಿನಿಯರಾದ ಅದೀಶ ಸ್ವಾಗತಿಸಿದರು, ಕೃತಿಕಾ ವಂದಿಸಿದರು, ಸನ್ನಿಧಿ ಶೆಟ್ಟಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂತರ್ಜಾತಿ ವಿವಾಹಿತರಿಗೆ ಪೊಲೀಸರ ರಕ್ಷಣೆ : ಗೃಹ ಮಂತ್ರಿ
ಮುಂಬೈ ಮೇಯರ್‌ ಹುದ್ದೆಗೆ ಶಿಂಧೆ ಲಡಾಯಿ?