ಉಪ್ಪಿನಂಗಡಿ ದೇವಸ್ಥಾನ ಅಭಿವೃದ್ಧಿ ಕಾರ್ಯ: ಶಾಸಕ ಅಶೋಕ್‌ ಕುಮಾರ್‌ ರೈ ಸೂಚನೆ

KannadaprabhaNewsNetwork |  
Published : Feb 13, 2025, 12:47 AM IST
 ದೇವಳದ ಅಭಿವೃದ್ಧಿಯ ಬಗ್ಗೆ ವಿಚಾರ ವಿಮರ್ಷೆ  | Kannada Prabha

ಸಾರಾಂಶ

ಮಂಗಳವಾರ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಅಲ್ಲಿನ ಆಡಳಿತ ಮಂಡಳಿ ಸದಸ್ಯರ ಜೊತೆ ಮಾಸ್ಟರ್ ಪ್ಲ್ಯಾನ್ ರಚಿಸಿದ ಸಂಸ್ಥೆಯ ಅಧಿಕಾರಿಗಳೊಂದಿಗೆ ದೇವಳದ ಅಭಿವೃದ್ಧಿಯ ಬಗ್ಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿಚಾರ ವಿಮರ್ಷೆ ನಡೆಸಿದರು.

ಕನ್ನಡಪ್ರಭ ವಾರ್ತೆ ಉಪ್ಪಿನಂಗಡಿ

ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ವ್ಯವಸ್ಥಿತ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲ್ಯಾನ್‌ ರಚಿಸಿ ಅದರಂತೆ ಅಭಿವೃದ್ಧಿ ಕಾರ್ಯಗಳನ್ನು ನಡೆಸಬೇಕೆಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸೂಚನೆ ನೀಡಿದರು.

ಮಂಗಳವಾರ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಅಲ್ಲಿನ ಆಡಳಿತ ಮಂಡಳಿ ಸದಸ್ಯರ ಜೊತೆ ಮಾಸ್ಟರ್ ಪ್ಲ್ಯಾನ್ ರಚಿಸಿದ ಸಂಸ್ಥೆಯ ಅಧಿಕಾರಿಗಳೊಂದಿಗೆ ದೇವಳದ ಅಭಿವೃದ್ಧಿಯ ಬಗ್ಗೆ ವಿಚಾರ ವಿಮರ್ಷೆ ನಡೆಸಿ ಮಾತನಾಡಿದರು.

ಈಗಾಗಲೇ ದೇವಾಲಯದ ಅಭಿವೃದ್ಧಿ ನಿಟ್ಟಿನಲ್ಲಿ ೨೨.೪೭ ಕೋಟಿ ರು. ವೆಚ್ಚದ ಮಾಸ್ಟರ್ ಪ್ಲ್ಯಾನ್ ರಚಿಸಲಾಗಿದೆ. ಎರಡು ನದಿಗಳ ಸಂಗಮ ಸ್ಥಳವಾಗಿಯೂ, ಪೌರಾಣಿಕ ನೆಲೆಗಟ್ಟಿನಲ್ಲಿ ಧಾರ್ಮಿಕವಾಗಿ ಮಹತ್ವ ಪಡೆದುಕೊಂಡ ಉಪ್ಪಿನಂಗಡಿ ಕ್ಷೇತ್ರ ಇದೀಗ ಅಪರ ಕರ್ಮಾದಿಗಳಿಗೆ ರಾಜ್ಯಾದ್ಯಂತ ಭಕ್ತರನ್ನು ಸೆಳೆಯುತ್ತಿದ್ದು, ಸುವ್ಯವಸ್ಥಿತ ಪ್ರವಾಸಿತಾಣವನ್ನಾಗಿಸುವ ನಿಟ್ಟಿನಲ್ಲಿ ದೂರಗಾಮಿ ಯೋಜನೆ ರೂಪಿಸಲಾಗಿದೆ.

ನದಿಗಳ ಸಂಗಮ ಸ್ಥಳಕ್ಕೆ ತ್ಯಾಜ್ಯ ನೀರು ಹರಿಯದಂತೆ ಗಮನಹರಿಸಬೇಕಾಗಿದೆ. ಇದಕ್ಕಾಗಿ ದೇವಾಲಯದಲ್ಲಿ ಸರ್ವ ಸವಲತ್ತುಗಳನ್ನು ಒಳಗೊಂಡ ಅಭಿವೃದ್ಧಿ ಕಾರ್ಯಗಳನ್ನು ನಡೆಸಲು ಚಿಂತನೆ ನಡೆದಿದೆ. ಮನಸೋ ಇಚ್ಚೆ ನಿರ್ಮಾಣ ಕಾರ್ಯಗಳನ್ನು ಮಾಡುವುದನ್ನು ತಪ್ಪಿಸಲು ಯೋಜಿತವಾದ ಮಾಸ್ತಾರ್ ಪ್ಲ್ಯಾನ್ ರಚಿಸಲಾಗಿದೆ ಎಂದರು.

ದ.ಕ. ಜಿಲ್ಲೆಯ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯವೂ ಸೇರಿದಂತೆ ಮೂರು ದೇವಾಲಯಗಳ ಅಭಿವೃದ್ಧಿಗೆ ಮಂಗಳೂರು ಸಂಸದರು ಪ್ರಸಾದಮ್ ಯೋಜನೆಯಡಿ ಪ್ರಸ್ತಾವನೆ ಕಳುಹಿಸಿರುವ ವಿಚಾರದ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಸಂಸದರ ಈ ಪ್ರಯತ್ನ ಸ್ವಾಗತಾರ್ಹ. ಪುತ್ತೂರು ದೇವಳದ ಬಗ್ಗೆ ನಾನೀಗಾಗಲೆ ಕರ್ನಾಟಕ ರಾಜ್ಯದ ಮೂಲಕ ಪ್ರಸಾದಮ್ ಯೋಜನೆಯಡಿ ಪ್ರಸ್ತಾವನೆ ಕಳುಹಿಸಿದ್ದೆ. ಇದೀಗ ಸಂಸದರೂ ಕೂಡಾ ಪ್ರಸ್ತಾವನೆ ಕಳುಹಿಸಿದ್ದರಿಂದ ನಮ್ಮ ಪ್ರಯತ್ನ ಒಂದಷ್ಠು ವೇಗ ಪಡೆಯಲಿದೆ. ದೇವಾಲಯಗಳ ಅಭಿವೃದ್ಧಿಯ ವಿಚಾರದಲ್ಲಿ ದೊರಕುವ ಅಷ್ಠ ದಿಕ್ಕುಗಳ ಸಹಕಾರವನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸಲಾಗುವುದು ಎಂದರು.

ದೇವಾಲಯದ ಮುಂಭಾಗದಲ್ಲಿರುವ ಖಾಸಗಿ ಸ್ವಾಮ್ಯದ ಭೂಮಿಯನ್ನು ದೇವಾಲಯದ ಉದ್ದೇಶಕ್ಕೆ ಖರೀದಿಸುವ ಸಂಬಂಧ ಪದೇ ಪದೇ ಇಲಾಖಾ ಮಟ್ಟದಲ್ಲಿ ವಿಳಂಬವಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ದೇವಾಲಯದ ದುಡ್ಡಿನಿಂದ ದೇವಾಲಯಕ್ಕೆ ಭೂಮಿ ಖರೀದಿಸುವಲ್ಲಿ ಅಧಿಕಾರಿಗಳ ವಿಳಂಬ ನೀತಿಯ ಬಗ್ಗೆ ಸಕಾಲದಲ್ಲಿ ನನಗೆ ಮಾಹಿತಿ ರವಾನಿಸಬೇಕು. ಈ ವಿಚಾರದಲ್ಲಿ ದೇವಾಲಯದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರೇ ಹೊಣೆ ಹೊತ್ತು ತ್ವರಿತಗತಿಯ ಅನುಮೋದನೆಗೆ ಶ್ರಮಿಸಬೇಕೆಂದು ಸೂಚಿಸಿದರು.

ನೇತ್ರಾವತಿ ಸಮುದಾಯ ಭವನದ ಮೇಲೆ ೨ ಹಂತಸ್ತಿನ ಸಭಾಂಗಣವನ್ನು ನಿರ್ಮಿಸುವ ಬಗ್ಗೆ ಸರಕಾರದಿಂದ ಅನುಮೋದನೆ ಪಡೆಯಬೇಕೆಂದು ನಿರ್ದೇಶನ ನೀಡಿದ ಅವರು, ಈ ಬಗ್ಗೆ ಇಲಾಖಾತ್ಮಕವಾಗಿ ವ್ಯವಹರಿಸಲು ಡಾ. ರಾಜಾರಾಮ ಕೆ.ಬಿ. ಅವರಿಗೆ ಹೊಣೆ ನೀಡಿದರು.

ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ನಾಯಕ್, ಕಾರ್ಯನಿರ್ವಹಣಾಧಿಕಾರಿ ಚೆನ್ನಪ್ಪ ಗೌಡ, ಸಮಿತಿ ಸದಸ್ಯರಾದ ದೇವಿದಾಸ್ ರೈ, ಬಿ ಗೋಪಾಲಕೃಷ್ಣ ರೈ, ವೆಂಕಪ್ಪ್ಪ ಪೂಜಾರಿ, ಅರ್ತಿಲ ಕೃಷ್ಣ ರಾವ್, ಡಾ ರಮ್ಯ ರಾಜಾರಾಮ್ , ಅನಿತಾ ಕೇಶವ ಗೌಡ ಪ್ರಮುಖರಾದ ಮುರಳೀಧರ ರೈ ಮಠಂತಬೆಟ್ಟು, ರೂಪೇಶ್ ರೈ ಅಲಿಮಾರ, ರವೀಂದ್ರ ದರ್ಬೆ, ದೇವಳದ ವ್ಯವಸ್ಥಾಪಕ ವೆಂಕಟೇಶ್ ರಾವ್, ಪದ್ಮಾನಾಭ ಕುಲಾಲ್ ಮತ್ತಿತರರು ಇದ್ದರು. ಮಾಸ್ಟರ್ ಪ್ಲ್ಯಾನ್ ರಚಿಸಿದ ಸಂಸ್ಥೆಯ ಅಧಿಕಾರಿಗಳಾದ ಅನೂಪ್ ನಾಯಕ್, ಅಕ್ಷಯ್, ಪ್ರೀತಿಕಾ, ಸೌಮ್ಯ ಸಭೆಯಲ್ಲಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!