ಉಪ್ಪೂರು: ವಯೋವಂದನ ಆತಿಥ್ಯ ಗೃಹ ಕಚೇರಿ ಉದ್ಘಾಟನೆ

KannadaprabhaNewsNetwork |  
Published : Aug 18, 2026, 03:00 AM IST
16ವಂದನ | Kannada Prabha

ಸಾರಾಂಶ

ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆಯಿಂದ ನಿರ್ಮಾಣಗೊಳ್ಳುವ ‘ವಯೋವಂದನ ಆತಿಥ್ಯ ಗೃಹ’ ನಿವೇಶನ ಕಚೇರಿಯ ಉದ್ಘಾಟನೆಯನ್ನು ಡಾ. ಪಾಂಗಾಳ ಸೀತಾರಾಮ ನಾಯಕ್ ನೆರವೇರಿಸಿದರು.

ಉಡುಪಿ: ಇಲ್ಲಿನ ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆಯಿಂದ ನಿರ್ಮಾಣಗೊಳ್ಳುವ ‘ವಯೋವಂದನ ಆತಿಥ್ಯ ಗೃಹ’ ನಿವೇಶನ ಕಚೇರಿಯ ಉದ್ಘಾಟನೆಯನ್ನು ಡಾ. ಪಾಂಗಾಳ ಸೀತಾರಾಮ ನಾಯಕ್ ನೆರವೇರಿಸಿದರು.

ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆಯು ಜೀವನ ಸಂಧ್ಯಾ ಕಾಲಕ್ಕೆ ಅತಿ ಅಗತ್ಯವಾದ ವಯೋವಂದನ ಆತಿಥ್ಯ ಗೃಹ ನಿರ್ಮಾಣಕ್ಕೆ ಮುಂದಾಗಿರುವುದು ಶ್ಲಾಘನೀಯ. ಸಮಾಜದ ದಾನಿಗಳ ಸಹಕಾರದಿಂದ ಆದಷ್ಟು ಶೀಘ್ರ ಈ ಯೋಜನೆ ಲೋಕಾರ್ಪಣೆಗೊಳ್ಳಲಿ ಎಂದು ಅವರು ಶುಭ ಹಾರೈಸಿದರು.

ಈ ಸಂದರ್ಭ 80ನೇ ಸ್ವಾತಂತ್ರ್ಯ ದಿನಾಚರಣೆಯ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಿವಮೊಗ್ಗದ ಉದ್ಯಮಿ ಮಣೂರು ಪ್ರಕಾಶ್ ಪ್ರಭು, ಸಮಾಜ ಸಂಘಟನೆ ಮತ್ತು ಸಮಾಜಮುಖಿ ಕಾರ್ಯದ ಜೊತೆಗೆ ರಾಷ್ಟ್ರ ಮೊದಲು ಎನ್ನುವ ಕಲ್ಪನೆಯೊಂದಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿರುವುದು ಯುವ ಪೀಳಿಗೆಗೆ ಮೇಲ್ಪಂಕ್ತಿ ಹಾಕಿಕೊಟ್ಟಂತಾಗಿದೆ ಎಂದರು.

ವೇದಮೂರ್ತಿ ಹರಿಪ್ರಸಾದ್ ಶರ್ಮಾರ ಪೌರೋಹಿತ್ಯದಲ್ಲಿ ಶ್ರೀ ಲಕ್ಷ್ಮಿ ಪೂಜೆ ನೆರವೇರಿಸಲಾಯಿತು. ಮುಖ್ಯ ಅತಿಥಿಯಾಗಿ ಅಮ್ಮುಂಜೆ ಶ್ರೀ ದಾಮೋದರ ದೇವಸ್ಥಾನದ ಆಡಳಿತ ಮೊಕ್ತೇಸರ ವಿನೋದ್ ನಾಯಕ್ ಉಪಸ್ಥಿತರಿದ್ದರು.

ಈ ಸಂದರ್ಭ ದಾನಿಗಳಾದ ಮಂಗಳೂರಿನ ರಘುರಾಮ್ ಕಾಮತ್, ಚಂದ್ರಪ್ರಭಾ ಕಾಮತ್, ಉಡುಪಿಯ ಭಾರತ ವಿಕಾಸ ಪರಿಷತ್ ಪ್ರಮುಖರಾದ ವಸಂತ ಭಟ್ ದಂಪತಿ, ಮಣಿಪಾಲದ ಭಾರತ ವಿಕಾಸ್ ಟ್ರಸ್ಟಿನ ಕಾರ್ಯದರ್ಶಿ ಜಗದೀಶ್ ಪೈ, ಬ್ರಹ್ಮಾವರದ ಬಾಲಕೃಷ್ಣ ಪೈ, ಉಡುಪಿಯ ಡಾ. ರಾಮಚಂದ್ರ ಕಾಮತ್ ಕಟ್ಟಡ ನಿರ್ಮಾಣ ಪರಿಸರದಲ್ಲಿ ವೃಕ್ಷಾರೋಪಣೆಗೈದರು.

ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಸಂಚಾಲಕ ಆರ್. ವಿವೇಕಾನಂದ ಶೆಣೈ ಸ್ವಾಗತಿಸಿದರು. ಸಿಎ ಗೋಪಾಲಕೃಷ್ಣ ಭಟ್ ಆತಿಥ್ಯಗೃಹ ನಿರ್ಮಾಣದ ಮಹತ್ವ, ಸಮಾಜದ ಸಹಭಾಗಿತ್ವ ಬಗ್ಗೆ ಮಾತನಾಡಿದರು. ಕಟ್ಟಡ ಇಂಜಿನಿಯರ್ ಸುಧೀರ್ ಕಾಮತ್ ಕಟ್ಟಡ ನಿರ್ಮಾಣದ ರೂಪುರೇಷೆಗಳ ಮಾಹಿತಿ ನೀಡಿದರು. ವೇದಿಕೆ ಅಧ್ಯಕ್ಷ ಜಿ. ಸತೀಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಕಾರ್ಯಕ್ರಮ ನಿರೂಪಿಸಿದರು. ಕಾಪು ಹರೀಶ್ ನಾಯಕ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಚಿವ ಬಿ.ನಾಗೇಂದ್ರ ವಜಾಕ್ಕೆ ಆಗ್ರಹ
ರೋಗ ನಿರೋಧಕ ಶಕ್ತಿ ವೃದ್ಧಿಗೆ ಇಮ್ಯೂನಿಟಿ ಬೂಸ್ಟರ್ ಕಿಟ್‌ ಬಳಸಿ