ಕನ್ನಡಪ್ರಭ ವಾರ್ತೆ ಮಂಗಳೂರುಮಂಡ್ಯದಲ್ಲಿ ನಡೆದ ಹಿಂದು ಸಂಘಟನೆಯ ಸಮಾವೇಶದಲ್ಲಿ ಮಹಿಳೆಯರ ಬಗ್ಗೆ ತುಚ್ಛವಾಗಿ ಮಾತನಾಡಿದ ಆರ್ಎಸ್ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ವಿರುದ್ಧ ಜಾಮೀನು ರಹಿತ ಕೇಸು ದಾಖಲಾಗಿದ್ದು, ಅವರನ್ನು ಬಂಧಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಜಾತ್ಯತೀತ ಪಕ್ಷ ಸಂಘಟನೆಗಳ ಜಂಟಿ ವೇದಿಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
ರಾಜಕೀಯ ಲಾಭಕ್ಕಾಗಿ ಈ ರೀತಿ ಭಾಷಣ ಮಾಡಿ ಕೋಮು ದ್ವೇಷ ಹರಡುವ ಹುನ್ನಾರ ಇದರ ಹಿಂದೆ ಇದೆ. ಈಗಾಗಲೇ ಅನೇಕ ಕಡೆಗಳಲ್ಲಿ ಅವರ ವಿರುದ್ಧ ಕೇಸು ದಾಖಲಾಗಿದ್ದು, ಸರ್ಕಾರ ಕೂಡಲೇ ಡಾ.ಪ್ರಭಾಕರ ಭಟ್ ಅವರನ್ನು ಬಂಧಿಸಲು ಮುಂದಾಗಬೇಕು. ಅವರ ಬಂಧನದಿಂದ ಯಾವುದೇ ಶಾಂತಿಕದಡುವ ಸಾಧ್ಯತೆ ಇಲ್ಲ. ಇಡೀ ಸಮಾಜ ಸರ್ಕಾರದ ಬೆಂಬಲಕ್ಕೆ ಇರಲಿದೆ ಎಂಬ ವಿಶ್ವಾಸ ಇದೆ ಎಂದರು.
ಪ್ರಚೋದನಾಕಾರಿ ಭಾಷಣ ಎಂಬುದು ಈಗ ಚಾಳಿಯಾಗಿದ್ದು, ಅಂತಹ ಸಂದರ್ಭದಲ್ಲಿ ಸ್ವಯಂ ಆಗಿ ಕೇಸು ದಾಖಲಿಸಿ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಕೂಡ ನಿರ್ದೇಶನ ನೀಡಿದೆ. ಡಾ.ಪ್ರಭಾಕರ ಭಟ್ ಅವರು ಮುಸ್ಲಿಂ ಮಾತ್ರವಲ್ಲ ಹಿಂದು, ಕ್ರೈಸ್ತರನ್ನೂ ಅಪಮಾನಿಸಿದ್ದಾರೆ. ಈ ಎಲ್ಲ ವಿಚಾರಗಳಲ್ಲಿ ಸಿಎಂ ಬಳಿಗೆ ನಿಯೋಗ ತೆರಳಲಿದ್ದೇವೆ ಎಂದರು.ವೇದಿಕೆ ಪ್ರಧಾನ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮಾತನಾಡಿ, ಡಾ.ಪ್ರಭಾಕರ ಭಟ್ ಅವರು ಅವಹೇಳನಕಾರಿಯಾಗಿ ಮಾತನಾಡಿಲ್ಲ, ಅದನ್ನು ತಿರುಚಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಹೇಳಿದ್ದಾರೆ. ತಿರುಚಿದ್ದು ಏನು ಎಂಬುದನ್ನು ನಳಿನ್ ಕುಮಾರ್ ಸ್ಪಷ್ಟಪಡಿಸಲಿ. ಅಲ್ಲದೆ, ಈ ಬಗ್ಗೆ ಬಿಜೆಪಿ ನಿಲುವು ಏನು ಎಂಬುದನ್ನೂ ತಿಳಿಸಲಿ ಎಂದರು.
ಕಾಂಗ್ರೆಸ್ ಮುಖಂಡ ಎಂ.ಜಿ.ಹೆಗಡೆ ಮಾತನಾಡಿ, ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಇದೊಂದು ಬಿಜೆಪಿ ಹಾಗೂ ಸಂಘಪರಿವಾರದ ಟೋಲ್ಕಿಟ್ ಆಗಿದೆ. ಇಂತಹ ವಿದ್ಯಮಾನಗಳು ಇನ್ನೂ ನಡೆಯುವ ಸಾಧ್ಯತೆ ಇದೆ. ಎಲ್ಲ ಸಮುದಾಯಗಳೂ ಅಹಿತಕರ ಘಟನೆಗೆ ಆಸ್ಪದ ನೀಡದೆ ಜಾಗೃತವಾಗಿರಬೇಕು. ಕಲ್ಲಡ್ಕ ಶಾಲೆಗೆ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕರೆಸಿ ಟ್ರಂಪ್ ಕಾರ್ಡ್ ಆಗಿ ಬಳಸುತ್ತಿದ್ದಾರೆ. ಹಾಗಾಗಿ ಡಾ.ಪ್ರಭಾಕರ ಭಟ್ಟರನ್ನು ಬಂಧಿಸುವುದೇ ಪರಿಹಾರ ಎಂದರು.