ಉರೂಸ್: ನಾಗಲಾವಿ ನಿಲ್ದಾಣದಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ

KannadaprabhaNewsNetwork |  
Published : Sep 20, 2024, 01:31 AM IST
14446 | Kannada Prabha

ಸಾರಾಂಶ

ನಾಗಲಾವಿಯ ದರ್ಗಾ ಹಜರತ್ ಷರೀಫ್ ಉರೂಸ್ ಕಾರ್ಯಕ್ರಮ ಆಗಮಿಸುವ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ನೈಋತ್ಯ ರೈಲ್ವೆ ಮೂರು ದಿನ ತಾತ್ಕಾಲಿಕ ರೈಲು ನಿಲುಗಡೆಗೆ ಅವಕಾಶ ಕಲ್ಪಿಸಿದೆ.

ಹುಬ್ಬಳ್ಳಿ:

ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಲಾವಿಯ ದರ್ಗಾ ಹಜರತ್ ಷರೀಫ್ ಉರೂಸ್ ಕಾರ್ಯಕ್ರಮ ಅ. 14ರಿಂದ 16ರ ವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿವಿಧ ಸ್ಥಳಗಳಿಂದ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ನಾಗಲಾವಿ ಹಾಲ್ಟ್ ನಿಲ್ದಾಣದಲ್ಲಿ ಹಾದು ಹೋಗುವ 8 ರೈಲುಗಳಿಗೆ 2 ನಿಮಿಷ ತಾತ್ಕಾಲಿಕ ನಿಲುಗಡೆಗೆ ನೈಋತ್ಯ ರೈಲ್ವೆ ವ್ಯವಸ್ಥೆ ಕಲ್ಪಿಸಿದೆ.

ಈ ಕುರಿತು ಪ್ರಕಟಣೆ ನೀಡಿರುವ ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಂಜುನಾಥ ಕನಮಡಿ, ರೈಲು ಸಂಖ್ಯೆ 17415 ತಿರುಪತಿ-ಕೊಲ್ಹಾಪುರ ಹರಿಪ್ರಿಯಾ ಎಕ್ಸ್‌ಪ್ರೆಸ್ ರೈಲು ನಾಗಲಾವಿ ಹಾಲ್ಟ್ ನಿಲ್ದಾಣಕ್ಕೆ ಬೆಳಗ್ಗೆ 9.14ಕ್ಕೆ ಆಗಮಿಸಿ 9.16ಕ್ಕೆ ಹೊರಡಲಿದೆ. ರೈಲು ಸಂಖ್ಯೆ 17332 ಎಸ್ಎಸ್ಎಸ್ ಹುಬ್ಬಳ್ಳಿ-ಮಿರಜ್ ಎಕ್ಸ್‌ಪ್ರೆಸ್ ರೈಲು ನಾಗಲಾವಿ ಹಾಲ್ಟ್ ನಿಲ್ದಾಣಕ್ಕೆ ಬೆಳಗ್ಗೆ 11.40ಕ್ಕೆ ಆಗಮಿಸಿ 11.42ಕ್ಕೆ ಹೊರಡಲಿದೆ. ರೈಲು ಸಂಖ್ಯೆ 17317 ಎಸ್ಎಸ್ಎಸ್ ಹುಬ್ಬಳ್ಳಿ-ದಾದರ್ ಎಕ್ಸ್‌ಪ್ರೆಸ್ ರೈಲು ನಾಗಲಾವಿ ಹಾಲ್ಟ್ ನಿಲ್ದಾಣಕ್ಕೆ ಸಂಜೆ 4.18ಕ್ಕೆ ಆಗಮಿಸಿ 4.20ಕ್ಕೆ ಹೊರಡಲಿದೆ. ರೈಲು ಸಂಖ್ಯೆ 17326 ಮೈಸೂರು-ಬೆಳಗಾವಿ ಎಕ್ಸ್‌ಪ್ರೆಸ್ ರೈಲು ನಾಗಲಾವಿ ಹಾಲ್ಟ್ ನಿಲ್ದಾಣಕ್ಕೆ ಸಂಜೆ 6.40ಕ್ಕೆ ಆಗಮಿಸಿ 6.42ಕ್ಕೆ ಹೊರಡಲಿದೆ. ರೈಲು ಸಂಖ್ಯೆ 17416 ಕೊಲ್ಹಾಪುರ- ತಿರುಪತಿ ಹರಿಪ್ರಿಯಾ ಎಕ್ಸ್‌ಪ್ರೆಸ್ ರೈಲು ನಾಗಲಾವಿ ಹಾಲ್ಟ್ ನಿಲ್ದಾಣಕ್ಕೆ ಸಂಜೆ 5.55ಕ್ಕೆ ಆಗಮಿಸಿ 5.57ಕ್ಕೆ ಹೊರಡಲಿದೆ. ರೈಲು ಸಂಖ್ಯೆ 17331 ಮಿರಜ್- ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್ ರೈಲು ನಾಗಲಾವಿ ಹಾಲ್ಟ್ ನಿಲ್ದಾಣಕ್ಕೆ ಮಧ್ಯಾಹ್ನ 12.25ಕ್ಕೆ ಆಗಮಿಸಿ, 12.27ಕ್ಕೆ ಹೊರಡಲಿದೆ. ರೈಲು ಸಂಖ್ಯೆ 17318 ದಾದರ್- ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್ ರೈಲು ನಾಗಲಾವಿ ಹಾಲ್ಟ್ ನಿಲ್ದಾಣಕ್ಕೆ ಬೆಳಗ್ಗೆ 10.13ಕ್ಕೆ ಆಗಮಿಸಿ 10.15ಕ್ಕೆ ಹೊರಡಲಿದೆ. ರೈಲು ಸಂಖ್ಯೆ 17325 ಬೆಳಗಾವಿ- ಮೈಸೂರು ಎಕ್ಸ್‌ಪ್ರೆಸ್ ರೈಲು ನಾಗಲಾವಿ ಹಾಲ್ಟ್ ನಿಲ್ದಾಣಕ್ಕೆ ಬೆಳಗ್ಗೆ 7.40ಕ್ಕೆ ಬಂದು 7.42ಕ್ಕೆ ಹೊರಡಲಿದೆ.

ಈ ರೈಲುಗಳು ತಮ್ಮ ಮೂಲ ನಿಲ್ದಾಣದಿಂದ ಪ್ರಾರಂಭಿಸುವ ಪ್ರಯಾಣದಿಂದ (ಅ. 14ರಿಂದ 16ರ ವರೆಗೆ) ಈ ತಾತ್ಕಾಲಿಕ ನಿಲುಗಡೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ