ಕನ್ನಡಪ್ರಭ ವಾರ್ತೆ ಮೂಡುಬಿದಿರೆ
9 ರಂದು ಅಸರ್ ನಮಾಝ್ ಬಳಿಕ ಮಸೀದಿ ಕಮಿಟಿ ಅಧ್ಯಕ್ಷ ಅಬ್ದುಲ್ ಮಜೀದ್ ಧ್ವಜಾರೋಹಣ ನೆರವೇರಿಸುವರು. ಮಗರಿಬ್ ನಮಾಝ್ ಬಳಿಕ ನಡೆಯಲಿರುವ ಉದ್ಘಾಟನಾ ಸಮಾರಂಭ ಕಾಜೂರು ಅಸ್ಸಯ್ಯದ್ ಝೈನುಲ್ ಆಬಿದೀನ್ ಜಮಾಲುಲ್ಲೈಲಿ ತಂಙಳ್ ನೇತೃತ್ವದಲ್ಲಿ ನಡೆಯಲಿದೆ.
ದ.ಕ.ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಉದ್ಘಾಟಿಸಲಿದ್ದಾರೆ. ಮಸೀದಿಯ ಖತೀಬ ಉಮರ್ ಸ ಅದಿ ಅಲ್ ಅಫ್ಳಲಿ ಅವರಿಂದ ಮುಖ್ಯ ಪ್ರಭಾಷಣ ನಡೆಯಲಿದೆ.10 ರಂದು ಅಸರ್ ನಮಾಝ್ ಬಳಿಕ ಕಾಜೂರು ತಂಙಳ್ ನೇತೃತ್ವದಲ್ಲಿ ವಾರ್ಷಿಕ ಸ್ವಲಾತ್ ಮಜ್ಲಿಸ್ ನಡೆಯಲಿದೆ.
ಸಂಜೆ 5.30 ಕ್ಕೆ ಮಸೀದಿ ಕಮಿಟಿ ಅಧ್ಯಕ್ಷ ಅಬ್ದುಲ್ ಮಜೀದ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸರ್ವಧರ್ಮ ಸೌಹಾರ್ದ ಕೂಟವನ್ನು ಆಳ್ವಾಸ್ ಸಂಸ್ಥೆಗಳ ಮುಖ್ಯಸ್ಥ ಡಾ.ಎಂಮೋಹನ ಆಳ್ವ ಉದ್ಘಾಟಿಸಲಿದ್ದಾರೆ.
ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಐ.ರಾಘವೇಂದ್ರ ಅಸ್ರಣ್ಣ,ಹೊಸಬೆಟ್ಟು ಚರ್ಚ್ ಧರ್ಮಗುರುಗಳಾದ ರೆ.ಫಾ.ಗ್ರೆಗರಿ ಡಿಸೋಜ, ಯು.ಟಿ.ಖಾದರ್, ಜಮೀರ್ ಅಹ್ಮದ್, ದಿನೇಶ್ ಗುಂಡೂರಾವ್, ಕ್ಯಾ.ಬ್ರಿಜೇಶ್ ಚೌಟ, ಉಮಾನಾಥ ಕೋಟ್ಯಾನ್, ಐವನ್ ಡಿಸೋಜ, ಕೆ.ಅಭಯಚಂದ್ರ, ರಮಾನಾಥ ರೈ, ಮಿಥುನ್ ರೈ, ಪದ್ಮರಾಜ್ ಪೂಜಾರಿ, ಕೆ.ಪಿ.ಸುಚರಿತ ಶೆಟ್ಟಿ ಮುಂತಾದ ರಾಜಕೀಯ ಮುಖಂಡರು, ಸಾಮಾಜಿಕ ನೇತಾರರು ಈ ಸಂದರ್ಭದಲ್ಲಿ ಭಾಗವಹಿಸಲಿದ್ದಾರೆ ಎಂದದರು.ಅದೇ ದಿನ ಮಗರಿಬ್ ನಮಾಝ್ ಬಳಿಕ ಕಾಜೂರು ತಂಙಳ್ ನೇತೃತ್ವದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು ಅಂತಾರಾಷ್ಟ್ರೀಯ ಖ್ಯಾತಿಯ ವಾಗ್ಮಿ ಹಾಫಿಳ್ ಸಿರಾಜುದ್ದೀನ್ ಖಾಸಿಮಿ ಪತ್ತನಾಪುರಂ ಅವರಿಂದ ಮುಖ್ಯ ಪ್ರಭಾಷಣ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಮಸೀದಿ ಕಮಿಟಿಯ ಕಾರ್ಯದರ್ಶಿ ಮುಹಮ್ಮದ್ ಇಮ್ರಾನ್, ಕೋಶಾಧಿಕಾರಿ ಮುಹಮ್ಮದ್ ಇಕ್ಬಾಲ್, ಸದಸ್ಯರಾದ ಮುಹಮ್ಮದ್ ಆಸಿಫ್ ಹಾಗೂ ಇಸ್ಮಾಯಿಲ್ ಹಾಜರಿದ್ದರು.