ಎಮ್ಮೆಮಾಡುವಿನ 2026ರ ಸಾಲಿನ ಉರುಸ್ ಕಾರ್ಯಕ್ರಮ ಏ. 17ರಿಂದ 24ರ ವರೆಗೆ ನಡೆಯಲಿದೆ.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಇತಿಹಾಸ ಪ್ರಸಿದ್ಧ ಎಮ್ಮೆಮಾಡು ವಿನ 2026ರ ಸಾಲಿನ ಉರುಸ್ ಕಾರ್ಯಕ್ರಮ ಏಪ್ರಿಲ್ 17ರಿಂದ 24ರ ವರೆಗೆ ನಡೆಯಲಿದೆ. ಈ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಯನ್ನು ಮರ್ಕಜ್ ಸಂಸ್ಥೆಯಲ್ಲಿ ಇಂಡಿಯನ್ ಗ್ರಾಂಡ್ ಮುಫ್ತಿ ಹಾಗೂ ಕೊಡಗು ಜಿಲ್ಲಾ ಖಾಜಿಗಳಾದ ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯರ್ ನೆರವೇರಿಸಿದರು.
ಈ ಸಂದರ್ಭ ಜಮಾಯತ್ ಅಧ್ಯಕ್ಷರಾದ ಹುಸೇನ್ ಸಖಾಫಿ, ಮಾಜಿ ಅಧ್ಯಕ್ಷರಾದ ಅಬೂಬಕರ್ , ಮಜೀದ್ ಕೆ. ಎಸ್, ಹನಿಫಾ, ಅಶ್ರಫ್ ಸಿ.ಎಂ, ಹ್ಯಾರಿಸ್, ಯೂಸುಫ್ ಉಪಸ್ಥಿತರಿದ್ದರು.
ಮಾದಾಪುರ ಗ್ರಾ.ಪಂ. ನೂತನ ಅಭಿವೃದ್ಧಿಅಧಿಕಾರಿಯಾಗಿ ರವಿ ಅಧಿಕಾರ ಸ್ವೀಕಾರ
ಸುಂಟಿಕೊಪ್ಪ: ಮಾದಾಪುರ ಗ್ರಾಮ ಪಂಚಾಯಿತಿಯ ನೂತನ ಅಭಿವೃದ್ಧಿ ಅಧಿಕಾರಿಯಾಗಿ ರವಿ ಅಧಿಕಾರ ವಹಿಸಿಕೊಂಡರು.ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿದ್ದ ರವಿ ಅವರನ್ನು ವರ್ಗಾವಣೆಗೊಳಿಸಿ ಮಾದಾಪುರ ಗ್ರಾಮ ಪಂಚಾಯಿತಿಯಲ್ಲಿ ಹೆಚ್ಚುವರಿ ಪಿಡಿಓ ಆಗಿದ್ದ ಗೂಳಪ್ಪ ಕೂತಿನ ಅವರಿಂದ ರವಿ ಅಧಿಕಾರ ವಹಿಸಿಕೊಂಡಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.