ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿ: ಡಾ. ಸಂಜೀವ್ ಕುಮಾರ್

KannadaprabhaNewsNetwork |  
Published : Jun 09, 2025, 04:29 AM IST

ಸಾರಾಂಶ

ಇಂದು ನಾವು ಸಾಕಷ್ಟು ಪ್ರಮಾಣದಲ್ಲಿ ಪ್ಲಾಸ್ಟಿಕ್ ಕೈ ಚೀಲಗಳು, ಪ್ಲಾಸ್ಟಿಕ್ ಬಾಟೆಲ್‌ಗಳು ಸೇರಿದಂತೆ ಹಲವು ವಸ್ತುಗಳನ್ನು ಬಳಸಿ ಎಸೆಯುತ್ತಿದ್ದೇವೆ, ಇದರಿಂದ ಮಾಲಿನ್ಯ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ತಂತ್ರಜ್ಞಾನದ ಮೂಲಕ ಹಲವು ರೀತಿಯ ಮಣ್ಣಲ್ಲಿ ಕರಗುವ ವಸ್ತುಗಳನ್ನು ಸಂಶೋಧಿಸಿದ್ದಾರೆ. ಇಂತಹ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವುದರ ಮೂಲಕ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಪ್ರಯತ್ಸ ಮಾಡೋಣ.

ತುಮಕೂರು: ಅಪಾರ ಅರಣ್ಯಗಳ ನಾಶದಿಂದ ಇಂದು ಭೂಮಿಯ ಉಷ್ಣಾಂಶ ಹೆಚ್ಚಾಗಿದ್ದು, ಜೀವಜಂತುಗಳು ನಲುಗುತ್ತಿವೆ. ಇದರಿಂದ ಮುಕ್ತಿ ದೊರೆಯಬೇಕೆಂದರೆ ಹೆಚ್ಚಾಗಿ ಗಿಡಗಳನ್ನು ನೆಟ್ಟಾಗ ಮಾತ್ರ ಜೀವ ಸಂಕುಲ ಉಳಿಯುತ್ತದೆ ಎಂದು ಸ್ಕೂಲ್ ಆಪ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಸಂಜೀವ್ ಕುಮಾರ್ ತಿಳಿಸಿದರು.

ನಗರದ ಹೊರವಲಯದ ಕ್ಯಾತ್ಸಂದ್ರದಲ್ಲಿರುವ ಶ್ರೀ ಸಿದ್ಧಾರ್ಥ ಸ್ಕೂಲ್ ಆಫ್ ಇಂಜಿನಿಯರಿಂಗ್ ಕಾಲೇಜು ಕ್ಯಾಂಪಸ್ ನಲ್ಲಿ ವಿಶ್ವ ಪರಿಸರದ ದಿನದ ಪ್ರಯುಕ್ತ ಗಿಡನೆಟ್ಟು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಂದು ನಾವು ಸಾಕಷ್ಟು ಪ್ರಮಾಣದಲ್ಲಿ ಪ್ಲಾಸ್ಟಿಕ್ ಕೈ ಚೀಲಗಳು, ಪ್ಲಾಸ್ಟಿಕ್ ಬಾಟೆಲ್‌ಗಳು ಸೇರಿದಂತೆ ಹಲವು ವಸ್ತುಗಳನ್ನು ಬಳಸಿ ಎಸೆಯುತ್ತಿದ್ದೇವೆ, ಇದರಿಂದ ಮಾಲಿನ್ಯ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ತಂತ್ರಜ್ಞಾನದ ಮೂಲಕ ಹಲವು ರೀತಿಯ ಮಣ್ಣಲ್ಲಿ ಕರಗುವ ವಸ್ತುಗಳನ್ನು ಸಂಶೋಧಿಸಿದ್ದಾರೆ. ಇಂತಹ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವುದರ ಮೂಲಕ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಪ್ರಯತ್ಸ ಮಾಡೋಣ ಎಂದರು.

ಪ್ರತಿಯೊಬ್ಬರೂ ಸಸಿಗಳನ್ನು ನೆಟ್ಟು ಪೋಷಿಸಿ ಪರಿಸರ ಸಂರಕ್ಷಣೆಯನ್ನು ಮಾಡೋಣ ಎಂದು ಕರೆ ಕೊಟ್ಟರು.

ಕಾಲೇಜಿನ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ನೂರಾರು ಗಿಡಗಳನ್ನು ನೆಟ್ಟು ನೀರೆರೆಯುವ ಮೂಲಕ ಪರಿಸರ ದಿನಾಚಾರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು, ಪ್ರಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ರದ್ದು ಮಾಡಿ, ನರೇಗಾ ಮರುಸ್ಥಾಪಿಸಿ: ಸಿದ್ದು
ಸಚಿವ ತಿಮ್ಮಾಪುರ ರಾಜೀನಾಮೆಗೆ ಅಹೋರಾತ್ರಿ ಧರಣಿ