ಕನ್ನಡಪ್ರಭ ವಾರ್ತೆ ಕೋಲಾರಹಾಸ್ಟೆಲ್ಗಳಲ್ಲಿ ಪ್ರಧಾನವಾಗಿ ಸ್ವಚ್ಛತೆ ಕಾಪಾಡಬೇಕು. ಅಕ್ಕಿ, ಎಣ್ಣೆ ಹಾಗೂ ತರಕಾರಿಗಳ ಗುಣಮಟ್ಟ ಪರಿಶೀಲಿಸಿ ಅಡುಗೆಗೆ ಬಳಸುವುದರಿಂದ ಉತ್ತವಾದ ಆರೋಗ್ಯ ಕಾಪಾಡಬಹುದು ಎಂದು ಎಡಿಸಿ ಮಂಗಳಾ ಹೇಳಿದರು.ನಗರದ ಜಿಲ್ಲಾಧಿಕಾರಿ ಕಛೇರಿಯ ಆಡಿಟೋರಿಯಂನಲ್ಲಿ ವಸತಿ ನಿಲಯ ಮತ್ತು ವಸತಿ ಶಾಲೆಗಳ ಅಧಿಕಾರಿ ಮತ್ತು ಸಿಬ್ಬಂದಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಹಾಗೂ ತಂಬಾಕು ನಿಯಂತ್ರಣ ಕಾಯ್ದೆಯ ಬಗ್ಗೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಸಿಬ್ಬಂದಿ ಸ್ವಚ್ಛ ಉಡುಗೆ ಧರಿಸಿ
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸನ್ ಮಾತನಾಡಿ, ಕರ್ನಾಟಕದಲ್ಲಿಯೇ ಪ್ರಪ್ರಥಮವಾಗಿ ವಸತಿ ಶಾಲೆಗಳನ್ನು ಹೊಂದಿರುವ ಮೂರು ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮ ರೂಪಿಸಲಾಗಿದೆ. ಹಾಸ್ಟೆಲ್ಗಳ ಯಾವುದೇ ಸಮಸ್ಯೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಿಳಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ತಮ್ಮ-ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದರು. ಹಾಸ್ಟೆಲ್ಗಳಲ್ಲಿ ಶೌಚಾಲಯಗಳ ಅಸ್ವಚ್ಛತೆ, ಮಕ್ಕಳು ತಂಬಾಕು ಸೇವೆನೆಯಂತಹ ಘಟನೆಗಳು ಮುರುಕಳಿಸದಂತೆ ಎಚ್ಚರ ವಹಿಸಬೇಕು. ಹಾಸ್ಟೆಲ್ಗಳಲ್ಲಿ ಮತ್ತು ವಸತಿ ಶಾಲೆಗಳಲ್ಲಿ ಹೆಚ್ಚಿನ ಅಂಕ ಪಡೆದವರಿಗೆ ಪ್ರೋತ್ಸಾಹಕವಾಗಿ ಬಹುಮಾನಗಳನ್ನು ನೀಡಲಾಗುತ್ತದೆ.
ಈ ವರ್ಷ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಾದ ವಸಂತ ಕುಮಾರ್ ಆರ್.ಸಿರಿಗೆ ೪೫ ಸಾವಿರ ರೂಗಳ ನಗದು ಹಾಗೂ ಮೀತನ್ಗೆ ೫ ಸಾವಿರ ರು.ಗಳ ಬಹುಮಾನ ನೀಡಲಾಗಿದೆ. ಉತ್ತಮವಾದ ಸಾಧನೆಗಳನ್ನು ಮುಂದೆ ಮಾಡುವುದರಿಂದ ತಂದೆ-ತಾಯಿಯರಿಗೆ, ಶಾಲಾ-ಕಾಲೇಜುಗಳಿಗೆ ಹಾಗೂ ಹಾಸ್ಟೆಲ್ಗಳಿಗೆ ಉತ್ತಮ ಹೆಸರು ಬರುತ್ತದೆ ಎಂದರು.ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿ ಮೈಲಾರಪ್ಪ, ಉಪನ್ಯಾಸಕ ಮಹಮ್ಮದ್, ಜಿಲ್ಲಾ ಸುರಕ್ಷತಾ ಅಧಿಕಾರಿ ರಾಕೇಶ್ ಕುಮಾರ್ ಇದ್ದರು.