ಕನ್ನಡಪ್ರಭವಾರ್ತೆ, ಹಾಸನ
ನಂತರ ಎಂಸಿಇ ಕಾಲೇಜು ಪ್ರೊಫೆಸರ್ ಡಾ. ಉಮಾ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಬದುಕಿನ ಅವಧಿಯಲ್ಲೇ ಪ್ರಾಯೋಗಿಕ ಜ್ಞಾನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ, ಕಲಿತ ವಿಷಯಗಳನ್ನು ನೈಜ ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಉಪಯುಕ್ತವಾಗುವಂತಹ ಹೊಸ ಆವಿಷ್ಕಾರಗಳು ಮತ್ತು ಪರಿಹಾರಗಳನ್ನು ರೂಪಿಸುವ ಅಗತ್ಯವಿದೆ ಎಂದು ಹೇಳಿದರು.
ಇಂದಿನ ಜಗತ್ತಿನಲ್ಲಿ ತಂತ್ರಜ್ಞಾನ ಅತ್ಯಂತ ವೇಗವಾಗಿ ಅಭಿವೃದ್ಧಿಯಾಗುತ್ತಿದೆ. ಕೃತಕ ಬುದ್ಧಿಮತ್ತೆ, ರೋಬೋಟಿಕ್ಸ್, ಎಂಬೆಡೆಡ್ ವ್ಯವಸ್ಥೆಗಳು ಸೇರಿದಂತೆ ಹಲವು ಹೊಸ ತಂತ್ರಜ್ಞಾನಗಳು ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಬದಲಾವಣೆಗಳನ್ನು ತರುತ್ತಿವೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಾಂತ್ರಿಕ ಜ್ಞಾನವನ್ನು ಆಳವಾಗಿ ಪಡೆದುಕೊಳ್ಳುವುದರ ಜೊತೆಗೆ ಅದರ ಸಾಮಾಜಿಕ ಪರಿಣಾಮಗಳನ್ನು ಅರ್ಥಮಾಡಿಕೊಳ್ಳಬೇಕು. ತಂತ್ರಜ್ಞಾನವನ್ನು ಜನರ ಬದುಕನ್ನು ಸುಲಭಗೊಳಿಸಲು ಹಾಗೂ ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಬಳಸಬೇಕು ಎಂದು ಹೇಳಿದರು.ಒಬ್ಬ ವಿದ್ಯಾರ್ಥಿ ತನ್ನ ಜ್ಞಾನವನ್ನು ತನ್ನ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಬಳಸಿಕೊಳ್ಳದೆ, ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಿದಾಗ ಶಿಕ್ಷಣದ ನಿಜವಾದ ಉದ್ದೇಶ ಸಾರ್ಥಕವಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರಯೋಗ ಮಾಡಲು, ತಪ್ಪುಗಳಿಂದ ಕಲಿಯಲು ಮತ್ತು ಹೊಸ ಆಲೋಚನೆಗಳನ್ನು ರೂಪಿಸಲು ಅವಕಾಶ ನೀಡಿದಾಗ ಮಾತ್ರ ಅವರು ಭವಿಷ್ಯದ ಸವಾಲುಗಳನ್ನು ಎದುರಿಸಲು ಸಜ್ಜಾಗುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸಿದ ಮತ್ತು ಶಿಕ್ಷಕರಾಗಿ ಕೆಲಸ ಮಾಡಿದವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅತಿಥ್ಯವನ್ನು ವಲಯ ಅಧ್ಯಕ್ಷ ಎಚ್. ರಮೇಶ್, ಬಿ.ವಿ. ನಟೇಶ್ ಕುಮಾರ್, ನರಸಿಂಹೇಗೌಡ, ಎಂ.ಬಿ. ಮಂಜುನಾಥ್ ವಹಿಸಿದ್ದರು.