ಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರುಕೃಷಿ ಕ್ಷೇತ್ರದಲ್ಲಿ ಆಧುನಿಕ ಪದ್ಧತಿ ಬಳಸಿ ಉತ್ತಮ ಇಳುವರಿ ಪಡೆಯಬೇಕೆಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.
ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಡಿ, ರೈತರು ಭೂಮಿಯ ಫಲವತ್ತತೆ ಕಾಪಾಡುವುದು ಮುಖ್ಯವಾಗಿದೆ. ನೀರನ್ನು ಸರಿಯಾದ ಪ್ರಮಾಣದಲ್ಲಿ ಬಳಕೆ ಮಾಡಿ, ಹೆಚ್ಚು ನೀರು ಬಳಕೆ ಮಾಡಿದರೆ ಹೆಚ್ಚು ಇಳುವರಿ ಬರುವುದಿಲ್ಲ. ಅತಿಯಾದ ನೀರಿನಿಂದ ಭೂಮಿಯ ಫಲವತ್ತತೆ ಕಳೆದುಕೊಳ್ಳುತ್ತದೆ. ನಾವು ಮುಂದಿನ ಪೀಳಿಗೆಗೆ ಉತ್ತಮವಾದ ಭೂಮಿ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಸಲಹೆ ನೀಡಿದರು.
180 ರೈತರಿಗೆ ಸಬ್ಸಿಡಿ ಕೃಷಿ ಸಲಕರಣೆಗಳನ್ನು ವಿತರಿಸಿದರು. ಬೆಳಗಾವಿ ವಿಭಾಗದ ಕೃಷಿ ಉಪ ನಿರ್ದೇಶಕ ಎಸ್ ಬಿ ಕೊಂಗವಾಡ, ಗುರುರಾಜ ಕುಲಕರ್ಣಿ, ಸುನಿಲ ಘಿವಾರಿ ಸಂಗನಗೌಡ ಪಾಟೀಲ, ಅಶ್ಪಾಕ್ ಹವಾಲ್ದಾರ್, ಮುದುಕಪ್ಪ ಮರಡಿ, ಪರಮಗೌಡ ಪಾಟೀಲ, ರಂಗನಾಥ ಇನಾಮದಾರ ಇತರರು ಉಪಸ್ಥಿತರಿದ್ದರು. ಸಹಾಯಕ ನಿರ್ದೇಶಕ ಬಸವರಾಜ ದಳವಾಯಿ ಸ್ವಾಗತಿಸಿದರು. ಕೃಷಿ ಅಧಿಕಾರಿ ಮಂಜುನಾಥ ಕೆಂಚನವರ ನಿರೂಪಿಸಿದರು.