ಕನ್ನಡಪ್ರಭ ವಾರ್ತೆ ಗದಗ
ನಗರದ ಡಾ. ಬಿ .ಆರ್. ಅಂಬೇಡ್ಕರ್ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದ ಸರಾಸರಿ ಫಲಿತಾಂಶ ಶೇ.93 ರಷ್ಟಿದ್ದರೆ, ಗದಗ ಜಿಲ್ಲೆ ಶೇ.94ರಷ್ಟು ಫಲಿತಾಂಶ ದಾಖಲಿಸಿ ರಾಜ್ಯದ ಸರಾಸರಿಯನ್ನು ಮೀರಿರುವುದು ಹೆಮ್ಮೆಯ ಸಂಗತಿ. ಇದಕ್ಕೆ ಜಿಲ್ಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ನಿರಂತರ ಪರಿಶ್ರಮ ಕಾರಣವಾಗಿದೆ ಎಂದರು.ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜೀವನ, ಜ್ಞಾನ ಮತ್ತು ಶೈಕ್ಷಣಿಕ ಸೇವೆ ಪ್ರತಿಯೊಬ್ಬ ಶಿಕ್ಷಕರಿಗೂ ಪ್ರೇರಣೆಯಾಗಿದೆ. ಉಪನ್ಯಾಸಕರಾಗಿ ಸೇವೆ ಆರಂಭಿಸಿ, ವಿಶ್ವವಿದ್ಯಾಲಯದ ಕುಲಪತಿ, ಉಪರಾಷ್ಟ್ರಪತಿ ಹಾಗೂ ರಾಷ್ಟ್ರಪತಿ ಹುದ್ದೆಗೇರಿದ ಅವರ ಜ್ಞಾನ, ಸರಳತೆ ಹಾಗೂ ನಿರಂತರ ಕಲಿಕೆಯ ಮನೋಭಾವವನ್ನು ಶಿಕ್ಷಕರು ತಮ್ಮ ವೃತ್ತಿಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ನಡೆಯುವ ಆನ್ಲೈನ್ ಹಾಗೂ ಡಿಜಿಟಲ್ ಕಾರ್ಯಗಳನ್ನು ಸುಗಮಗೊಳಿಸಲು ಅಗತ್ಯ ಸಹಾಯಕ ಸಿಬ್ಬಂದಿಯನ್ನು ಒದಗಿಸುವ ಕುರಿತು ಸರ್ಕಾರ ಗಮನ ಹರಿಸಬೇಕು. ಶಾಲೆಗಳಲ್ಲಿ ಕಂಪ್ಯೂಟರ್ ಅಥವಾ ಡೇಟಾ ಎಂಟ್ರಿ ಆಪರೇಟರ್ಗಳನ್ನು ಒದಗಿಸುವುದರಿಂದ ಡಿಜಿಟಲ್ ಕಾರ್ಯಗಳು ವ್ಯವಸ್ಥಿತವಾಗಿ ನಡೆಯುವುದರ ಜೊತೆಗೆ, ಶಿಕ್ಷಕರು ವಿದ್ಯಾರ್ಥಿಗಳ ಬೋಧನೆ, ಮಾರ್ಗದರ್ಶನ ಹಾಗೂ ಕಲಿಕಾ ಚಟುವಟಿಕೆಗಳಿಗೆ ಹೆಚ್ಚಿನ ಸಮಯ ಮೀಸಲಿಡಲು ಸಾಧ್ಯವಾಗುತ್ತದೆ ಎಂದರು.
ಈ ವೇಳೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಮಾಡಿ ಶಿಕ್ಷಕರನ್ನು ಗೌರವಿಸಲಾಯಿತು. ನಿವೃತ್ತ ಶಿಕ್ಷಕರನ್ನ ಸನ್ಮಾನಿಸಲಾಯಿತು.