ಕನ್ನಡಪ್ರಭ ವಾರ್ತೆ ಕೋಲಾರ
ಶಿವರಾತ್ರಿ ಹಬ್ಬದ ಪ್ರಯುಕ್ತ ತಾಲೂಕಿನ ಕೊರಗಂಡಹಳ್ಳಿಯಲ್ಲಿ ಕಬ್ಬಡಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಕ್ರೀಡೆಗಳಿಗೆ ಉತ್ತೇಜನ ಸಿಗದೆ ಎಷ್ಟೋ ಕ್ರೀಡಾಪಟುಗಳು, ಬೆಳಕಿಗೆ ಬರುತ್ತಿಲ್ಲ, ಅಂತಹ ಪ್ರತಿಭೆಗಳಿಗೆ ಮಾರ್ಗದರ್ಶನ ನೀಡುವ ಪ್ರಯತ್ನವೂ ನಡೆಯುತ್ತಿಲ್ಲ ಎಂದು ವಿಷಾದಿಸಿದರು.ಖಾತ್ರಿ ಮೂಲಕ ಕ್ರೀಡಾಂಗಣ
ನರೇಗಾ ಯೋಜನೆಯಲ್ಲಿ ಗ್ರಾಮಗಳಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವುದಕ್ಕೆ ಸರ್ಕಾರ ಅವಕಾಶ ಕಲ್ಪಿಸಿದೆ. ಇದನ್ನು ಗ್ರಾಮಸ್ಥರು ಮತ್ತು ಕ್ರೀಡಾಪಟುಗಳು ಸದುಪಯೋಗ ಪಡಿಸಿಕೊಂಡು ಮಕ್ಕಳಿಗೆ ಉತ್ತೇಜನ ನೀಡಬೇಕೆಂದು ಹೇಳಿದ ಅವರು, ಸರ್ಕಾರಿ ಶಾಲೆಗಳಿಗೆ ಕ್ರೀಡಾಂಗಣ ಒದಗಿಸಲು ನರೇಗ ಉತ್ತಮ ಯೋಜನೆಯಾಗಿದ್ದು, ಇದರ ಸದ್ಬಳಕೆಗೆ ಗ್ರಾಮ ಪಂಚಾಯಿತಿಗಳು ಮುಂದಾಗಬೇಕು ಎಂದರು.ಕೋಲಾರ ಜಿಲ್ಲೆಯಲ್ಲಿ ಹಲವಾರು ಮಂದಿ ಕ್ರೀಡಾಪಟುಗಳು ಇದ್ದಾರೆ. ಅದರಲ್ಲಿ ಬಹುತೇಕರು ಬೆಂಗಳೂರಿಗೆ ಹೋಗಿ ಅಭ್ಯಾಸ ಮಾಡಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಪೋಷಕರು ಮಕ್ಕಳಿಗೆ ವಿದ್ಯಾಭ್ಯಾಸ ನೀಡುವುದರ ಜೊತೆಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದರು. ಸಂಪ್ರದಾಯ ಪಾಲನೆಯಿಂದ ನೆಮ್ಮದಿ
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ಜಿ.ಸುರೇಶ್ಬಾಬು ಮಾತನಾಡಿ, ಡಿಸಿಪಿ ದೇವರಾಜ್ ಅವರು ಕೋಲಾರದ ಅಭಿವೃದ್ದಿಗೆ ಅತ್ಯಂತ ದೂರದೃಷ್ಟಿಯ ಆಶಯಗಳನ್ನು ಇಟ್ಟುಕೊಂಡಿದ್ದಾರೆ, ಅವರ ಪ್ರಯತ್ನ ಸಫಲವಾಗಲು ಯುವಕರು ಸಹಕಾರ ನೀಡಬೇಕು, ಕ್ರೀಡೆಗಳ ಮೂಲಕ ಯುವಕರಲ್ಲಿ ಆತ್ಮಸ್ಥೈರ್ಯ ತುಂಬುತ್ತಿರುವ ಅವರ ಕಾರ್ಯ ಶ್ಲಾಘನೀಯವಾಗಿದೆ, ಗ್ರಾಮೀಣ ಭಾಗದಲ್ಲಿ ಅತ್ಯಂತ ಸುಂದರ ಕ್ರೀಡಾಂಗಣ ನಿರ್ಮಿಸುವ ಅವರ ಆಲೋಚನೆ ಕಾರ್ಯಗತವಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಯಾದವ ಸಂಘದ ಅಧ್ಯಕ್ಷ ಡಾ.ನಾರಾಯಣಸ್ವಾಮಿ, ವಿಜ್ಞಾನಿ ಮುನಿಯಪ್ಪ, ಡಾ.ಶಂಕರ್, ಅರವಿಂದ್, ವಕೀಲ ಕಲ್ಲಂಡೂರು ಲೋಕೇಶ್, ಖಾಜಿ ಕಲ್ಲಹಳ್ಳಿ ಮುನಿರಾಜು, ಶಿಕ್ಷಣ ಇಲಾಖೆಯ ರಾಮಕೃಷ್ಣಪ್ಪ,ಪುರುಷೋತ್ತಮ್, ತೋಟಗಾರಿಕೆ ಇಲಾಖೆಯ ಪರಮೇಶ್ವರ್, ಎಪಿಎಂಸಿ ಪುಟ್ಟರಾಜು ಮತ್ತಿತರರು ಉಪಸ್ಥಿತರಿದ್ದರು.