ಇಳುವರಿ ಹೆಚ್ಚಳಕ್ಕೆ ಸಾವಯವ ಗೊಬ್ಬರ ಬಳಕೆ: ಡಾ. ಪ್ರಭಾಕರ್

KannadaprabhaNewsNetwork |  
Published : Jun 28, 2026, 03:45 AM IST
ನಾಪೋಕ್ಲು ಮಹಿಳಾ ಸಮಾಜದಲ್ಲಿ ಕೃಷಿ ಇಲಾಖೆ ವತಿಯಿಂದ ಬೀಜೋಪಚಾರಆಂದೋಲನ ಮತ್ತು ಸುರಕ್ಷಿತ ಕೀಟನಾಶಕ ಬಳಕೆ ತರಬೇತಿ ಕಾರ್ಯಕ್ರಮದಲ್ಲಿ ಗೋಣಿಕೊಪ್ಪಲು ಕೃಷಿ ವಿಜ್ಞಾನಕೇಂದ್ರದ ವಿಜ್ಞಾನಿ ಡಾ. ಪ್ರಭಾಕರ್  ಪಾಲ್ಗೊಂಡು ಮಾತನಾಡಿದರು.24.ಎನ್ ಪಿ ಕೆ-2.ನಾಪೋಕ್ಲು ಮಹಿಳಾ ಸಮಾಜದಲ್ಲಿ ಕೃಷಿ ಇಲಾಖೆ ವತಿಯಿಂದ ಬೀಜೋಪಚಾರಆಂದೋಲನ ಮತ್ತು ಸುರಕ್ಷಿತ ಕೀಟನಾಶಕ ಬಳಕೆ ತರಬೇತಿ ಕಾರ್ಯಕ್ರಮದಲ್ಲಿ ಕೃಷಿಕರು | Kannada Prabha

ಸಾರಾಂಶ

ರೈತರು ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ಕಡಿಮೆ ಮಾಡಿ ಸಾವಯವ ಗೊಬ್ಬರಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಮೂಲಕ ಹೆಚ್ಚಿನ ಇಳುವರಿ ಪಡೆಯಬೇಕು ಎಂದು ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಪ್ರಭಾಕರ್ ಕೆ.ವಿ ಹೇಳಿದರು.

ಕನ್ನಡಪ್ರಭವಾರ್ತೆ ನಾಪೋಕ್ಲು

ರೈತರು ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ಕಡಿಮೆ ಮಾಡಿ ಸಾವಯವ ಗೊಬ್ಬರಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಮೂಲಕ ಹೆಚ್ಚಿನ ಇಳುವರಿ ಪಡೆಯಬೇಕು ಎಂದು ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಪ್ರಭಾಕರ್ ಕೆ.ವಿ ಹೇಳಿದರು.

ಇಲ್ಲಿನ ಮಹಿಳಾ ಸಮಾಜದ ಸಭಾಂಗಣದಲ್ಲಿ ಬುಧವಾರ ಕೃಷಿ ಇಲಾಖೆ ವತಿಯಿಂದ ಬೀಜೋಪಚಾರ ಆಂದೋಲನ ಮತ್ತು ಸುರಕ್ಷಿತ ಕೀಟನಾಶಕ ಬಳಕೆ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಸಾಯನಿಕ ಗೊಬ್ಬರಗಳ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ರೈತರು ರಾಸಾಯನಿಕ ಗೊಬ್ಬರಗಳ ಬಳಕೆ ಕಡಿಮೆ ಮಾಡಿ ಸಾವಯವ ಗೊಬ್ಬರಕ್ಕೆ ಹೆಚ್ಚಿನ ಒತ್ತು ನೀಡಬೇಕು ಎರೆಹುಳ ಗೊಬ್ಬರವನ್ನು ಗದ್ದೆಗೆ ನೀಡಬೇಕಾಗಿದೆ ಅವಲಂಬಿತ ಕೃಷಿಯನ್ನು ನಿಲ್ಲಿಸಿ ಸ್ವಾವಲಂಬಿ ಕೃಷಿಗೆ ಒತ್ತು ನೀಡಬೇಕಾಗಿದೆ ಎಂದರು.

ಭಾರತೀಯ ಸಾಂಬಾರ ಕೃಷಿ ವಿಜ್ಞಾನ ಸಂಶೋಧನಾ ಕೇಂದ್ರ ಅಪ್ಪಂಗಲದ ತೋಟಗಾರಿಕೆ ಜೀವಶಾಸ್ತ್ರ ವಿಜ್ಞಾನಿ ಡಾ. ಹೊನ್ನಪ್ಪ ಹಾಗೂ ಕೃಷಿ ವಿಸ್ತರಣ ವಿಜ್ಞಾನಿಗಳಾದ ಡಾ. ಗಾಯತ್ರಿ ತೋಟಗಾರಿಕಾ ಬೆಳೆಗಳಿಗೆ ತಗಲುವ ಕೀಟ ಬಾಧೆ ಹಾಗೂ ಔಷಧೋಪಚಾರ, ಗೊಬ್ಬರದ ಬಳಕೆ ಬಗ್ಗೆ ಸಮಗ್ರ ಮಾಹಿತಿ ನೀಡಿದರು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಲ್ಲೇಟಿರ ಅರುಣ್ ಬೇಬ ವಹಿಸಿದ್ದರು. ಕೃಷಿಕ ಮುಕ್ಕಾಟಿರ ಹರೀಶ್ ಉಪಸ್ಥಿತರಿದ್ದರು. ಗಿಡಕ್ಕೆ ನೀರುಣಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವ ಜನತೆಯಲ್ಲಿ ಯೋಗದ ಬಗ್ಗೆ ರೆಡ್‌ಕ್ರಾಸ್‌ ಅರಿವು: ಸಿಎ ಶಾಂತಾರಾಮ ಶೆಟ್ಟಿ
ಸ್ತ್ರೀ ಪರಿಪೂರ್ಣತೆಯ ಸಂಕೇತ: ಡಾ. ಮೋಹನ್ ಆಳ್ವ