ರಾಹುಲ್‌ ಗಾಂಧಿ ಭಾವಚಿತ್ರ ಬಳಕೆ: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

KannadaprabhaNewsNetwork |  
Published : Jul 23, 2026, 01:15 AM IST
10 | Kannada Prabha

ಸಾರಾಂಶ

ನೀಟ್‌ ಪರೀಕ್ಷೆ ವಿವಾದದ ವೇಳೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಸಂತಾಪ ಸೂಚಕ ಸಭೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಫೋಟೋ ಬಳಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಕ್ಸಮರ.

ಕನ್ನಡಪ್ರಭ ವಾರ್ತೆ ಮೈಸೂರು

ನೀಟ್‌ ಪರೀಕ್ಷೆ ವಿವಾದದ ವೇಳೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಸಂತಾಪ ಸೂಚಕ ಸಭೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಫೋಟೋ ಬಳಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಕ್ಸಮರ ನಡೆಯಿತು.

ನೀಟ್ ಪರೀಕ್ಷೆ ಜಾಗೃತಿ ಹಾಗೂ ಮಾನಸಿಕ ಒತ್ತಡದಿಂದಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಸಂತಾಪ ಸೂಚಿಸಲು ನಗರದ ನಾರಾಯಣ ಶಾಸ್ತ್ರಿ ರಸ್ತೆಯ ಮಹಾರಾಣಿ ಪಿಯು ಕಾಲೇಜು ಆವರಣದಲ್ಲಿ ಬುಧವಾರ ಸಂತಾಪ ಸೂಚಕ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಎಲ್‌.ಇಡಿ ಪರದೆಯಲ್ಲಿ ರಾಹುಲ್‌ ಗಾಂಧಿ ಭಾವಚಿತ್ರ ಪ್ರದರ್ಶಿಸಲಾಯಿತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು ನಗರಾಧ್ಯಕ್ಷ ಎಲ್‌.ನಾಗೇಂದ್ರ ಅವರ ನೇತೃತ್ವದಲ್ಲಿ ಪ್ರತಿಭಟಿಸಿದರು.

ಕಾಂಗ್ರೆಸ್ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಮೃತ ವಿದ್ಯಾರ್ಥಿಗಳ ಭಾವಚಿತ್ರಗಳ ಜತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಫೋಟೋವನ್ನು ಎಲ್‌ಇಡಿ ಪರದೆಯ ಮೇಲೆ ಪ್ರದರ್ಶಿಸಲಾಗಿತ್ತು. ಈ ವೇಳೆ ಸ್ಥಳಕ್ಕೆ ಬಂದ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಹಾಗೂ ಅವರ ಬೆಂಬಲಿಗರು, ಕಾಲೇಜು ಆವರಣದಲ್ಲಿ ಮೃತ ವಿದ್ಯಾರ್ಥಿಗಳ ಬ್ಯಾನರ್ ಹಾಗೂ ರಾಹುಲ್ ಗಾಂಧಿ ಭಾವಚಿತ್ರ ಅಳವಡಿಕೆಗೆ ಆಕ್ಷೇಪ ವ್ಯಕ್ತಪಡಿಸಿ, ಪವಿತ್ರವಾದ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳನ್ನು ರಾಜಕೀಯವಾಗಿ ಪ್ರಚೋದಿಸಲು ಕಾಂಗ್ರೆಸ್ ಯತ್ನಿಸುತ್ತಿದೆ. ವಿದ್ಯಾರ್ಥಿಗಳನ್ನು ಬಲವಂತವಾಗಿ ಕರೆತರಲಾಗುತ್ತಿದೆ ಎಂದು ಕಿಡಿಕಾರಿದರು.

ಆತ್ಮಹತ್ಯೆಗೆ ಶರಣಾದ ಅಮಾಯಕ ವಿದ್ಯಾರ್ಥಿಗಳ ಶ್ರದ್ಧಾಂಜಲಿಯಲ್ಲಿ ರಾಹುಲ್ ಗಾಂಧಿ ಫೋಟೋ ಹಾಕುವ ಅಗತ್ಯವೇನಿತ್ತು?, ಸ್ಥಳದಲ್ಲಿದ್ದ ಬ್ಯಾನರ್ ತೆರವುಗೊಳಿಸಿ, ಎಲ್‌.ಇ.ಡಿ ಪ್ರದರ್ಶನ ಸ್ಥಗಿತಗೊಳಿಸಿದರು.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಶಾಸಕ ಕೆ.ಹರೀಶ್ ಗೌಡ ಮತ್ತು ಎಲ್‌.ನಾಗೇಂದ್ರ ನಡುವೆ ಮಾತಿನ ಚಕಮಕಿ ನಡೆಯಿತು. ಶಾಲಾ-ಕಾಲೇಜು ಅಂಗಳದಲ್ಲಿ ಕಾಂಗ್ರೆಸ್ ತನ್ನ ರಾಜಕೀಯ ಕಾರ್ಯಕ್ರಮ ನಡೆಸಲು ಅನುಮತಿ ನೀಡಿದ್ದಾದರೂ ಹೇಗೆ ಎಂದು ಹರೀಶ್ ಗೌಡ ಅವರನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೇ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಫೋನ್ ಮೂಲಕ ದೂರು ನೀಡಿ, ಕಾಲೇಜು ಆವರಣದಲ್ಲಿ ರಾಜಕೀಯ ಪ್ರಚೋದಿತ ಕಾರ್ಯಕ್ರಮಗಳಿಗೆ ಅವಕಾಶ ನೀಡದಂತೆ ಎಚ್ಚರಿಸಿದರು.

ಬಳಿಕ ಕಾಲೇಜಿನ ಪ್ರಾಂಶುಪಾಲರ ಕೊಠಡಿಗೆ ತೆರಳಿದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ನೆಲದ ಮೇಲೆ ಕುಳಿತು ಪ್ರತಿಭಟಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್‌ ನವರಿಗೆ ಶಾಲೆಗಳಲ್ಲಿ ರಾಜಕೀಯ ಮಾಡಲು ಅವಕಾಶ ನೀಡುವುದಾದರೆ, ನಾಳೆಯಿಂದ ನಮಗೂ ಶಾಲಾ ಆವರಣದಲ್ಲಿ ಕಾರ್ಯಕ್ರಮ ಮಾಡಲು ಅವಕಾಶ ನೀಡಿ ಎಂದು ಅವರು ಒತ್ತಾಯಿಸಿದರು.

ಎರಡೂ ಪಕ್ಷಗಳ ಕಾರ್ಯಕರ್ತರು ಪರಸ್ಪರ ಧಿಕ್ಕಾರದ ಘೋಷಣೆ ಕೂಗಿದರು. ಈ ಘಟನೆಯಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಎರಡು ಗುಂಪುಗಳಿಗೆ ಅಡ್ಡಲಾಗಿ ಬ್ಯಾರಿಕೇಡ್‌ಅಳವಡಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಇದು ನೀಟ್ ಪರೀಕ್ಷೆ ಸಂಬಂಧ ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಕಾರ್ಯಕ್ರಮ ಎಂದು ನಾನು ತಿಳಿದಿದ್ದೆ. ಕಾರ್ಯಕ್ರಮ ಮಾಡುವ ವಿಚಾರವಾಗಿ ಸ್ಥಳೀಯ ಶಾಸಕರು ಉಪ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಪತ್ರದ ಅನುಸಾರ ನಾನು ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದೆ. ರಾಹುಲ್ ಗಾಂಧಿ ಅವರ ಫೋಟೋ ಹಾಕಿರುವುದು ನನ್ನ ಗಮನಕ್ಕೆ ಬಂದಿಲ್ಲ. ಮೇಲಧಿಕಾರಿಗಳ ಆದೇಶ ಪಾಲಿಸಿದ್ದೇನೆ. ವಿಷಯ ತಿಳಿದ ಬಳಿಕ ಬ್ಯಾನರ್ ತೆಗೆಸಲಾಗಿದೆ.

- ಸೋಮಣ್ಣ, ಕಾಲೇಜಿನ ಪ್ರಾಂಶುಪಾಲ ಇಲ್ಲಿ ಯಾವುದೇ ರಾಜಕೀಯ ಪ್ರೇರಿತ ಕಾರ್ಯಕ್ರಮ ಮಾಡುತ್ತಿಲ್ಲ. ನೀಟ್ ಜಾಗೃತಿ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇವೆ. ಬಿಜೆಪಿ ನಾಯಕರು ಮಾಡುತ್ತಿರುವ ಆರೋಪ ಸುಳ್ಳು. ರಾಹುಲ್ ಗಾಂಧಿ ಫೋಟೋ ಕೂಡ ಹಾಕಿಲ್ಲ.

- ಕೆ.ಹರೀಶ್ ಗೌಡ, ಶಾಸಕರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಶ್ನೆಪತ್ರಿಕೆ ಸೋರಿಕೆ: ಮೋದಿ ಜವಾಬ್ದಾರಿ ಹೊರಲಿ
ಪ್ಲಾಸ್ಟಿಕ್ ಮುಕ್ತ ಸುರಪುರ ನಿರ್ಮಾಣಕ್ಕೆ ಕೈಜೋಡಿಸಿ