- ಭೀಮಸಮುದ್ರದ ಶ್ರೀಶೈಲ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಪ್ರಸನ್ನ ಕುಮಾರ । ಜಿಎಂ ವಿ.ವಿ.ಯಲ್ಲಿ ''''ಮಲ್ಲಿಕಾ 26.0'''' ಸಮಾರೋಪ
ಕನ್ನಡಪ್ರಭ ವಾರ್ತೆ ದಾವಣಗೆರೆ
ಯುವ ವಿದ್ಯಾರ್ಥಿಗಳು ಭಾರತದ ಭವಿಷ್ಯದ ಶಕ್ತಿಗಳಾಗಿದ್ದು, ಅವರಲ್ಲಿನ ಸೃಜನಶೀಲತೆ ಮತ್ತು ನಾವೀನ್ಯತೆಗೆ ಸೂಕ್ತ ವೇದಿಕೆ ಕಲ್ಪಿಸುವುದು ಇಂದಿನ ಅಗತ್ಯವಾಗಿದೆ ಎಂದು ಭೀಮಸಮುದ್ರದ ಶ್ರೀಶೈಲ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಜಿ.ಎಂ.ಪ್ರಸನ್ನ ಕುಮಾರ ಅಭಿಪ್ರಾಯಪಟ್ಟರು.ನಗರದ ಜಿಎಂ ವಿಶ್ವವಿದ್ಯಾಲಯದಲ್ಲಿ ಶನಿವಾರ ಶೈಕ್ಷಣಿಕ ಸಾಧನೆ ಮತ್ತು ಸಾಂಸ್ಕೃತಿಕ ಪ್ರತಿಭೆಗಳ ''''ಮಲ್ಲಿಕಾ 26.0'''' ವಾರ್ಷಿಕ ಸಾಂಸ್ಕೃತಿಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಜಿಎಂ ವಿ.ವಿ. ಕುಲಪತಿ ಡಾ. ಎಸ್.ಆರ್. ಶಂಕಪಾಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣ ಎಂದರೆ ಕೇವಲ ತರಗತಿ ಅಥವಾ ಪ್ರಯೋಗಾಲಯಕ್ಕೆ ಸೀಮಿತವಾಗಿಲ್ಲ. ಮಲ್ಲಿಕಾದಂತಹ ವೇದಿಕೆಗಳು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಆತ್ಮವಿಶ್ವಾಸ ಮತ್ತು ತಂಡದ ಮನೋಭಾವವನ್ನು ಬೆಳೆಸುತ್ತವೆ. ಜಿಎಂ ವಿಶ್ವವಿದ್ಯಾಲಯವು ಕೇವಲ ಶೈಕ್ಷಣಿಕ ಕ್ಷೇತ್ರದಲ್ಲಿ ಮಾತ್ರವಲ್ಲದೇ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಇಂತಹ ಸಾಂಸ್ಕೃತಿಕ ವೇದಿಕೆಗಳನ್ನು ಕಲ್ಪಿಸಿಕೊಡುವಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.
ವಿವಿಧ ಜಿಲ್ಲೆಗಳ ನೂರಾರು ಕಾಲೇಜುಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಕಲೆ, ಸಂಗೀತ ಮತ್ತು ನೃತ್ಯ ಸ್ಪರ್ಧೆಗಳಲ್ಲಿ ತಮ್ಮ ಅದ್ಭುತ ಪ್ರತಿಭೆಯನ್ನು ಪ್ರದರ್ಶಿಸಿದರು. ಸಹ ಉಪ ಕುಲಪತಿಗಳಾದ ಡಾ. ಎಂ.ವೇಣುಗೋಪಾಲ ರಾವ್, ಕುಲಸಚಿವ ಡಾ. ಬಿ.ಎಸ್. ಸುನೀಲ್ ಕುಮಾರ, ಜಿಎಂ ಹಾಲಮ್ಮ ಪಪೂ ಕಾಲೇಜಿನ ಎಎಒ ಜಿ.ಜೆ.ಶಿವಕುಮಾರ, ವಿದ್ಯಾರ್ಥಿ ವ್ಯವಹಾರಗಳ ನಿರ್ದೇಶನಾಲಯದ ನಿರ್ದೇಶಕ ಡಾ. ಎಚ್.ಎಸ್. ಕಿರಣ್ ಕುಮಾರ, ಉಪ ನಿರ್ದೇಶಕ ಡಾ. ಎಂ. ಸಂತೋಷ್ ಕುಮಾರ ಇತರರು ಭಾಗವಹಿಸಿದ್ದರು.
- - -
ದಾವಣಗೆರೆಯ ಜಿಎಂ ವಿ.ವಿ.ಯಲ್ಲಿ ಕುಲಪತಿ ಡಾ. ಎಸ್.ಆರ್. ಶಂಕಪಾಲ್ ಅಧ್ಯಕ್ಷತೆಯಲ್ಲಿ ''''ಮಲ್ಲಿಕಾ 26.0'''' ಸಮಾರೋಪ ಸಮಾರಂಭ ನಡೆಯಿತು.