ಕೌಶಲ ತರಬೇತಿಗೆ ಸಮುದಾಯ ಭವನ ಬಳಸಿಕೊಳ್ಳಿ

KannadaprabhaNewsNetwork |  
Published : Oct 19, 2025, 01:00 AM IST
೧೮ಕೆಎಲ್‌ಆರ್-೩ಕೋಲಾರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾತನಾಡಿದರು. | Kannada Prabha

ಸಾರಾಂಶ

ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ ಪಂಗಡ ಜನರ ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸಲು ಜಿಲ್ಲಾ ಜಾಗೃತಿ ಸಮಿತಿಯಿಂದ ಹೊಸ ವಿಚಾರಗಳನ್ನು ತೆಗೆದುಕೊಂಡು ಚಿಂತನ ಮಾಡಬೇಕು. ಜಿಲ್ಲೆಯ ಎಲ್ಲ ಸಮುದಾಯ ಭವನಗಳನ್ನು ಜ್ಞಾನ ಮತ್ತು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನಾಗಿಸಿ ಅದರಲ್ಲಿಯೇ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಡಿಜಿಟಲ್ ಗ್ರಂಥಾಲಯ ಸ್ಥಾಪಿಸಿ.

ಕನ್ನಡಪ್ರಭ ವಾರ್ತೆ ಕೋಲಾರಜಿಲ್ಲೆಯಲ್ಲಿ ಅನೇಕ ಸಮುದಾಯ ಭವನಗಳನ್ನು ನಿರ್ಮಾಣ ಮಾಡಿದ್ದು, ಸಮರ್ಪಕ ಬಳಕೆ ಆಗುತ್ತಿಲ್ಲ. ಇವುಗಳನ್ನು ರಾಜ್ಯದಲ್ಲಿಯೇ ಮಾದರಿಯಾಗುವಂತೆ ಮಾಡಲು ಈ ಭವನಗಳನ್ನು ಜ್ಞಾನ ಮತ್ತು ಕೌಶಲ ಅಭಿವೃದ್ಧಿ ಕೇಂದ್ರಗಳನ್ನಾಗಿ ಮಾರ್ಪಡಿಸಿ ಸ್ಥಳೀಯ ಯುವಜನತೆ ಬಳಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ತಿಳಿಸಿದರು.ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು. ಡಿಜಿಟಲ್ ಗ್ರಂಥಾಲಯ ಸ್ಥಾಪಿಸಿ

ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ ಪಂಗಡ ಜನರ ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸಲು ಜಿಲ್ಲಾ ಜಾಗೃತಿ ಸಮಿತಿಯಿಂದ ಹೊಸ ವಿಚಾರಗಳನ್ನು ತೆಗೆದುಕೊಂಡು ಚಿಂತನ ಮಾಡಬೇಕು. ಜಿಲ್ಲೆಯ ಎಲ್ಲ ಸಮುದಾಯ ಭವನಗಳನ್ನು ಜ್ಞಾನ ಮತ್ತು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನಾಗಿಸಿ ಅದರಲ್ಲಿಯೇ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಡಿಜಿಟಲ್ ಗ್ರಂಥಾಲಯ ಸ್ಥಾಪಿಸುವುದರ ಜೊತೆಗೆ ಹೆಚ್ಚಿನ ಅರಿವು ಮೂಡಿಸುವ ವಿದ್ಯಾಭ್ಯಾಸದ ಪುಸ್ತಕಗಳನ್ನು ಇಡಬೇಕು. ಪ್ರತಿದಿನ ಸಂಜೆ ಭವನಗಳಲ್ಲಿ ಯಾವುದಾದರೂ ಒಂದು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳುವುದು ಮಾಡಿದರೆ ಈ ಕೆಲಸವು ವೃತ್ತಿ ಜೀವನಕ್ಕೆ ಆಧಾರವಾಗುತ್ತದೆ ಮತ್ತು ಅವರ ಸಾಧನೆಗೆ ಸಹಕಾರವಾಗುತ್ತದೆ ಎಂದು ತಿಳಿಸಿದರು.ಈಗಾಗಲೇ ಕೋಲಾರ ನಗರಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಯ ಉಳಿತಾಯ ಹಣ ಪಡೆದು ಅದರ ಜೊತೆಗೆ ಗ್ರಂಥಾಲಯ ಸಮಿತಿಯ ವಿಶೇಷ ಅನುದಾನ ಬಳಸಿಕೊಂಡು ಕೋಲಾರ ಜಿಲ್ಲಾ ಗ್ರಂಥಾಲಯದಲ್ಲಿ ’ಡಾ. ಬಿ.ಆರ್.ಅಂಬೇಡ್ಕರ್ ಡಿಜಿಟಲ್ ಗ್ರಂಥಾಲಯ’ವನ್ನು ಒಳಗೊಂಡು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಇದು ಮುಂದಿನ ತಿಂಗಳು ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.ಎರಡನೇ ಭಾನುವಾರ ಸಭೆ

ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ ಬಿ.ನಿಖಿಲ್ ಮಾತನಾಡಿ, ಪರಿಶಿಷ್ಟ ಜಾತಿ/ ಪಂಗಡದವರ ವಿರುದ್ಧ ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥ ಮಾಡಬೇಕು. ಪ್ರತಿ ಎರಡನೇ ಭಾನುವಾರ ಈ ಕುರಿತು ಸಭೆ ನಡೆಸಲಾಗುವುದು ಎಂದರು.

ಈಗಾಗಲೇ ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲೂಕುಗಳಲ್ಲಿ ಪರಿಶಿಷ್ಟರ ಕುಂದು ಕೊರತೆ ಸಭೆಗಳನ್ನು ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ತಾಲೂಕುಗಳಲ್ಲಿ ಕುಂದು ಕೊರತೆಗಳ ಸಭೆ ನಡೆಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು

ವಸತಿ ಶಾಲೆ ಜತೆಗೆ ಸರ್ಕಾರಿ ಶಾಲೆ

ಬಂಗಾರಪೇಟೆ ತಾಲೂಕು ವಸತಿ ಶಾಲೆಯಲ್ಲಿ ಸರ್ಕಾರಿ ಶಾಲೆಯ ಮಕ್ಕಳನ್ನು ಜೊತೆಗೂಡಿಸಿ ಶಾಲೆ ನಡೆಸುತ್ತಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆ ವಾರದೊಳಗೆ ಕೈಗೊಳ್ಳಲಿದೆ. ೨ ವಾರದೊಳಗಾಗಿ ಶಾಲೆ ನಡೆಸಲು ಅನುಕೂಲಕರವಾಗಿರುವ ಬಾಡಿಗೆ ಕಟ್ಟಡವನ್ನು ಹುಡುಕಿ ಶಾಲಾ ಮಕ್ಕಳನ್ನು ಸ್ಥಳಾಂತರಿಸಲು ಕ್ರಮವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಮೆನು ಚಾರ್ಟ್‌ ಪ್ರಕಟಿಸಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರು, ಅಂಗನವಾಡಿ ಕೇಂದ್ರಗಳಲ್ಲಿ ಬಾಣಂತಿಯರಿಗೆ ಮತ್ತು ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಮೇನು ಚಾರ್ಟ್‌ನ್ನು ಗೋಡೆ ಬರಹದಲ್ಲಿ ಬರೆಸಿ ಸಾರ್ವಜನಿಕರ ಗಮನಕ್ಕೆ ತರಲು ಸಭೆಗೆ ಮಾಹಿತಿ ನೀಡಲು ಸದಸ್ಯರು ಕೋರಿದರು. ಜಿಲ್ಲೆಯಲ್ಲಿ ೨೧೮೦ ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಮೆನು ಚಾರ್ಟನ್ನು ಗೋಡೆಮೇಲೆ ಪ್ರದರ್ಶಿಸಲಾಗಿದೆಂದು ಉಪನಿರ್ದೇಶಕರು ಸಭೆಗೆ ತಿಳಿಸಿದರು.

ಸಭೆಯಲ್ಲಿ ಜಿಪಂ ಸಿಇಓ ಡಾ.ಪ್ರವೀಣ್ ಪಿ.ಬಾಗೇವಾಡಿ, ಕೆಜಿಎಫ್ ಎಸ್‌ಪಿ ಶಿವಂಶು ರಜಪೂತ್, ಎಡಿಸಿ ಎಸ್.ಎಂ..ಮಂಗಳ, ಎಸಿ ಡಾ.ಎಸ್.ಮೈತ್ರಿ, ಡಿವೈಎಸ್ಪಿ ವಸಂತ್ ಕುಮಾರ್, ಸರ್ಕಾರಿ ಅಭಿಯೋಜಕ ಮಾಧವ ಪದ್ಮನಾಭ ಗಾವ್ಕರ್ ಇದ್ದರು.

.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಕೆಶಿ ಸಿಎಂ ಆದರೆ ನನಗೆ ಸಚಿವ ಸ್ಥಾನವೇ ಬೇಡ : ರಾಜಣ್ಣ
ದರ್ಶನ್‌ ಜೈಲಿಂದ ಹೊರಬರಲು ನಿತ್ಯ ಪ್ರಾರ್ಥಿನೆ: ನಟ ಜೈದ್‌