ಗ್ರಾಪಂ ಅನುದಾನ ಕುಡಿವ ನೀರಿಗಷ್ಟೇ ಬಳಸಿ

KannadaprabhaNewsNetwork |  
Published : Apr 28, 2026, 01:15 AM IST
27ಕೆಆರ್ ಎಂಎನ್ 5.ಜೆಪಿಜಿರಾಮನಗರ ತಾಪಂ ಸಭಾಂಗಣದಲ್ಲಿ ಶಾಸಕ ಬಾಲಕೃಷ್ಣರವರು ಕೂಟಗಲ್ ಮತ್ತು ಬಿಡದಿ ಹೋಬಳಿಗಳ ಜನರಿಂದ ಅಹವಾಲು ಆಲಿಸಿದರು. | Kannada Prabha

ಸಾರಾಂಶ

ರಾಮನಗರ: ಬೇಸಿಗೆ ಬೇಗೆ ಹೆಚ್ಚಾಗಿರುವುದರಿಂದ ಜನ , ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ. ಈಗಿರುವ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಗ್ರಾಮ ಪಂಚಾಯಿತಿಯಲ್ಲಿರುವ ಅನುದಾನವನ್ನು ಕುಡಿಯುವ ನೀರಿನ ವ್ಯವಸ್ಥೆಗಷ್ಟೆ ಬಿಲ್‌ಗಳನ್ನು ಪಾವತಿಸಬೇಕು

ರಾಮನಗರ: ಬೇಸಿಗೆ ಬೇಗೆ ಹೆಚ್ಚಾಗಿರುವುದರಿಂದ ಜನ , ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ. ಈಗಿರುವ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಗ್ರಾಮ ಪಂಚಾಯಿತಿಯಲ್ಲಿರುವ ಅನುದಾನವನ್ನು ಕುಡಿಯುವ ನೀರಿನ ವ್ಯವಸ್ಥೆಗಷ್ಟೆ ಬಿಲ್‌ಗಳನ್ನು ಪಾವತಿಸಬೇಕು. ಬೇರೆ ಯಾವುದೇ ಉದ್ದೇಶಗಳಿಗೆ ಹಣ ಬಳಸಿದರೆ ಪಿಡಿಒಗಳ ವಿರುದ್ಧ ಕ್ರಮ ವಹಿಸಬೇಕಾಗುತ್ತದೆ ಎಂದು ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ.ಬಾಲಕೃಷ್ಣ ಖಡಕ್ ಎಚ್ಚರಿಕೆ ನೀಡಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೂಟಗಲ್ ಮತ್ತು ಬಿಡದಿ ಹೋಬಳಿಗಳ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.

ಗ್ರಾಪಂ ಪಿಡಿಓ ಗಳು ಜನರಿಗೆ ಕುಡಿಯುವ ನೀರು ಕೊಡಲು ದೂರ ಎಂದು ಕೈ ಚೆಲ್ಲುವ ಕೆಲಸ ಮಾಡಿದರೆ ಆಗುವುದಿಲ್ಲ. ನೀರು ಸಿಗುವ ಜಾಗ ಇದೆ ಎಂದರೆ ಒಂದು ಕಿ.ಮೀ ದೂರವಾದರೂ ಸರಿ, ಪಾಯಿಂಟ್ ಮಾಡಿಸಿ ಬೋರ್ ವೆಲ್ ಕೊರೆಸಿ ನೀರು ಪೂರೈಕೆಗೆ ಅಗತ್ಯ ಕ್ರಮ ವಹಿಸಬೇಕು. ಯಾರಿಂದಲಾದರು ಸಾರ್ವಜನಿಕರಿಗೆ ತೊಂದರೆಯಾದರೆ ಪಿಡಿಓಗಳು ಅವರ ವಿರುದ್ಧ ಕಾನೂನು ಕ್ರಮ ವಹಿಸುವಂತೆ ತಿಳಿಸಿದರು.

ಸಾರ್ವಜನಿಕರು ಸಭೆಯಲ್ಲಿ ನನ್ನ ಗಮನ ಸೆಳೆದಿರುವ ಎಲ್ಲ ಸಮಸ್ಯೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಮುಂದಿನ ಸಭೆಯಷ್ಟರಲ್ಲಿ ಬಗೆಹರಿಸಿ, ಕೆಲವು ಬಗೆಹರಿಸಲು ಸಮಸ್ಯೆಯಿರುವ ಸ್ಥಳ ಪರಿಶೀಲಿಸಿ ವಾಸ್ತವತೆಯ ವರದಿಯನ್ನು ನೀಡಿ‌ ನಂತರ ಚರ್ಚಿಸಿ ಬಗೆಹರಿಸುವ ಕೆಲಸವನ್ನು ಮಾಡೋಣ ಎಂದು ಕಿವಿಮಾತು ಹೇಳಿದರು.

ಸಭೆಯಲ್ಲಿ ಪಹಣಿ ಬದಲಾಯಿಸಿಕೊಡಿ, ಗೋಪಳ್ಳಿ ಆಸ್ಪತ್ರೆ ಸಮಸ್ಯೆ ಬಗೆಹರಿಸಿ, ಸಾಗುವಳಿ ಚೀಟಿ ಖಾತೆ ಮಾಡಿಕೊಡಿ, ಶೇಷಗಿರಿಹಳ್ಳಿ ಗ್ರಾಮ‌ ಪರಿಮಿತಿಯಲ್ಲಿ ಕಳ್ಳಿಬೇಲಿ ತೆರವು ಮಾಡಿ, ಹಕ್ಕುಪತ್ರ ಸೇರಿದಂತೆ ಹಲವು ಸಮಸ್ಯೆಗಳನ್ನು ಶಾಸಕ ಹೆಚ್.ಸಿ.ಬಾಲಕೃಷ್ಣ ಆಲಿಸಿ ಬಗೆಹರಿಸುವ ಭರವಸೆ ನೀಡಿದರು.

ತಹಸೀಲ್ದಾರ್ ತೇಜಸ್ವಿನಿ, ಇಓ ಪೂರ್ಣಿಮಾ, ಉಪತಹಸೀಲ್ದಾರ್ ಮಂಜುನಾಥ್, ರಾಜಸ್ವ ನಿರೀಕ್ಷಕ ಪ್ರಸನ್ನ‌ಕುಮಾರ್ , ಕಂದಾಯ ಅಧಿಕಾರಿಗಳು, ವಿವಿಧ ಇಲಾಖಾ ಅಧಿಕಾರಿಗಳು, ಪಿಡಿಓಗಳು ಭಾಗವಹಿಸಿದ್ದರು‌.

27ಕೆಆರ್ ಎಂಎನ್ 5.ಜೆಪಿಜಿ

ರಾಮನಗರ ತಾಪಂ ಸಭಾಂಗಣದಲ್ಲಿ ಶಾಸಕ ಬಾಲಕೃಷ್ಣ ಕೂಟಗಲ್ ಮತ್ತು ಬಿಡದಿ ಹೋಬಳಿಗಳ ಜನರಿಂದ ಅಹವಾಲು ಆಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೈಗಾರಿಕೆಗೆ ಭೂಮಿ: ಅಧಿಕಾರಿಗಳಿಂದ ಸುಳ್ಳು ವರದಿ
ಮಹಿಳಾ ವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕಶಾಸ್ತಿ