ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಗೆ ಭೇಟಿ ನೀಡಿ ಕೆರೆಗೆ ನೀರು ಹರಿಸುತ್ತಿರುವ ಕಾರ್ಯವನ್ನು ವಿಕ್ಷೀಸಿದ ಅವರು, ನಗರದ ಕುಡಿಯುವ ನೀರಿನ ಸಮಸ್ಯೆಯನ್ನು ಪ್ರಥಮಾಧ್ಯತೆಯ ಮೇಲೆ ನೀಗಿಸಬೇಕು. ಈ ಕೆರೆಯ ನೀರು ಹಲವು ವಾರ್ಡ್ಗಳಿಗೆ ತಲುಪುವದರಿಂದ ಭೂತನಾಳ ಕೆರೆ ಭರ್ತಿಯಾಗುವಂತೆ ನೋಡಿಕೊಳ್ಳಬೇಕು ಎಂದರು.
ಈಗಾಗಲೇ ಜಿಲ್ಲೆಯಲ್ಲಿ ಬರಗಾಲವಿದ್ದು, ಕೆರೆಯ ನೀರನ್ನು ಮಳೆಗಾಲ ಬರುವವರೆಗೂ ಮುಂದಿನ ಎರಡು ತಿಂಗಳುಗಳ ಕಾಲ ಸಂಗ್ರಹಿಸಿಟ್ಟುಕೊಳ್ಳಬೇಕು. ವಾರ್ಡ್ಗಳಿಗೆ ನೀರು ಸಾಗಿಸುವ ಪೈಪ್ಲೈನ್ ಸೋರದಂತೆ ಹಾಗೂ ಸಾರ್ವಜನಿಕರು ನೀರು ಪೋಲು ಮಾಡದಂತೆ ಜಾಗೃತಿ ವಹಿಸಬೇಕು ಎಂದರು.ಆಲಮಟ್ಟಿ ಹಾಗೂ ನಾರಾಯಣಪೂರ ಜಲಾಶಯದಿಂದ 2 ಟಿಎಂಸಿ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಹರಿಸಲಾಗಿದ್ದು, ಅನ್ಯ ಉದ್ದೇಶಗಳಿಗಾಗಿ ನೀರನ್ನು ಬಳಕೆ ಮಾಡುವುದನ್ನು ತಪ್ಪಿಸಬೇಕು. ಈಗಾಗಲೇ ಕಾಲುವೆ ಜಾಲದ 100 ಮೀಟರ್ ಸುತ್ತಲೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಧಿಕಾರಿಗಳು ಕಟ್ಟುನಿಟ್ಟಾಗಿ ವಾಚ್ ಆ್ಯಂಡ್ ವಾರ್ಡ್ ಮಾಡಬೇಕು ಎಂದು ಸೂಚಿಸಿದರು.