ಯುವಕರನ್ನು ರಾಷ್ಟ್ರ ನಿರ್ಮಾಣ, ಸಮಾಜ ಸೇವೆಗೆ ಬಳಸಿಕೊಳ್ಳಿ: ಇಬ್ರಾಹಿಂ ಸಖಾಫಿ ಪಯೋಟ

KannadaprabhaNewsNetwork |  
Published : Jul 01, 2024, 01:45 AM IST
ಝೋನ್ ವಾರ್ಷಿಕ ಕೌನ್ಸಿಲ್‌ | Kannada Prabha

ಸಾರಾಂಶ

ಎಸ್‌ವೈಎಸ್ ಜಯನಗರ ಝೋನ್ ವಾರ್ಷಿಕ ಕೌನ್ಸಿಲ್‌. ದೇಶದಲ್ಲಿ ಕೋಮುವಾದವು ಅಪಾಯಕಾರಿಯಾಗಿ ಹೆಚ್ಚುತ್ತಿದ್ದು, ಇದರಿಂದ ದೇಶ ಅಭದ್ರತೆಯತ್ತ ಸಾಗುತ್ತಿದೆ ಎಂದು ಇಬ್ರಾಹಿಂ ಸಖಾಫಿ ತಿಳಿಸಿದರು.

ಬೆಂಗಳೂರು: ಯುವಕರನ್ನು ರಾಷ್ಟ್ರ ನಿರ್ಮಾಣ, ಸಮಾಜ ಸೇವೆಗೆ ಬಳಸಿಕೊಳ್ಳಬೇಕು ಹಾಗೂ ಇದರ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಸಹಕರಿಯಾಗಬೇಕು ಎಂದು ಎಸ್‌ವೈಎಸ್‌ ಬೆಂಗಳೂರು ಜಿಲ್ಲಾ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಪಯೋಟ ಕರೆ ನೀಡಿದರು.ಎಸ್‌ವೈಎಸ್ ಜಯನಗರ ಝೋನ್ ವಾರ್ಷಿಕ ಕೌನ್ಸಿಲ್‌ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಕೋಮುವಾದವು ಅಪಾಯಕಾರಿಯಾಗಿ ಹೆಚ್ಚುತ್ತಿದ್ದು, ಇದರಿಂದ ದೇಶ ಅಭದ್ರತೆಯತ್ತ ಸಾಗುತ್ತಿದೆ. ಯುವಕರು ತಮ್ಮ ಯುವತ್ವವನ್ನು ಕ್ರಿಯಾಶೀಲವಾಗಿ ಬಳಸಿಕೊಳ್ಳುವ ಜತೆಗೆ ಅದಕ್ಕೆ ಉಪಯುಕ್ತವಾದ ಆಧ್ಯಾತ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಲು ಸಿದ್ಧರಾಗಬೇಕು ಎಂದರು.

ಝೋನ್ ಕಾರ್ಯದರ್ಶಿ ಕಾರ್ಯದರ್ಶಿ ಅಕ್ನಾಸ್ ಆರೀಕೆರೆ ಮತ್ತು ಕೋಶಧಿಕಾರಿ ಆಶಿಕ್ ಪಯಾಡತ್ ಸಮಿತಿಯ ವಾರ್ಷಿಕ ವರದಿ ಮಂಡಿಸಿದರು. ಬಶೀರ್ ಸಅದಿಯವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಕೌನ್ಸಿಲ್ ನಲ್ಲಿ ಮುಸ್ಲಿಂ ಜಮಾಅತ್ ಜಿಲ್ಲಾ ಕಾರ್ಯದರ್ಶಿ ಶಂಸುದ್ದೀನ್, ಫಿರ್ದೌಸ್ ಮಾರತಹಳ್ಳಿ ಉಪಸ್ಥಿತರಿದ್ದರು.

ಶಿಹಾಬ್ ಮಡಿವಾಳ ಸ್ವಾಗತಿಸಿ, ಜಮಾಲ್ ಸಖಾಫಿ ಧನ್ಯವಾದ ಸಮರ್ಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಕ್ಷವಿರೋಧಿ ಚಟುವಟಿಕೆ ನಡೆಸಿದ್ದರೆ ನನ್ನ ವಿರುದ್ಧವೂ ಕ್ರಮ ಆಗಲಿ: ಜಮೀರ್‌
ಈಗಾಗಲೇ ಸಾಕಷ್ಟು ಅನುಭವಿಸಿದ್ದೇವೆ, ಜಮೀರ್‌ರನ್ನು ಮತ್ತೆ ಸೇರ್ಸಿಕೊಳ್ಳಲ್ಲ: ಎಚ್ಡಿಕೆ