ಪಕ್ಷ ಸಂಘಟನೆಗೆ ಕಾಂಗ್ರೆಸ್‌ ಪ್ರಚಾರ ಸಮಿತಿ ಬಳಕೆ: ವಿನಯಕುಮಾರ್ ಸೊರಕೆ

KannadaprabhaNewsNetwork |  
Published : Sep 13, 2025, 02:05 AM IST
12ಎಚ್‌ಪಿಟಿ3- ಹೊಸಪೇಟೆಯ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ವಿನಯ್‌ ಕುಮಾರ ಸೊರಕೆ ಮಾತನಾಡಿದರು. | Kannada Prabha

ಸಾರಾಂಶ

ಕಾಂಗ್ರೆಸ್‌ ಪ್ರಚಾರ ಸಮಿತಿಗಳನ್ನು ಕೇವಲ ಚುನಾವಣೆಗೆ ಸೀಮಿತಗೊಳಿಸದೆ, ಪಕ್ಷ ಸಂಘಟಿಸಲು ಎಐಸಿಸಿ ಅನುಮೋದನೆ ನೀಡಿದೆ ಎಂದು ಮಾಜಿ ಸಚಿವ ಹಾಗೂ ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‌ ಕುಮಾರ್ ಸೊರಕೆ ತಿಳಿಸಿದರು.

ಹೊಸಪೇಟೆ: ಕಾಂಗ್ರೆಸ್‌ ಪ್ರಚಾರ ಸಮಿತಿಗಳನ್ನು ಕೇವಲ ಚುನಾವಣೆಗೆ ಸೀಮಿತಗೊಳಿಸದೆ, ಪಕ್ಷ ಸಂಘಟನೆ ದೃಷ್ಟಿಯಿಂದ ರಾಜ್ಯಾದ್ಯಂತ ಜಿಲ್ಲಾ, ವಿಭಾಗ ಮಟ್ಟದಲ್ಲಿ ಪ್ರಚಾರ ಸಮಿತಿ ಸಭೆ ನಡೆಸುವ ಮೂಲಕ ಪಕ್ಷ ಸಂಘಟಿಸಲು ಎಐಸಿಸಿ ಅನುಮೋದನೆ ನೀಡಿದೆ ಎಂದು ಮಾಜಿ ಸಚಿವ ಹಾಗೂ ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‌ ಕುಮಾರ್ ಸೊರಕೆ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಮಟ್ಟದಿಂದ ಪಂಚಾಯಿತಿ ಮಟ್ಟದವರೆಗೆ ವಿವಿಧ ಸಮಿತಿಗಳನ್ನು ರಚಿಸುವ ಮೂಲಕ ಅದಕ್ಕೆ ಸದಸ್ಯರನ್ನು ನೇಮಕ ಮಾಡಲಾಗುವುದು. ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ದೃಷ್ಟಿಯಿಂದ ಮುಂಬರುವ ದಿನಗಳಲ್ಲಿ ವಿಭಾಗೀಯ ಹಾಗೂ ಜಿಲ್ಲಾ ಮಟ್ಟದಲ್ಲಿ ಸಭೆಗಳನ್ನು ನಡೆಸಿ, ಕಾರ್ಯಕರ್ತರಿಗೆ ಈ ಕುರಿತು ತರಬೇತಿ ನೀಡುವ ಉದ್ದೇಶ ಇದೆ ಎಂದರು.

ಗ್ಯಾರಂಟಿ ಯೋಜನೆ ಅನುಷ್ಠಾನ: ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಖಾತೆಗಳಿಗೆ ಜಮಾ ಆದ ಹಣ ಮಾರುಕಟ್ಟೆಯಲ್ಲಿ ಚಲಾವಣೆ ಆಗುತ್ತಿದೆ. ಇದರಿಂದ ಮಹಿಳೆಯ ತಲಾ ಆದಾಯ ಅಧಿಕವಾಗಿದೆ. ತಲಾ ಆದಾಯದಲ್ಲಿ ದೇಶದಲ್ಲಿಯೇ ಕರ್ನಾಟಕ ನಂ. ವನ್‌ ಸ್ಥಾನದಲ್ಲಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಮೂರನೇ ಸ್ಥಾನದಲ್ಲಿದೆ. ವಿರೋಧ ಪಕ್ಷಗಳ ಆರೋಪದಂತೆ ಸರ್ಕಾರ ದಿವಾಳಿಯಾಗಿದ್ದರೆ ಇದೆಲ್ಲಾ ಮಾಡಲು ಆಗುತ್ತಿತ್ತಾ ಎಂದು ಪ್ರಶ್ನಿಸಿದರು.

ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ: ಸೌಜನ್ಯ ಪ್ರಕರಣದ ತನಿಖೆಯನ್ನು ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಎಸ್‌ಐಟಿಗೆ ವಹಿಸಲಾಗಿದೆ. ಎಸ್‌ಐಟಿ ತನಿಖೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಸೇರಿದಂತೆ ಬಿಜೆಪಿ ನಾಯಕರು ಸ್ವಾಗತಿಸಿದರು. ಈಗ ಬಿಜೆಪಿ ನಾಯಕರು ರಾಜಕೀಯ ಲಾಭಕ್ಕಾಗಿ ಧರ್ಮಸ್ಥಳ ಪಾದಯಾತ್ರೆ ನಾಟಕ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಮಂಜುನಾಥ, ಪ್ರಧಾನ ಕಾರ್ಯದರ್ಶಿ ಯಶೋಧರ ಮೂರ್ತಿ, ಜಿಲ್ಲಾಧ್ಯಕ್ಷ ಎಚ್.ಎನ್‌. ಎಫ್‌. ಮಹಮದ್ ಇಮಾಮ್ ನಿಯಾಜಿ, ಮುಖಂಡರಾದ ಗುಜ್ಜಲ ನಾಗರಾಜ, ವಿನಾಯಕ ಶೆಟ್ಟರ್‌, ಡಾ. ಸಂತೋಷ್, ಆನಂದ್ ಪಿ. ಬಾಬು ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ