-ವಾಗ್ದೇವಿ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ಗುರುವಂದನೆ
ಕನ್ನಡಪ್ರಭ ವಾರ್ತೆ ಹಿರಿಯೂರು
ಗುರುವಿನ ಸ್ಥಾನಕ್ಕೆ ಪೂಜ್ಯನೀಯ ಸ್ಥಾನವಿದೆ. ಕಳೆದ 20ವರ್ಷಗಳ ಹಿಂದಿನ ತಮ್ಮ ವಿದ್ಯಾರ್ಥಿ ಜೀವನವನ್ನು ಸ್ಮರಣೆ ಮಾಡಿಕೊಂಡು ಆ ಸಮಯದ ಗುರುಗಳಿಗೆ ಗೌರವ ಸಲ್ಲಿಸುತ್ತಿರುವುದು ಪ್ರಶಂಸನೀಯ. ಶಿಕ್ಷಕರ ವೃತ್ತಿ ಜೀವನದಲ್ಲಿ ಇದು ಮರೆಯಲಾಗದ ದಿನ. ಮಕ್ಕಳನ್ನು ಶಿಕ್ಷಣದ ಮೂಲಕ ಸುಸಂಸ್ಕೃತರನ್ನಾಗಿ ಸಂಸ್ಕಾರಯುತರನ್ನಾಗಿ ಮಾಡಿ, ನಿಮ್ಮಂತೆ ಗುರುಗಳ ಸೇವೆಯನ್ನು ಮಾಡುವಂತೆ ಬೆಳೆಸಿ ಎಂದು ನಿವೃತ್ತ ಶಿಕ್ಷಕಿ ಶಾರದಮ್ಮ ಹೇಳಿದರು.ಅವರು ನಗರದ ಸಂಗೀತ್ ಕಂಫರ್ಟ್ ಸಭಾಂಗಣದಲ್ಲಿ ವಾಗ್ದೇವಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ1990ರಿಂದ 2002ನೇ ಸಾಲಿನವರೆಗೆ ವ್ಯಾಸಂಗ ಮಾಡಿದ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನೆ ಮತ್ತು ಗುರುಶಿಷ್ಯರ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು.
ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಶಿವಶಂಕರ್ಮಠದ್ ಮಾತನಾಡಿ, ಜೀವನದಲ್ಲಿ ಶಿಸ್ತು , ಸಂಸ್ಕಾರ, ವಿದ್ಯೆ ಮನುಷ್ಯನನ್ನು ಉನ್ನತ ಸ್ಥಾನಕ್ಕೆ ಕೊಂಡೂಯ್ಯುತ್ತವೆ. ಹಳೆಯ ವಿದ್ಯಾರ್ಥಿಗಳಾದ ನೀವುಗಳು ಇಂದು ನಿಮ್ಮದೇ ಆದ ಬದುಕನ್ನು ಕಟ್ಟಿಕೊಂಡಿದ್ದೀರಿ. ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಸಮಾಜದ ಅಭಿವೃದ್ಧಿಗೆ ಕೈ ಜೋಡಿಸುವ ಜೊತೆಗೆ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ನಿಮ್ಮ ಕರ್ತವ್ಯ ಎಂದರು.
ಜಗದೀಶ್ ಭಂಡಾರಿ, ಪೈರೋಜ್, ಅಂಬಿಕಾ, ನೀತಾ,ಲಕ್ಷ್ಮಿ, ದೀಪಾ, ಶಿಲ್ಪಾ ಉಪಸ್ಥಿತರಿದ್ದರು.
ಫೋಟೊ: ನಗರದ ಸಂಗೀತ ಕಂಫರ್ಟ್ ಸಭಾಂಗಣದಲ್ಲಿ ವಾಗ್ದೇವಿ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ಗುರುವಂದನೆ ಕಾರ್ಯಕ್ರಮ ನಡೆಸಿದರು.