ಸಾಮಾಜಿಕ ಮೌಲ್ಯ ಮೈಗೂಡಿಸಿಕೊಳ್ಳಲು ಉತ್ತರ ವಿವಿ ಉಪಕುಲಪತಿ ಬಿ.ಕೆ.ರವಿ ಸಲಹೆ

KannadaprabhaNewsNetwork |  
Published : Jan 19, 2026, 12:45 AM IST
೧೭ಕೆಎಲ್‌ಆರ್-೮ಮುಳಬಾಗಿಲು ಕನಕ ಭವನದಲ್ಲಿ ತಾಲೂಕು ಕುರುಬರ ಸಂಘದಿಂದ ಕಾಗಿನೆಲೆ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ಸಿದ್ದ ರಾಮಾನಂದ ಸ್ವಾಮಿಗೆ ಶ್ರದ್ಧಾಂಜಲಿ ಸಭೆಯಲ್ಲಿ ಬೆಂಗಳೂರು ಉತ್ತರ ವಿವಿ ಉಪಕುಲಪತಿ ಬಿ.ಕೆ.ರವಿ ಮಾತನಾಡಿದರು. | Kannada Prabha

ಸಾರಾಂಶ

ರಾಜ್ಯ ಕುರುಬರ ಸಂಘದ ಮಾಜಿ ನಿರ್ದೇಶಕ ಚನ್ನಾಪುರ ಎನ್.ವೆಂಕಟೇಶ್ ಗೌಡ ಮಾತನಾಡಿ, ಕಳೆದ ನವೆಂಬರ್ ತಿಂಗಳಲ್ಲಿ ಆಂಧ್ರಪ್ರದೇಶದ ತಿರುಪತಿಯಲ್ಲಿ ಕನಕದಾಸರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಅವರೂ ಸಹ ನಮ್ಮ ಜೊತೆ ಬಂದಿದ್ದರು. ಅವರ ಸಮಾಜಮುಖಿ ಕಾರ್ಯಗಳು ಇತರರಿಗೆ ಪ್ರೇರಣೆಯಾಗಿವೆ .

ಮುಳಬಾಗಿಲು: ಕಾಗಿನೆಲೆ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ಸಿದ್ಧರಾಮಾನಂದ ಮಹಾಸ್ವಾಮೀಜಿಯವರು ಸಾಮಾಜಿಕ ಮೌಲ್ಯ ಮೈಗೂಡಿಸಿಕೊಂಡು ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸುತ್ತಿದ್ದರು ಎಂದು ಬೆಂಗಳೂರು ಉತ್ತರ ವಿವಿ ಉಪಕುಲಪತಿ ಬಿ.ಕೆ.ರವಿ ತಿಳಿಸಿದರು. ನಗರದ ಕನಕ ಭವನದಲ್ಲಿ ತಾಲೂಕು ಕುರುಬರ ಸಂಘದಿಂದ ಕಾಗಿನೆಲೆ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ಸಿದ್ಧರಾಮಾನಂದ ಸ್ವಾಮೀಜಿಗೆ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು. ರಾಜ್ಯ ಕುರುಬರ ಸಂಘದ ಮಾಜಿ ನಿರ್ದೇಶಕ ಚನ್ನಾಪುರ ಎನ್.ವೆಂಕಟೇಶ್ ಗೌಡ ಮಾತನಾಡಿ, ಕಳೆದ ನವೆಂಬರ್ ತಿಂಗಳಲ್ಲಿ ಆಂಧ್ರಪ್ರದೇಶದ ತಿರುಪತಿಯಲ್ಲಿ ಕನಕದಾಸರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಅವರೂ ಸಹ ನಮ್ಮ ಜೊತೆ ಬಂದಿದ್ದರು. ಅವರ ಸಮಾಜಮುಖಿ ಕಾರ್ಯಗಳು ಇತರರಿಗೆ ಪ್ರೇರಣೆಯಾಗಿವೆ ಎಂದರು. ತಾಲೂಕು ಕುರುಬರ ಸಂಘದ ಅಧ್ಯಕ್ಷ ಸುಬ್ರಮಣಿ, ಯಡಹಳ್ಳಿ ಸೋಮಶೇಖರ್ ಗೌಡ, ಕೋಳಿ ನಾಗರಾಜ್, ಸಿದ್ದಗಟ್ಟ ಮುನಿಸ್ವಾಮಿಗೌಡ, ಗುಜ್ಜನಹಳ್ಳಿ ಸೋಮಣ್ಣ, ಸಿದ್ದನಹಳ್ಳಿ ಸುರೇಶ್ ಗೌಡ, ಪುರಸಭೆ ಮಾಜಿ ಸದಸ್ಯ ಚಂದ್ರಣ್ಣ, ಕದ್ರಿಪುರ ಮಣಿ, ಶೆಟ್ಟಿ ಬಣಕಣಹಳ್ಳಿ ಜಗದೀಶ್, ಶಂಕರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೆಹಲಿ ಭೇಟಿ ವೇಳೆ ಉಪಮುಖ್ಯಮಂತ್ರಿ ನಿಗೂಢ ಹೇಳಿಕೆ
ಹುಣಸೂರಿನಲ್ಲಿ ₹10 ಕೋಟಿ ಚಿನ್ನ ದೋಚಿದ್ದವರು ಬಿಹಾರದಲ್ಲಿ ಬಲೆಗೆ