ಲ್ಲಾ ಪರಿಷತ್ ಮಾಜಿ ಅಧ್ಯಕ್ಷ ಕುಂಚಿಟಿಗ ಒಕ್ಕಲಿಗ ಸಮಾಜದ ಮುಖಂಡ ಎಚ್.ನಿಂಗಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಅವರು ಈ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
ಕನ್ನಡಪ್ರಭ ವಾರ್ತೆ ತುಮಕೂರು
ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷ ಕುಂಚಿಟಿಗ ಒಕ್ಕಲಿಗ ಸಮಾಜದ ಮುಖಂಡ ಎಚ್.ನಿಂಗಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಅವರು ಈ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು.ನಗರದ ಆದರ್ಶ ನಗರದ ಎಚ್.ನಿಂಗಯ್ಯ ಅವರ ಮನೆಗೆ ಭೇಟಿ ನೀಡಿ ಬೆಂಬಲ ಕೋರಿದರು. ಈ ವೇಳೆ ಮಾತನಾಡಿದ ಎಚ್.ನಿಂಗಯ್ಯ, ಸೋಮಣ್ಣ ಅವರು ವಸತಿ ಸಚಿವರಾಗಿದ್ದಾಗ ಬಡವರಿಗೆ ಹೆಚ್ಚಿನ ಪ್ರಮಾಣದಲ್ಲಿ ಮನೆಗಳನ್ನು ನೀಡಿ ನೆರವಾಗಿದ್ದಾರೆ. ಆಸರೆ ನೀಡುವಂತಹ ಪುಣ್ಯದ ಕೆಲಸ ಮಾಡಿದ್ದೀರಿ, ಈ ಚುನಾವಣೆಯಲ್ಲಿ ಜನ ನಿಮ್ಮ ಕೈ ಹಿಡಿದು ಆಯ್ಕೆ ಮಾಡುತ್ತಾರೆ ಎಂದು ಹೇಳಿದರು. ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಮುಖಂಡರಾದ ದೊಡ್ಡಮನೆ ಗೋಪಾಲಗೌಡ, ಡಾ.ಪರಮೇಶ್, ದೊಡ್ಡಲಿಂಗಪ್ಪ, ತುಂಬಾಡಿ ದೇವರಾಜು, ಚೆನ್ನಿಗಪ್ಪ ಮೊದಲಾದವರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.