ದನ, ಕರು, ಎಮ್ಮೆಗಳಿಗೆ ತಪ್ಪದೇ ಲಸಿಕೆ ಹಾಕಿಸಿ

KannadaprabhaNewsNetwork |  
Published : Nov 08, 2025, 02:00 AM IST
3ಕೆಡಿವಿಜಿ1-ದಾವಣಗೆರೆಯ ತಮ್ಮ ಗೃಹ ಕಚೇರಿ ಶಿವ ಪಾರ್ವತಿಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ತಮ್ಮ ಮನೆಯ ಪುಂಗನೂರು ಕರುಗಳಿಗೆ ಲಸಿಕೆ ಕೊಡಿಸುವ ಮೂಲಕ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 8ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. | Kannada Prabha

ಸಾರಾಂಶ

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 8ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸೋಮವಾರ ನಗರದಲ್ಲಿ ಚಾಲನೆ ನೀಡಿದರು.

- ಕಾಲು-ಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಸಂಸದೆ ಡಾ.ಪ್ರಭಾ

- - - ಕನ್ನಡಪ್ರಭ ವಾರ್ತೆ ದಾವಣಗೆರೆ

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 8ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸೋಮವಾರ ನಗರದಲ್ಲಿ ಚಾಲನೆ ನೀಡಿದರು.

ನಗರದ ತಮ್ಮ ಗೃಹ ಕಚೇರಿ ಶಿವ ಪಾರ್ವತಿ ಆವರಣದಲ್ಲಿ ತಮ್ಮ ಮನೆಯ ಮುದ್ದಿನ ಪುಂಗನೂರು ಕರುಗಳಿಗೆ ಲಸಿಕೆ ಕೊಡಿಸುವ ಮೂಲಕ ರಾಷ್ಟ್ರೀಯಜಾನುವಾರ ರೋಗ ನಿಯಂತ್ರಣ ಕಾರ್ಯಕ್ರಮದ 8ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು.

ಜಾನುವಾರುಗಳನ್ನು ಬಾಧಿಸುವ ಕಾಲುಬಾಯಿ ರೋಗವು ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾಗಿದೆ. ರೈತರಿಗೆ ತೀವ್ರ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುವ, ರಾಸುಗಳಿಗೆ ಕಾಡುವ ಕಾಲುಬಾಯಿ ರೋಗವನ್ನು ನಿಯಂತ್ರಿಸಿ, ಅದನ್ನು ನಿರ್ಮೂಲನೆ ಮಾಡಲು ಪ್ರತಿ 6 ತಿಂಗಳಿಗೊಮ್ಮೆ ರೋಗದ ವಿರುದ್ಧ ತಪ್ಪದೇ ಲಸಿಕೆ ಹಾಕಿಸಬೇಕು ಎಂದು ಸಂಸದರು ತಿಳಿಸಿದರು.

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯ ಎಲ್ಲ ರೈತರ ಎಲ್ಲ ದನ, ಕರುಗಳು, ಎಮ್ಮೆ, ಕೋಣ, ಎತ್ತುಗಳಿಗೆ ಉಚಿತವಾಗಿ ನೀಡುವ ಲಸಿಕಾ ಕಾರ್ಯಕ್ರಮವನ್ನು ನ.3ರಿಂದ ಡಿಸೆಂಬರ್ 2ರವರೆಗೆ ಹಮ್ಮಿಕೊಳ್ಳಲಾಗಿದೆ. ಲಸಿಕೆ ಹಾಕುವ ವೇಳೆ ಪ್ರತಿ ಜಾನುವಾರುವಿಗೆ ಪ್ರತ್ಯೇಕ ಸಿರಿಂಜ್ ಮತ್ತು ನೀಡಲ್‌ಗಳನ್ನು ಬಳಸಲಾಗುವುದು. ಲಸಿಕೆದಾರರು ನಿಮ್ಮ ಗ್ರಾಮಕ್ಕೆ, ನಿಮ್ಮ ಮನೆ ಬಾಗಿಲಿಗೆ ಭೇಟಿ ನೀಡಿ. ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ ಎಂದರು.

ಪ್ರತಿಯೊಬ್ಬರೂ ತಮ್ಮ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಿ, ರೋಗ ಬರದಂತೆ ಜಾನುವಾರುಗಳನ್ನು ರಕ್ಷಿಸಬೇಕು. ಆಗಬಹುದಾದ ಆರ್ಥಿಕ ನಷ್ಟದಿಂದಲೂ ಪಾರಾಗಬೇಕು. ದಾವಣಗೆರೆ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯವನ್ನು ಕಾಲುಬಾಯಿ ರೋಗಮುಕ್ತ ವಲಯವನ್ನಾಗಿಸಬೇಕು. ಇಲಾಖೆ ಅಧಿಕಾರಿ, ಸಿಬ್ಬಂದಿ ಆಯಾ ಗ್ರಾಮಕ್ಕೆ ಭೇಟಿ ನೀಡುವ ವೇಳೆ ರೈತರು, ಹೈನುಗಾರಿಕೆ ಮಾಡುವವರು. ಜಿಲ್ಲಾದ್ಯಂತ ಒಂದು ತಿಂಗಳ ಕಾಲ ಲಸಿಕಾ ಅಭಿಯಾನ ನಡೆಯಲಿದ್ದು, ಗ್ರಾಮೀಣ ಕುಟುಂಬಗಳು ಸಹಕರಿಸಿ, ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಕಾಂಗ್ರೆಸ್ ಮುಖಂಡರು ಇದ್ದರು.

- - -

-3ಕೆಡಿವಿಜಿ1.ಜೆಪಿಜಿ:

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಕಾಲು-ಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಚಾಲನೆ ನೀಡಿದರು.

PREV

Recommended Stories

83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!