ಕನ್ನಡಪ್ರಭ ವಾರ್ತೆ ಹೊಳೆನರಸೀಪುರ ನಾಯಿ ಕಡಿತದಿಂದ ಉಂಟಾಗುವ ರೇಬಿಸ್ ಸೋಂಕಿಗೆ ಯಾವುದೇ ಔಷಧವಿಲ್ಲ. ಜತೆಗೆ ಇದು ಮಾರಣಾಂತಿಕವಾಗಿದೆ. ಆದ್ದರಿಂದ ನಾಯಿ ಕಡಿದರೂ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ನಾಯಿಗಳಿಗೆ ರೇಬಿಸ್ ಲಸಿಕೆ ನೀಡಲು ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ ಎಂದು ಪಶುಸಂಗೋಪನೆ ಇಲಾಖೆ ವೈದ್ಯರಾದ ಡಾ. ನಿಧಾ ಮಾಹಿತಿ ನೀಡಿದರು.
ಪುರಸಭೆಯ ಪರಿಸರ ಎಂಜಿನಿಯರ್ ರುಚಿದರ್ಶಿನಿ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿ ೫ ಸಾವಿರಕ್ಕೂ ಹೆಚ್ಚು ಬೀದಿನಾಯಿಗಳು ಇದ್ದು, ವಾರಕ್ಕೆ ಒಮ್ಮೆ ೧೨೦ ರಿಂದ ೧೫೦ ನಾಯಿಗಳಿಗೆ ಚುಚ್ಚುಮದ್ದು ನೀಡಲಾಗುತ್ತದೆ ಮತ್ತು ೬ ತಿಂಗಳಿಗೆ ಒಮ್ಮೆ ಚುಚ್ಚುಮದ್ದು ನೀಡಬೇಕಿರುವ ಕಾರಣದಿಂದ ಆ್ಯಂಟಿ - ರೇಬಿಸ್ ಲಸಿಕೆ, ಹುಚ್ಚು ನಾಯಿ ರೋಗದ ಲಸಿಕೆ ನೀಡುವ ಯೋಜನೆ ನಿರಂತರವಾಗಿರುತ್ತೆ ಎಂದು ಮಾಹಿತಿ ನೀಡಿದರು.
ಪುರಸಭೆ ಮುಖ್ಯಾಧಿಕಾರಿ ಶಿವಶಂಕರ್, ವ್ಯವಸ್ಥಾಪಕಿ ಪಂಕಜಾ, ಅಧಿಕಾರಿ ರಮೇಶ್, ಆರೋಗ್ಯಾಧಿಕಾರಿ ವಸಂತ್, ಮೇಸ್ತ್ರಿ ಚಲುವ, ಮಾದಯ್ಯ, ನಾಗಮ್ಮ, ಕಿರಣ್ ಇತರರು ಇದ್ದರು.