ಸಮಾಜಕಕ್ಕೆ ವಚನಕಾರ್ತಿಯರ ಕೊಡುಗೆ ಅನನ್ಯ: ಶಿಕ್ಷಕಿ ಎಂ.ಗಿರಿಜಾಂಬ

KannadaprabhaNewsNetwork |  
Published : Jul 02, 2026, 02:00 AM IST
ವಿಜೆಪಿ ೨೯ವಿಜಯಪುರ ಪಟ್ಟಣದ ಶ್ರೀ ನಗರೇಶ್ವರಸ್ವಾಮಿ ಪ್ರಾರ್ಥನಾಮಂದಿರದಲ್ಲಿ ಶ್ರೀ ವೀರಭದ್ರಸ್ವಾಮಿಗೋಷ್ಟಿ ಅಕ್ಕನಬಳಗ ಸೇವಾಟ್ರಸ್ಟ್ ವತಿಯಿಂದ ನಡೆದ ಶಿವಾನುಭವಗೋಷ್ಟಿ ಕಾರ್ಯಕ್ರಮದಲ್ಲಿ ಶಿಕ್ಷಕಿ ಎಂ.ಗಿರಿಜಾಂಬರುದ್ರೇಶಮೂರ್ತಿ ಅವರನ್ನು ಸನ್ಮಾನಿಸಲಾಯಿತು. ವಿ.ಅನಿಲ್‌ಕುಮಾರ್, ಮ.ಸುರೇಶ್‌ಬಾಬು, ಕೃಷ್ಣಾನಂದ್,  ಅನಿತಾಸುಮಂತ್, ಮತ್ತಿತರರು ಇದ್ದರು. | Kannada Prabha

ಸಾರಾಂಶ

ಇತಿಹಾಸದ ಪುಟಗಳಲ್ಲಿ ಮತ್ತು ಮುಖ್ಯವಾಹಿನಿಯ ಚರ್ಚೆಗಳಲ್ಲಿ ಬೆಳಕಿಗೆ ಬಾರದೆ ಶಿವಶರಣೆಯರು, ವಚನಕಾರ್ತಿಯರು ಸಾಕಷ್ಟು ಕೊಡುಗೆ ನೀಡಿದ್ದಾರೆ. ಅಕ್ಕಮಹಾದೇವಿ, ನೀಲಾಂಬಿಕೆಯವರಷ್ಟೇ ಅಲ್ಲದೆ ಆಯ್ದಕ್ಕಿ ಲಕ್ಕಮ್ಮ, ಗೊಗ್ಗವ್ವೆ, ಸಂಕವ್ವೆ, ಕಾಳವ್ವೆ ಸೇರಿ ಅನೇಕ ಶರಣೆಯರು ತಮ್ಮ ವಚನಗಳ ಮೂಲಕ ಸಾಮಾಜಿಕ ಅನಿಷ್ಟಗಳು, ಮೂಢನಂಬಿಕೆಗಳನ್ನು ಅತ್ಯಂತ ತೀಕ್ಷ್ಣವಾಗಿ ಪ್ರಶ್ನಿಸಿದ್ದರು. ಉಪೇಕ್ಷಿತ ವಚನಕಾರ್ತಿಯರು ಕೇವಲ ಪುರುಷ ಪ್ರಧಾನ ವ್ಯವಸ್ಥೆ ಮಾತ್ರವಲ್ಲದೆ, ಅಂದಿನ ಧಾರ್ಮಿಕ ಕಟ್ಟುಪಾಡುಗಳನ್ನು ಧೈರ್ಯವಾಗಿ ಎದುರಿಸಿದ್ದರು. ಶರಣೆಯರ ವಚನಗಳಲ್ಲಿ ಸ್ತ್ರೀವಾದಿ ಚಿಂತನೆಗಳು, ಆತ್ಮಾಭಿಮಾನ ಮತ್ತು ಸಾಮಾಜಿಕ ಸುಧಾರಣೆಯ ತೀವ್ರ ಹಂಬಲ ಎದ್ದು ಕಾಣುತ್ತಿತ್ತು .

ವಿಜಯಪುರ: ೧೨ನೇ ಶತಮಾನದ ವಚನ ಸಾಹಿತ್ಯ ಚಳವಳಿ ಕೇವಲ ಧಾರ್ಮಿಕ ಕ್ರಾಂತಿಯಲ್ಲ, ಅದು ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಸಾರಿದ ಜಗತ್ತಿನ ಮೊದಲ ಸಾಮಾಜಿಕ ಮತ್ತು ನೈತಿಕ ಆಂದೋಲನ ಎಂದು ಶಿಕ್ಷಕಿ ಎಂ.ಗಿರಿಜಾಂಬ ಅಭಿಪ್ರಾಯಪಟ್ಟರು.

ಪಟ್ಟಣದಲ್ಲಿ ವೀರಭದ್ರಸ್ವಾಮಿ ಗೋಷ್ಠಿ, ಅಕ್ಕನ ಬಳಗ ಸೇವಾಟ್ರಸ್ಟ್ ಹಮ್ಮಿಕೊಂಡಿದ್ದ ಶಿವಾನುಭವಗೋಷ್ಠಿಯಲ್ಲಿ ಉಪೇಕ್ಷಿತ ವಚನಕಾರ್ತಿಯರು ಮತ್ತು ಕೊಡುಗೆಗಳು ಕುರಿತು ಉಪನ್ಯಾಸ ನೀಡಿದ ಅವರು, ಜಾತಿ, ಧರ್ಮ ಮತ್ತು ಲಿಂಗ ತಾರತಮ್ಯಗಳ ವಿರುದ್ಧ ಶರಣರು ನಡೆಸಿದ ವಚನಕ್ರಾಂತಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಿತು. ಕಾಯಕ ಮತ್ತು ದಾಸೋಹ ಸಿದ್ಧಾಂತಗಳು ಸಮಾಜದಲ್ಲಿ ಶ್ರಮದ ಗೌರವವನ್ನು ಎತ್ತಿಹಿಡಿದವು. ವಚನಗಳಲ್ಲಿ ಅಡಕವಾಗಿರುವ ಸತ್ಯ, ಪ್ರಾಮಾಣಿಕತೆ, ಕರುಣೆ ಮತ್ತು ಸದಾಚಾರದಂತಹ ನೈತಿಕ ಮೌಲ್ಯಗಳು ಇಂದಿನ ಆಧುನಿಕ ಸಮಾಜಕ್ಕೂ ಅತ್ಯಂತ ಪ್ರಸ್ತುತ ಹಾಗೂ ದಾರಿದೀಪ ಎಂದರು.

ಇತಿಹಾಸದ ಪುಟಗಳಲ್ಲಿ ಮತ್ತು ಮುಖ್ಯವಾಹಿನಿಯ ಚರ್ಚೆಗಳಲ್ಲಿ ಬೆಳಕಿಗೆ ಬಾರದೆ ಶಿವಶರಣೆಯರು, ವಚನಕಾರ್ತಿಯರು ಸಾಕಷ್ಟು ಕೊಡುಗೆ ನೀಡಿದ್ದಾರೆ. ಅಕ್ಕಮಹಾದೇವಿ, ನೀಲಾಂಬಿಕೆಯವರಷ್ಟೇ ಅಲ್ಲದೆ ಆಯ್ದಕ್ಕಿ ಲಕ್ಕಮ್ಮ, ಗೊಗ್ಗವ್ವೆ, ಸಂಕವ್ವೆ, ಕಾಳವ್ವೆ ಸೇರಿ ಅನೇಕ ಶರಣೆಯರು ತಮ್ಮ ವಚನಗಳ ಮೂಲಕ ಸಾಮಾಜಿಕ ಅನಿಷ್ಟಗಳು, ಮೂಢನಂಬಿಕೆಗಳನ್ನು ಅತ್ಯಂತ ತೀಕ್ಷ್ಣವಾಗಿ ಪ್ರಶ್ನಿಸಿದ್ದರು. ಉಪೇಕ್ಷಿತ ವಚನಕಾರ್ತಿಯರು ಕೇವಲ ಪುರುಷ ಪ್ರಧಾನ ವ್ಯವಸ್ಥೆ ಮಾತ್ರವಲ್ಲದೆ, ಅಂದಿನ ಧಾರ್ಮಿಕ ಕಟ್ಟುಪಾಡುಗಳನ್ನು ಧೈರ್ಯವಾಗಿ ಎದುರಿಸಿದ್ದರು. ಶರಣೆಯರ ವಚನಗಳಲ್ಲಿ ಸ್ತ್ರೀವಾದಿ ಚಿಂತನೆಗಳು, ಆತ್ಮಾಭಿಮಾನ ಮತ್ತು ಸಾಮಾಜಿಕ ಸುಧಾರಣೆಯ ತೀವ್ರ ಹಂಬಲ ಎದ್ದು ಕಾಣುತ್ತಿತ್ತು ಎಂದರು.

ಅಕ್ಕನಬಳಗ ಸೇವಾಟ್ರಸ್ಟ್‌ ಅಧ್ಯಕ್ಷ ವಿ.ಅನಿಲ್‌ಕುಮಾರ್ ಮಾತನಾಡಿ, ವಚನ ಸಾಹಿತ್ಯದ ಆಳವಾದ ಅಧ್ಯಯನ ಇಂದಿನ ಯುವ ಪೀಳಿಗೆಗೆ ಅಗತ್ಯವಾಗಿದೆ ಎಂದರು.

ಗೋಷ್ಠಿ ಬಳಗದ ಕಾರ್ಯದರ್ಶಿ ಮ.ಸುರೇಶ್‌ಬಾಬು, ಅನಿತಾ ಸುಮಂತ್, ಅರಿವಿನ ಮನೆಯ ಕೃಷ್ಣಾನಂದ್, ಅಂಬಾ ಭವಾನಿ, ಮಹದೇವಮ್ಮ, ವಿಮಲಾಂಬ, ಮೀನಾ ಸುರೇಶ್, ದಾಕ್ಷಾಯಿಣಮ್ಮ, ರಾಷ್ಟ್ರೀಯ ಬಸವದಳದ ಮ.ಜಯದೇವ್, ಜಿಲ್ಲಾ ಶರಣಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಹಡಪದ್, ಮಾಜಿ ಅಧ್ಯಕ್ಷ ಎಚ್.ಎಸ್.ರುದ್ರೇಶಮೂರ್ತಿ, ಬಿ.ಪುಟ್ಟರಾಜಣ್ಣ, ವಿ.ಆರ್.ಮಹದೇವ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಲಪತಿ ನೇಮಕಾತಿ ಶೋಧನಾ ಸಮಿತಿ ರದ್ದುಗೊಳಿಸಲು ಆಗ್ರಹ
ವರದಕ್ಷಿಣೆ ಕಿರುಕುಳ, ದಪ್ಪವಾಗಿದ್ದೀಯಾ ಎಂದು ಹಂಗಿಸಿ ಪತ್ನಿ ಹತ್ಯೆಗೈದ ಪತಿ