ವಡ್ಡರದೊಡ್ಡಿ ಅಪಘಾತ: ಬೈಕ್ ಸವಾರನಿಗೆ ಕಾಲು ಮುರಿತ

KannadaprabhaNewsNetwork |  
Published : Dec 26, 2025, 01:45 AM IST
 ಅಪಘಾತದಲ್ಲಿ ಬೈಕ್ ಸವಾರನೊಬ್ಬರಿಗೆ ಕಾಲು ಮುರಿತ | Kannada Prabha

ಸಾರಾಂಶ

ಮಾರ್ಟಳ್ಳಿ ಕಡೆಯಿಂದ ತಮ್ಮ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಎದುರು ಬಂದ ಬಾರ್‌ಗಳಿಗೆ ಮದ್ಯ ಸಾಗಿಸುತ್ತಿದ್ದ ಗೂಡ್ಸ್ ವಾಹನದೊಂದಿಗೆ ಡಿಕ್ಕಿ ಸಂಭವಿಸಿದೆ.

ಹನೂರು:

ತಾಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದ ಬಳಿ ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರನೊಬ್ಬರಿಗೆ ಕಾಲು ಮುರಿತವಾಗಿದೆ.

ವಡ್ಡರದೊಡ್ಡಿ ಗ್ರಾಮದ ನಿವಾಸಿ ಅಂಥೋಣಿ (35) ಗಾಯಗೊಂಡವರು. ಅವರು ಮಾರ್ಟಳ್ಳಿ ಕಡೆಯಿಂದ ತಮ್ಮ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಎದುರು ಬಂದ ಬಾರ್‌ಗಳಿಗೆ ಮದ್ಯ ಸಾಗಿಸುತ್ತಿದ್ದ ಗೂಡ್ಸ್ ವಾಹನದೊಂದಿಗೆ ಡಿಕ್ಕಿ ಸಂಭವಿಸಿದೆ. ಅಪಘಾತದ ಪರಿಣಾಮವಾಗಿ ಅಂಥೋಣಿಗೆ ಕಾಲು ಮುರಿತವಾಗಿದೆ.ಸ್ಥಳೀಯರು ಗಾಯಾಳುವನ್ನು ತಕ್ಷಣ ಸುಳ್ವಾಡಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದರು. ಬಳಿಕ ಕುಟುಂಬಸ್ಥರು ಹೆಚ್ಚಿನ ಚಿಕಿತ್ಸೆಗೆ ಕೊಳ್ಳೇಗಾಲದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ರಾಮಾಪುರ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.------------

25ಸಿಎಚ್ಎನ್‌13

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುರ್ಚಿ ಸರ್ಕಸ್‌ ಮಧ್ಯೆ ಇಂದು ಸಿದ್ದು ದೆಹಲಿಗೆ - ನಾಳೆ ಸಿಡಬ್ಲುಸಿ ಸಭೆಯಲ್ಲಿ ಸಿಎಂ ಭಾಗಿ
ಭೂಪರಿವರ್ತನೆ ಇನ್ನು ಅತಿ ಸರಳ