ವಹ್ನಿಕುಲ ಕ್ಷತ್ರಿಯರ ಗುರುಪೀಠದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮುನಿಯಪ್ಪ

KannadaprabhaNewsNetwork |  
Published : Jun 30, 2025, 12:34 AM IST
ಫೋಟೋ: 29 ಹೆಚ್‌ಎಸ್‌ಕೆ4ಹೊಸಕೋಟೆ ತಾಲೂಕಿನ ವಹ್ನಿಕುಲ ಕ್ಷತ್ರಿಯರ ಗುರುಪೀಠದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಸಿ.ಮುನಿಯಪ್ಪನವರು ಆಯ್ಕೆಯಾಗಿದ್ದು ವಹ್ನಿಕುಲ ಕ್ಷತ್ರಿಯರ ಗುರುಪೀಠ ಶಿವನಾಪುರ ಶಾಖೆಯ ಶ್ರೀ ಪರಮಪೂಜ್ಯ ಜಗದ್ಗುರು ಪ್ರಣವಾನಂದ ಪುರಿ ಸ್ವಾಮೀಜಿ ಅಭಿನಂದಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ವಹ್ನಿಕುಲ ಸಮುದಾಯ ಮಠದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ವಹ್ನಿಕುಲ ಕ್ಷತ್ರಿಯರ ಗುರುಪೀಠ ಶಿವನಾಪುರ ಶಾಖೆಯ ಶ್ರೀ ಪರಮಪೂಜ್ಯ ಜಗದ್ಗುರು ಪ್ರಣವಾನಂದ ಪುರಿ ಸ್ವಾಮೀಜಿ ಹೇಳಿದರು.

ಹೊಸಕೋಟೆ: ವಹ್ನಿಕುಲ ಸಮುದಾಯ ಮಠದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ವಹ್ನಿಕುಲ ಕ್ಷತ್ರಿಯರ ಗುರುಪೀಠ ಶಿವನಾಪುರ ಶಾಖೆಯ ಶ್ರೀ ಪರಮಪೂಜ್ಯ ಜಗದ್ಗುರು ಪ್ರಣವಾನಂದ ಪುರಿ ಸ್ವಾಮೀಜಿ ಹೇಳಿದರು.

ತಾಲೂಕಿನ ನಂದಗುಡಿ ಹೋಬಳಿಯ ಶಿವನಾಪುರದಲ್ಲಿ ವಹ್ನಿಕುಲ ಕ್ಷತ್ರಿಯರ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಗುರುಪೀಠದ ಅಭಿವೃದ್ಧಿ ಸಮತಿ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿದ ಅವರು, ವಹ್ನಿಕುಲ ಕ್ಷತ್ರಿಯರ ಗುರುಪೀಠದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಸಿ.ಮುನಿಯಪ್ಪ ಆಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಜನಾಂಗದ ಹೋಬಳಿ, ತಾಲೂಕು, ಜಿಲ್ಲಾ ಮಟ್ಟದ ಪದಾಧಿಕಾರಿಗಳ ಆಯ್ಕೆ ಮಾಡಲಾಗುವುದು. ಜನಾಂಗದ ಎಲ್ಲಾ ಮುಖಂಡರು ಪದಾಧಿಕಾರಿಗಳಿಗೆ ಬೆಂಬಲ ನೀಡಿ ಮಠದ ಅಭಿವೃದ್ಧಿಗೆ ಕೈ ಜೋಡಿಸಬೇಕು. ಜುಲೈ11ರಂದು ಶುಕ್ರವಾರ ಸಂಜೆ 5 ಗಂಟೆಗೆ ಮಠದಲ್ಲಿ ಗುರು ಪೌರ್ಣಮಿ ಇರುತ್ತದೆ. ಆದ್ದರಿಂದ ಜನಾಂಗದ ಎಲ್ಲರೂ ಭಾಗವಹಿಸಬೇಕೆಂದು ಮನವಿ ಮಾಡಿದರು.

ನೂತನ ಅಧ್ಯಕ್ಷ ಸಿ.ಮುನಿಯಪ್ಪ ಮಾತನಾಡಿ, ಸ್ವಾಮೀಜಿ ಆಶೀರ್ವಾದದಿಂದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ನಾನು ಮಠದ ಅಭಿವೃದ್ಧಿ ಧ್ಯೇಯೋದ್ದೇಶಗಳಿಗೆ ಶ್ರಮಿಸುತ್ತೇನೆ. ಸ್ವಾಮೀಜಿ ಜೊತೆಗೂಡಿ ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಮಾಡಿ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಮುಂದಿನ ದಿನಗಳಲಿ ಜಿಲ್ಲಾ, ತಾಲೂಕು ಮಟ್ಟದಲ್ಲಿ ವಸತಿ ನಿಲಯಗಳನ್ನ ತೆರೆದು ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದರು.

ಸಭೆಯಲ್ಲಿ ಜನಾಂಗದ ಮುಖಂಡರಾದ ಎಚ್.ಆರ್.ಸೋಮನಾಥ್, ವಿಜಿಕುಮಾರ್, ಜೆ.ಎನ್.ನಾಗರಾಜ್, ಎನ್.ಮನೋಹರ್, ಬುಲ್ಲೆಟ್ ನಾರಾಯಣಸ್ವಾಮಿ, ಕೆ.ಆರ್.ಶ್ರೀನಿವಾಸ್, ಅರುಣ್‌ಕುಮಾರ್, ಮಾಕನಹಳ್ಳಿ ಮುನಿರಾಜು, ಮಾರ್ಕಂಡಪ್ಪ, ಮಣಿ, ಗೋಪಾಲ್ ಮುಖಂಡರು ಭಾಗವಹಿಸಿದ್ದರು.

ಫೋಟೋ: 29 ಹೆಚ್‌ಎಸ್‌ಕೆ4

ಹೊಸಕೋಟೆ ತಾಲೂಕಿನ ವಹ್ನಿಕುಲ ಕ್ಷತ್ರಿಯರ ಗುರುಪೀಠದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಿ.ಮುನಿಯಪ್ಪ ಅವರನ್ನು ವಹ್ನಿಕುಲ ಕ್ಷತ್ರಿಯರ ಗುರುಪೀಠ ಶಿವನಾಪುರ ಶಾಖೆಯ ಶ್ರೀ ಪರಮಪೂಜ್ಯ ಜಗದ್ಗುರು ಪ್ರಣವಾನಂದ ಪುರಿ ಸ್ವಾಮೀಜಿ ಅಭಿನಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆ ಕೋರಿಕೆ : ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ