ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ೨೦೨೪ನೇ ಸಾಲಿನ ಶ್ರೀವೈರಮುಡಿ ಬ್ರಹ್ಮೋತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆ ನಡೆಸಿ ಮಾತನಾಡಿದರು. ಜಿಲ್ಲಾ ಖಜಾನೆಯಿಂದ ವೈರಮುಡಿ ಪೆಟ್ಟಿಗೆಯನ್ನು ಮಾ.೨೧ರಂದು ಬೆಳಗ್ಗೆ ೭ ಗಂಟೆಗೆ ಪಡೆದು ಮೇಲುಕೋಟೆಗೆ ತೆಗೆದುಕೊಂಡು ಹೋಗಲಾಗುವುದು. ಈ ಸಮಯದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಯಾಗಬೇಕು. ಶ್ರೀವೈರಮುಡಿ ಬ್ರಹ್ಮೋತ್ಸವವು ಮಾ.೨೧ರಂದು ರಾತ್ರಿ ೮ ಗಂಟೆಗೆ ಪ್ರಾರಂಭವಾಗಲಿದೆ ಎಂದರು.
ಕುಡಿಯುವ ನೀರಿನ ವ್ಯವಸ್ಥೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸ್ಥಳಗಳಲ್ಲಿ ನೀರಿನ ಟ್ಯಾಂಕರ್ಗಳ ವ್ಯವಸ್ಥೆ ಮಾಡಬೇಕು. ಹಾಲಿ ಇರುವ ನೀರಿನ ಟ್ಯಾಂಕ್ಗಳನ್ನು ಸ್ವಚ್ಛಗೊಳಿಸಿ ಶುದ್ಧ ಕುಡಿಯುವ ನೀರು ಒದಗಿಸುವಂತೆ ಹೇಳಿದರು.ದೊಡ್ಡ ಕಲ್ಯಾಣಿಯ ಬಳಿ ಬಟ್ಟೆ ಬದಲಾಯಿಸಲು ತಾತ್ಕಾಲಿಕ ಶೆಡ್ಗಳನ್ನು ನಿರ್ಮಾಣ ಮಾಡಿ, ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯ ನುರಿತ ಈಜುಗಾರರನ್ನು ಕಲ್ಯಾಣಿಗಳ ಬಳಿ ನಿಯೋಜಿಸುವಂತೆ ಸೂಚಿಸಿದರು.
ವೈರಮುಡಿ ಪ್ರಾರಂಭದಿಂದ ಮುಕ್ತಾಯದವರೆಗೆ ಕ್ಷೇತ್ರಕ್ಕೆ ನಿರಂತರ ವಿದ್ಯುತ್ ಸರಬರಾಜು ಮಾಡುವುದು. ಕಲ್ಯಾಣಿ, ಪಾರ್ಕಿಂಗ್ ಸ್ಥಳಗಳಲ್ಲಿ ಹೆಚ್ಷಿನ ವಿದ್ಯುತ್ ದೀಪಗಳ ವ್ಯವಸ್ಥೆ ಮಾಡಿ ವಿದ್ಯುತ್ ಅವಘಡಗಳು ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಶ್ರೀ ಚಲುವನಾರಾಯಣಸ್ವಾಮಿ ಹಾಗೂ ಶ್ರೀ ಯೋಗಾ ನರಸಿಂಹ ಸ್ವಾಮಿ ದೇವಾಲಯಗಳಿಗೆ, ಪ್ರಮುಖ ಮಂಟಪ, ಕಲ್ಯಾಣಿಗಳಿಗೆ ವಿಶೇಷ ದೀಪಾಲಂಕಾರ ಹಾಗೂ ಹೂವಿನ ಅಲಂಕಾರ ಮಾಡಲು ಕ್ರಮ ವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ವಿಭಾಗೀಯ ಸಾರಿಗೆ ನಿಯಂತ್ರಣಾಧಿಕಾರಿ ನಾಗರಾಜು, ಪಾಂಡವಪುರ ವಿಭಾಗಾಧಿಕಾರಿ ನಂದೀಶ್, ಲೋಕಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಹರ್ಷ, ಆರೋಗ್ಯ ಇಲಾಖೆಯ ಡಾ.ಸೋಮಶೇಖರ್, ಮುಜರಾಯಿ ತಹಸೀಲ್ದಾರ್ ತಮ್ಮೇಗೌಡ, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಮೋಹನ್ ಕುಮಾರ್ ಇನ್ನಿತರರು ಉಪಸ್ಥಿತರಿದ್ದರು.