ಕನ್ನಡಪ್ರಭ ವಾರ್ತೆ ಹುನಗುಂದ
ಪಟ್ಟಣದ ಗುರುಭವನದಲ್ಲಿ ತಾಲೂಕಾಡಳಿತ, ತಾಪಂ, ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಹಾಗೂ ವಾಲ್ಮೀಕಿ ಸಮಾಜದ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ನನ್ನ ಅವಧಿಯಲ್ಲಿ ಹುನಗುಂದ ಮತ್ತು ಇಳಕಲ್ ಅವಳಿ ತಾಲೂಕಿಗೆ ₹50 ಲಕ್ಷ ಅನುದಾನ ನೀಡಿ ವಾಲ್ಮೀಕಿ ಸಮುದಾಯ ಭವನ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಈಗ ಅವಳಿ ತಾಲೂಕಿನ ಸಮುದಾಯ ಭವನಕ್ಕೆ ಸರ್ಕಾರದಿಂದ ಮತ್ತೆ ₹75 ಲಕ್ಷ ಅನುದಾನ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸಿ ಭವನ ಉದ್ಘಾಟಿಸಿ ಮುಂಬರುವಜಯಂತಿಯನ್ನು ನೂತನ ಸಮುದಾಯ ಭವನದಲ್ಲಿ ಆಚರಿಸೋಣ. ಪರಿಶಿಷ್ಟ ಪಂಗಡ ವಸತಿ ನಿಲಯ ಆರಂಭಿಸುವ ಮೂಲಕ ಆ ಸಮುದಾಯದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.
ಬಸವನಬಾಗೇವಾಡಿಯ ಸಂಗನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಮಹರ್ಷಿ ವಾಲ್ಮೀಕಿಯವರ ಜೀವನ ಸಂದೇಶ ಹಾಗೂ ತತ್ವಾದರ್ಶಗಳು ನಾಡಿನ ಎಲ್ಲೆಡೆ ಪಸರಿಸಬೇಕು ಎಂದರು.ಬಾಗಲಕೋಟೆಯ ನಿವೃತ್ತ ಉಪನ್ಯಾಸಕ ಜೆ.ಕೆ ತಳವಾರ ವಿಶೇಷ ಉಪನ್ಯಾಸ ನೀಡಿದರು.ಇದೇ ವೇಳೆ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸಮಾಜದ ಪ್ರತಿಭಾನ್ವಿತ ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಆದರ್ಶ ಪುರುಷ ರಾಮನನ್ನು ಇಂದು ಕೆಲವೊಂದು ಪಟ್ಟಭದ್ರ ಹಿತಾಶಕ್ತಿಗಳು ವೈಯಕ್ತಿಕ ಲಾಭಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಮಹಾತ್ಮ ಗಾಂಧಿ ಕಂಡ ಮಹಾಪುರುಷ ಶ್ರೀರಾಮಚಂದ್ರನೇ ಬೇರೆ, ಇಂದು ಬಳಕೆಯಾಗುತ್ತಿರುವ ಶ್ರೀರಾಮಚಂದ್ರನೇ ಬೇರೆ.