ಸವಣೂರು: ಮಹರ್ಷಿ ವಾಲ್ಮೀಕಿ ಅವರು ರಾಮಾಯಣವನ್ನು ರಚಿಸುವ ಮೂಲಕ ಶ್ರೀರಾಮಚಂದ್ರ ಸೀತಾಮಾತೆ ಹಾಗೂ ಆಂಜನೇಯನನ್ನು ಈ ಜಗತ್ತಿಗೆ ಪರಿಚಯಿಸಿದ ಮಹಾನ್ ತತ್ವಜ್ಞಾನಿಯಾಗಿದ್ದಾರೆ ಎಂದು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ಹೇಳಿದರು.
ಇದಕ್ಕೂ ಪೂರ್ವದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಯ ಸಹಯೋಗದಲ್ಲಿ ಕೈಗೊಳ್ಳಲಾಗಿದ್ದ ಮಹರ್ಷಿ ವಾಲ್ಮೀಕಿ ಬೃಹತ್ ಭಾವಚಿತ್ರ ಮೆರವಣಿಗೆಯಲ್ಲಿ ಶಾಸಕ ಪಠಾಣ ಟ್ರ್ಯಾಕ್ಟರ್ ಚಾಲನೆ ಮಾಡಿ, ಡೊಳ್ಳು ಬಡಿಯುವ ಮೂಲಕ ಜನರಲ್ಲಿ ಉತ್ಸಾಹ ತುಂಬಿದರು.
ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ತಾಲೂಕಾಧ್ಯಕ್ಷ ಶ್ರೀಧರ ದೊಡ್ಡಮನಿ, ಉಪವಿಭಾಗಾಧಿಕಾರಿ ಶುಭಂ ಶುಕ್ಲಾ, ತಹಸೀಲ್ದಾರ್ ರವಿಕುಮಾರ ಕೊರವರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಬಿ. ಶಿಡೇನೂರ, ಪುರಸಭೆ ಮುಖ್ಯಾಧಿಕಾರಿ ನೀಲಪ್ಪ ಹಾದಿಮನಿ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ನಾಗಪ್ಪ ತಿಪ್ಪಕ್ಕನವರ, ಗ್ಯಾರಂಟಿ ಜಿಲ್ಲಾ ಉಪಾಧ್ಯಕ್ಷ ಗುಡ್ಡಪ್ಪ ಜಲದಿ, ತಾಲೂಕು ಅಧ್ಯಕ್ಷ ಸುಭಾಸ್ ಮಜ್ಜಗಿ, ಗಿರೀಶ ತಳವಾರ, ಬ್ಲಾಕ್ ಅಧ್ಯಕ್ಷ ಎಂ.ಜೆ. ಮುಲ್ಲಾ, ಕೆಡಿಪಿ ಸದಸ್ಯ ರವಿ ಕರಿಗಾರ, ಪ್ರಮುಖರಾದ ಶ್ರೀಕಾಂತ ವಾಲ್ಮೀಕಿ, ಪಾಂಡಪ್ಪ ತಿಪ್ಪಕ್ಕನವರ, ಉಮೇಶ, ಮಾಲತೇಶ ಹೊಳೆಮ್ಮನವರ, ವಕೀಲ ಎಂ.ಎನ್. ಬಸವನಾಯ್ಕರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜೀವನ ಪಮ್ಮಾರ ಇದ್ದರು.