ಸಾವಿರಾರು ವರ್ಷಗಳ ಹಿಂದೆ ರಚಿಸಿದ ರಾಮಾಯಣವು ಇಂದು ಜಗತ್ತಿನಲ್ಲಿ ಸರ್ವಕಾಲಿಕ ಶ್ರೇಷ್ಠ ಕೃತಿ. ಕವಿ ಕುಲದ ಗುರುವಾದ ವಾಲ್ಮೀಕಿ ಅವರು ಸಾವಿರಾರು ಕವಿ ಮತ್ತು ಸಾಹಿತಿಗಳಿಗೆ ಸ್ಪೂರ್ತಿಯಾಗಿದ್ದಾರೆ, ಇದರ ಪ್ರತಿಫಲವೇ ಕುವೆಂಪುರವರ ಶ್ರೀರಾಮಾಯಣ ದರ್ಶನಂ.
ಕನ್ನಡಪ್ರಭ ವಾರ್ತೆ ನಂಜನಗೂಡು
ಸಾವಿರಾರು ವರ್ಷಗಳ ಹಿಂದೆ ರಚಿಸಿದ ರಾಮಾಯಣವು ಇಂದು ಜಗತ್ತಿನಲ್ಲಿ ಸರ್ವಕಾಲಿಕ ಶ್ರೇಷ್ಠ ಕೃತಿ. ಕವಿ ಕುಲದ ಗುರುವಾದ ವಾಲ್ಮೀಕಿ ಅವರು ಸಾವಿರಾರು ಕವಿ ಮತ್ತು ಸಾಹಿತಿಗಳಿಗೆ ಸ್ಪೂರ್ತಿಯಾಗಿದ್ದಾರೆ, ಇದರ ಪ್ರತಿಫಲವೇ ಕುವೆಂಪುರವರ ಶ್ರೀರಾಮಾಯಣ ದರ್ಶನಂ ಎಂದು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿಯ ಸಮಿತಿ ಉಪಾಧ್ಯಕ್ಷ ಎಂ.ರಾಮಪ್ರಸಾದ್ ಹೇಳಿದರು.
ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಾತನಾಡಿದರು.
ಮುಖ್ಯಭಾಷಣಕಾರರಾಗಿ ಮಾತನಾಡಿದ ಕಾಲೇಜಿನ ಕನ್ನಡ ಕನ್ನಡ ಉಪನ್ಯಾಸಕ ಎನ್. ನಾಗರಾಜು ಅವರು ವಾಲ್ಮೀಕಿ ಅವರು ಯಾವ ರೀತಿಯಲ್ಲಿ ತಮ್ಮ ಮನಸ್ಸನ್ನು ಪರಿವರ್ತನೆ ಮಾಡಿಕೊಂಡು ಮಹಾನ್ ಗ್ರಂಥವನ್ನು ರಚಿಸಿದ ಸಂಪೂರ್ಣ ಮಾಹಿತಿ ನೀಡಿದರು. ಇಂದು ವಿದ್ಯಾರ್ಥಿಗಳು ರಾಮಯಣ ಓದುವ ಮೂಲಕ ತಮ್ಮ ತಪ್ಪುಗಳನ್ನು ತಿದ್ದಿಕೊಂಡು ಸರಿ ದಾರಿಗೆ ಬರಲು ರಾಮಯಣವು ಸಹಕಾರಿಯಾಗಿದೆ.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಸಿ.ಆರ್.ದಿನೇಶ್ ಮಾತನಾಡಿ, ಇಂದು ರಾಮಾಯಣದ ಆಧಾರದ ಮೇಲೆ ವಿವಿಧ ಭಾಷೆಗಳಲ್ಲಿ ಕಾವ್ಯ, ನಾಟಕ ,ಕಾದಂಬರಿ ಕಥೆಗಳು ರಚನೆಯಾಗಿವೆ. ಜಗತ್ತಿನಲ್ಲಿ ಸತ್ವಯುತವಾದ, ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ರಾಮಾಯಣವು ಪ್ರೇರಣೆಯಾಗಿದೆ .ರಾಮಾಯಣದಲ್ಲಿ ಬರುವ ಪಾತ್ರಗಳು ಭರತ ಖಂಡದ ಅರಣ್ಯಗಳು ಪರ್ವತಗಳು ನದಿಗಳು ಸರೋವರಗಳ ಪ್ರತಿಬಿಂಬಿತವಾಗಿವೆ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.