ಕನ್ನಡಪ್ರಭ ವಾರ್ತೆ ಕಾರವಾರ
ಮಂಗಳವಾರ ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿಯೊಬ್ಬ ವ್ಯಕ್ತಿಯೂ ತನ್ನಲ್ಲಿರುವ ದುರ್ಗುಣಗಳನ್ನು ತ್ಯಜಿಸಿ, ತನ್ನ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ಬದಲಾಯಿಸಿಕೊಳ್ಳಬಹುದು ಎಂಬುದಕ್ಕೆ ವಾಲ್ಮೀಕಿ ಅವರೇ ಮಾದರಿ ಎಂದರು.ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ ಉದ್ಘಾಟಿಸಿ, ಸತತ ಪ್ರಯತ್ನದಿಂದ ಅಸಾಮಾನ್ಯ ಸಾಧನೆಗಳನ್ನು ಮಾಡಬಹುದು ಎಂಬುದಕ್ಕೆ ಮಹರ್ಷಿ ವಾಲ್ಮೀಕಿ ಅವರೇ ಸಾಕ್ಷಿ. ಬೇಡನಾಗಿದ್ದು ನಿರಂತರ ತಪಸ್ಸಿನಿಂದ ಮಹರ್ಷಿಯಾಗಿ ಬದಲಾಗಿ, ರಾಮಾಯಣ ಮಹಾಕಾವ್ಯ ರಚಿಸಿದ ಅವರ ಸಾಧನೆ ಎಲ್ಲರಿಗೂ ಪ್ರೇರಣೆಯಾಗಬೇಕು ಎಂದರು.
ಮಹರ್ಷಿ ವಾಲ್ಮೀಕಿ ಕುರಿತು ಉಪನ್ಯಾಸ ನೀಡಿದ ಶಿಕ್ಷಕ ಚಂದ್ರಶೇಖರ ನಾಯಕ ದೊರೆ, ಹಿಂದುಳಿದ ಬೇಡ ಜನಾಂಗದ ರತ್ನಾಕರ ನಾರದ ಮಹರ್ಷಿಗಳ ಸೂಚನೆಯಂತೆ ತನ್ನ ದೀರ್ಘ ತಪಸ್ಸಿನ ಮೂಲಕ ಮಹರ್ಷಿ ವಾಲ್ಮೀಕಿಯಾಗಿ ಪರಿವರ್ತನೆಗೊಂಡು ದೇಶದ ಆದಿಕಾವ್ಯ ಮಹಾಕಾವ್ಯವಾದ ರಾಮಾಯಣವನ್ನು ರಚಿಸಿದ್ದು ಮಹಾನ್ ಸಾಧನೆ ಎಂದರು.
ಐಎಎಸ್ ಅಧಿಕಾರಿ ಝೂಪಿಶಾನ್ ಹಕ್, ಜಿಪಂ ಉಪ ಕಾರ್ಯದರ್ಶಿ ಅಲ್ಲಾ ಭಕ್ಷ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಉಮೇಶ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಮಾಲಾ ಹುಲಸ್ವಾರ, ಸದಸ್ಯರಾದ ಹನುಮಂತ ತಳವಾರ್, ರೋಶನಿ ಮಾಲಸೇಕರ್, ಮಹರ್ಷಿ ವಾಲ್ಮೀಕಿ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ನಾಗರಾಜ್ ತಳವಾರ್, ಪ.ವರ್ಗದ ವಿವಿಧ ಸಂಘಟನೆಗಳ ಮುಖಂಡರಾದ ಗಣೇಶ್ ಬಿಸ್ಟಣ್ಣವರ್, ದೀಪಕ್ ಕುಡಾಲ್ಕರ್ ಮತ್ತಿತರರು ಇದ್ದರು.
ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಮೆರವಣಿಗೆ ಕಾರ್ಯಕ್ರಮ ನಡೆಯಿತು.