ವಂದೇ ಮಾತರಂ ೧೫೦: ಅಂಬಿಕಾ ವಿದ್ಯಾಲಯದಲ್ಲಿ ವಿಶೇಷ ಕಾರ್ಯಕ್ರಮ

KannadaprabhaNewsNetwork |  
Published : Nov 12, 2025, 03:00 AM IST
ಫೋಟೋ: ೧೧ಪಿಟಿಆರ್-ಅಂಬಿಕಾಅಂಬಿಕಾ ವಿದ್ಯಾಲಯದಲ್ಲಿ ವಂದೇ ಮಾತರಂ-೧೫೦ ವಿಶೇಷ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ವಂದೇ ಮಾತರಂ ಹಾಡಿನ ೧೫೦ನೇ ವರ್ಷಾಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮ ಆಯೋಜಿಸಲಾಯಿತು.

ಕನ್ನಡಪ್ರಭ ವಾರ್ತೆ ಪುತ್ತೂರು

ಭಾರತ ಮಾತೆಯನ್ನು ದುರ್ಗೆಯಾಗಿ, ಸರಸ್ವತಿಯಾಗಿ, ಲಕ್ಷ್ಮೀಯಾಗಿ, ಅಮಲೆಯಾಗಿ, ಸುಜಲೆಯಾಗಿ, ಸುಶ್ಮಿತೆಯಾಗಿ ಕಂಡ ಕವಿ ಬಂಕಿಮಚಂದ್ರ ಚಟರ್ಜಿ ಅವರ ಲೇಖನಿಯಿಂದ ಮೂಡಿದ ಗೀತೆಯೇ ವಂದೇ ಮಾತರಂ. ಮೊಟ್ಟಮೊದಲ ಬಾರಿಗೆ ಅಂದಿನ ಕಾಂಗ್ರೆಸ್ ಸಮ್ಮೇಳನದಲ್ಲಿ ಹಾಡಿ ಈ ಗೀತೆಗೆ ಶಕ್ತಿಯನ್ನು ತುಂಬಿದವರು ವಿಷ್ಣು ದಿಗಂಬರ ಪುಲಸ್ಕರ್ ಎಂದು ಅಂಬಿಕಾ ಪದವಿಪೂರ್ವ ವಿದ್ಯಾಲಯದ ಉಪನ್ಯಾಸಕ ಆದರ್ಶ ಗೋಖಲೆ ಹೇಳಿದರು.ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ವಂದೇ ಮಾತರಂ ಹಾಡಿನ ೧೫೦ನೇ ವರ್ಷಾಚರಣೆಯ ಪ್ರಯುಕ್ತ ಆಯೋಜಿಸಲಾದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಉಪನ್ಯಾಸ ನೀಡಿದರು.ವೇದಿಕೆಯಲ್ಲಿ ಸಂಸ್ಥೆಯ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಕಾರ್ಯದರ್ಶಿ ರಾಜಶ್ರೀ ನಟ್ಟೋಜ, ಪ್ರಾಂಶುಪಾಲೆ ಮಾಲತಿ ಡಿ. ಹಾಗೂ ಉಪ ಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ವಂದೇ ಮಾತರಂ ಹಾಡಿನ ಮಹತ್ವವನ್ನು ನಾಟಕದ ಮೂಲಕ ಪ್ರದರ್ಶಿಸಿ ವಂದೇ ಮಾತರಂ ಹಾಡಿಗೆ ಹೆಜ್ಜೆ ಹಾಕಿದರು. ವಿದ್ಯಾರ್ಥಿನಿಯರಾದ ಅನ್ವಿತಾ ಸ್ವಾಗತಿಸಿದರು. ಮನಸ್ವಿ ಕಾರ್ಯಕ್ರಮ ನಿರ್ವಹಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಾನ್ಯ ಲಕ್ಷ್ಮೀ ಹಾಗೂ ಕುವಿರ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ