ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ವರಮಹಾಲಕ್ಷ್ಮಿ ವ್ರತಾಚರಣೆ

KannadaprabhaNewsNetwork |  
Published : Aug 17, 2024, 12:53 AM IST
16ಎಚ್ಎಸ್ಎನ್‌6 : ಹೊಳೆನರಸೀಪುರ ಪಟ್ಟಣದ ಹಿರಿಯ ವರ್ತಕ ಎಚ್.ಎನ್.ವೆಂಕಟರಮಣಯ್ಯ ಅವರ ಮನೆಯಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತದ ಪ್ರಯುಕ್ತ ಶ್ರೀದೇವಿಯ ಮುಖವಾಡವನ್ನು ವಿಶೇಷವಾಗಿ ಅಲಂಕರಿಸಿ, ಪೂಜಿಸಿದ್ದಾರೆ. | Kannada Prabha

ಸಾರಾಂಶ

ಹೊಳೆನರಸೀಪುರ ಪಟ್ಟಣದ ಐತಿಹಾಸಿಕ ಹಿನ್ನೆಲೆಯ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತದ ಪ್ರಯುಕ್ತ ವಿಶೇಷ ಪೂಜಾ ಮಹೋತ್ಸವ ವೈಭವದಿಂದ ಜರುಗಿತು. ಪಟ್ಟಣದಲ್ಲಿ ಸುಮಂಗಲಿಯರು ಅವರ ಮನೆಗಳಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತದ ಪ್ರಯುಕ್ತ ಶ್ರೀದೇವಿಯ ಆರಾಧನೆಗಾಗಿ ಹಿರಿಯರ ಮಾರ್ಗದರ್ಶನದಂತೆ ಕಳಸ ಪ್ರತಿಷ್ಠಾಪಿಸಿ, ಶ್ರೀದೇವಿಯ ಮುಖವಾಡದಿಂದ ವಿಶೇಷವಾಗಿ ಅಲಂಕರಿಸಿ, ಪೂಜಾ ಕೈಂಕರ್ಯ ನೆರವೇರಿಸಿದ ನಂತರ ಅಕ್ಕಪಕ್ಕದ ಮನೆಯ ಮಹಿಳೆಯರನ್ನು ಅರಿಶಿನ ಕುಂಕುಮಕ್ಕೆ ಆಹ್ವಾನಿಸಿ, ಸತ್ಕರಿಸುವ ಸಂಪ್ರದಾಯದ ಆಚರಣೆ ಪಾಲನೆಯನ್ನು ಮಾಡುವ ಮೂಲಕ ಭಾರತೀಯ ಸಂಸ್ಕೃತಿ ಹಾಗೂ ಹಬ್ಬದ ಆಚರಣೆಗೆ ಮೆರುಗನ್ನು ನೀಡಿದರು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ ಪಟ್ಟಣದ ಐತಿಹಾಸಿಕ ಹಿನ್ನೆಲೆಯ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತದ ಪ್ರಯುಕ್ತ ವಿಶೇಷ ಪೂಜಾ ಮಹೋತ್ಸವ ವೈಭವದಿಂದ ಜರುಗಿತು. ಕ್ರೋಧಿಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ ಶುಕ್ರವಾರ ಮುಂಜಾನೆ ಬ್ರಾಹ್ಮಿ ಮಹೂರ್ತದ ಮೂಲ ನಕ್ಷತ್ರದಲ್ಲಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿಯ ಮೂಲ ಮೂರ್ತಿಯ ಜತೆಗೆ ದೇವಾಲಯದ ಆವರಣದಲ್ಲಿ ಇರುವ ಶ್ರೀ ಲಕ್ಷ್ಮಿದೇವಿಯ ಮೂಲ ವಿಗ್ರಹಕ್ಕೆ ಪುಣ್ಯಹ, ಪಂಚಾಮೃತ ಅಭಿಷೇಕ ನೆರವೇರಿಸಿ ವಿಶೇಷವಾಗಿ ಅಲಂಕರಿಸಲಾಯಿತು. ತಧಿ ಆರಾಧನೆ ಸೇವೆ, ನೈವೇದ್ಯ, ಸಹಸ್ರ ನಾಮಾರ್ಚನೆ, ಅರ್ಚನೆ, ಮಂಗಳಾರತಿ ನೆರವೇರಿಸಿ, ತೀರ್ಥಪ್ರಸಾದ ವಿನಿಯೋಗ ಮಾಡಲಾಯಿತು. ಸಂಜೆ ಗೋದೂಳಿ ಲಗ್ನದಲ್ಲಿ ಶ್ರೀದೇವಿಯ ಮೂರ್ತಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಿದ ನಂತರ ಲಲಿತ ಸಹಸ್ರನಾಮ ಪಠಣ, ನೈವೇದ್ಯ, ಮಹಾಮಂಗಳಾರತಿ ನೆರವೇರಸಿ, ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು. ಅರ್ಚಕರಾದ ನಾರಾಯಣ ಭಟ್ಟರು, ರಾಮಪ್ರಸಾದ್ ಭಟ್ಟರು ಹಾಗೂ ಶ್ರೀನಿಧಿ ನರಸಿಂಹನ್ ಪೂಜಾ ಕೈಂಕರ್ಯ ನೆರವೇರಿಸಿದರು.

ಪಟ್ಟಣದಲ್ಲಿ ಸುಮಂಗಲಿಯರು ಅವರ ಮನೆಗಳಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತದ ಪ್ರಯುಕ್ತ ಶ್ರೀದೇವಿಯ ಆರಾಧನೆಗಾಗಿ ಹಿರಿಯರ ಮಾರ್ಗದರ್ಶನದಂತೆ ಕಳಸ ಪ್ರತಿಷ್ಠಾಪಿಸಿ, ಶ್ರೀದೇವಿಯ ಮುಖವಾಡದಿಂದ ವಿಶೇಷವಾಗಿ ಅಲಂಕರಿಸಿ, ಪೂಜಾ ಕೈಂಕರ್ಯ ನೆರವೇರಿಸಿದ ನಂತರ ಅಕ್ಕಪಕ್ಕದ ಮನೆಯ ಮಹಿಳೆಯರನ್ನು ಅರಿಶಿನ ಕುಂಕುಮಕ್ಕೆ ಆಹ್ವಾನಿಸಿ, ಸತ್ಕರಿಸುವ ಸಂಪ್ರದಾಯದ ಆಚರಣೆ ಪಾಲನೆಯನ್ನು ಮಾಡುವ ಮೂಲಕ ಭಾರತೀಯ ಸಂಸ್ಕೃತಿ ಹಾಗೂ ಹಬ್ಬದ ಆಚರಣೆಗೆ ಮೆರುಗನ್ನು ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!