ಬೆಲೆ ಏರಿಕೆ ನಡುವೆ ವರಮಹಾಲಕ್ಷ್ಮೀ ವ್ರತ

KannadaprabhaNewsNetwork |  
Published : Aug 08, 2025, 01:00 AM IST
7ಎಚ್ಎಸ್ಎನ್3 : ವರಮಹಾಲಕ್ಷ್ಮಿ ಹಬ್ಬದ ಹಿನ್ನಲೆಯಲ್ಲಿ ಪಟ್ಟಣದಲ್ಲಿ ವ್ಯಾಪಾರ ಜೋರಾಗಿತ್ತು. | Kannada Prabha

ಸಾರಾಂಶ

ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಎಲ್ಲ ತರಹದ ವಸ್ತುಗಳ ಬೆಲೆ ಹೆಚ್ಚಿದ್ದರು ಜನರು ಹಬ್ಬದ ಸಿದ್ಧತೆಯನ್ನು ಭರದಲ್ಲೆ ಕೈಕೊಂಡಿದ್ದು, ಹೂವು, ಹಣ್ಣು, ತರಕಾರಿ ಬೆಲೆ ನಿತ್ಯಕ್ಕಿಂತ ಎರಡರಷ್ಟು ಹೆಚ್ಚಿದ್ದರೆ ಸೊಪ್ಪಿನ ಬೆಲೆ ಇಳಿಕೆಗೊಂಡಿದ್ದು ಹಬ್ಬದ ವಿಶೇಷವಾಗಿತ್ತು. ಸುಲಿಯುವ ಕಾಳು ಕೆ.ಜಿಗೆ ೧೫೦ ರುಗಳಾಗಿದ್ದರೆ, ಬಿನ್ಸ್, ಕ್ಯಾರೆಟ್ ಬೆಲೆ ನೂರುಗಳಾಗಿತ್ತು. ಆದರೆ, ಕೊತ್ತಂಬರಿ, ಹರಿವೆ ಸೇರಿದಂತೆ ಎಲ್ಲಾ ಸೊಪ್ಪುಗಳ ಬೆಲೆ ನಾಲ್ಕು ಕಟ್ಟಿಗೆ ೧೦ ರು.ಗಳಿಗೆ ಕುಸಿದಿತ್ತು. ಮಲ್ಲಿಗೆ ಹೂವು ಮಾರೊಂದಕ್ಕೆ ೧೨೦ ರು. ಗಳಿಂದ ೧೫೦ ರು. ಗಳಾಗಿದ್ದರೆ ಸೇವಂತಿಗೆ ಹೂವು ಸಹ ೧೦೦ ರು. ಗಳಿಂದ ೧೫೦ ರು. ಗಳಲ್ಲಿ ಮಾರಾಟವಾದವು.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಬೆಲೆ ಏರಿಕೆಯ ನಡುವೆಯು ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಪಟ್ಟಣದಲ್ಲಿ ವ್ಯಾಪಾರ ಜೋರಾಗಿತ್ತು.

ಹಬ್ಬದ ಹಿನ್ನೆಲೆಯಲ್ಲಿ ಎಲ್ಲ ತರಹದ ವಸ್ತುಗಳ ಬೆಲೆ ಹೆಚ್ಚಿದ್ದರು ಜನರು ಹಬ್ಬದ ಸಿದ್ಧತೆಯನ್ನು ಭರದಲ್ಲೆ ಕೈಕೊಂಡಿದ್ದು, ಹೂವು, ಹಣ್ಣು, ತರಕಾರಿ ಬೆಲೆ ನಿತ್ಯಕ್ಕಿಂತ ಎರಡರಷ್ಟು ಹೆಚ್ಚಿದ್ದರೆ ಸೊಪ್ಪಿನ ಬೆಲೆ ಇಳಿಕೆಗೊಂಡಿದ್ದು ಹಬ್ಬದ ವಿಶೇಷವಾಗಿತ್ತು. ಸುಲಿಯುವ ಕಾಳು ಕೆ.ಜಿಗೆ ೧೫೦ ರುಗಳಾಗಿದ್ದರೆ, ಬಿನ್ಸ್, ಕ್ಯಾರೆಟ್ ಬೆಲೆ ನೂರುಗಳಾಗಿತ್ತು. ಆದರೆ, ಕೊತ್ತಂಬರಿ, ಹರಿವೆ ಸೇರಿದಂತೆ ಎಲ್ಲಾ ಸೊಪ್ಪುಗಳ ಬೆಲೆ ನಾಲ್ಕು ಕಟ್ಟಿಗೆ ೧೦ ರು.ಗಳಿಗೆ ಕುಸಿದಿತ್ತು. ಮಲ್ಲಿಗೆ ಹೂವು ಮಾರೊಂದಕ್ಕೆ ೧೨೦ ರು. ಗಳಿಂದ ೧೫೦ ರು. ಗಳಾಗಿದ್ದರೆ ಸೇವಂತಿಗೆ ಹೂವು ಸಹ ೧೦೦ ರು. ಗಳಿಂದ ೧೫೦ ರು. ಗಳಲ್ಲಿ ಮಾರಾಟವಾದವು. ಸೇಬು ದರ ನೂರು ರು. ಗಳಾಗದ್ದರೆ ಮೊಸಂಬಿ ಸೇರಿದಂತೆ ಎಲ್ಲ ವಸ್ತುಗಳ ಬೆಲೆ ಮೂರಂಕಿ ದಾಟಿದ್ದವು. ಇನ್ನುಳಿದಂತೆ ಬಾಳೆದಿಂಡು ಸಹ ಭರ್ಜರಿಯಾಗಿ ವ್ಯಾಪಾರವಾದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ