ಕನ್ನಡಪ್ರಭ ವಾರ್ತೆ ಬೈಲಹೊಂಗಲ
ಶ್ರೀಮಠದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ, ಡಿ.28ರಂದು ಬೆಳಗ್ಗೆ 10ಕ್ಕೆ ಶಿವಾನಂದ ಭಾರತಿ ಶಿಕ್ಷಣ ಸಂಸ್ಥೆಯ 50 ವರ್ಷಗಳ ಸಾರ್ಥಕ ಸೇವೆಗೆ ಸುವರ್ಣ ಭಾರತಿ ಮಹೋತ್ಸವ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಪ್ರತಾಪರಾವ ಜಾಧವ, ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ, ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ, ಎಂ.ಸಿ. ಸುಧಾಕರ, ಶರಣಪ್ರಕಾಶ ಪಾಟೀಲ, ಸಂಸದರಾದ ಜಗದದೀಶ ಶೆಟ್ಟರ, ಪ್ರಿಯಾಂಕಾ ಜಾರಕಿಹೊಳಿ, ವಿಶ್ವೇಶ್ವರಹೆಗಡೆ ಕಾಗೇರಿ, ಈರಣ್ಣ ಕಡಾಡಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೆಎಲ್ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೊರೆ, ಗ್ರಾಪಂ ಅಧ್ಯಕ್ಷ ಶಂಕರ ಬಾಗೇವಾಡಿ ಹಾಗೂ ಶಾಸಕರು, ವಿ.ಪ. ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಆಗಮಿಲಿಸಲಿದ್ದು, ಶಾಸಕ ಮಹಾಂತೇಶ ಕೌಜಲಗಿ ಅಧ್ಯಕ್ಷತೆ ವಹಿಸಲಿದ್ದಾರೆ. ಹಳೇ ವಿದ್ಯಾರ್ಥಿಗಳಿಂದ ಭವ್ಯ ಮೆರವಣಿಗೆ, ಶಿವಯೋಗೀಶ್ವರ ಆಂಗ್ಲ ಮಾಧ್ಯಮ ನೂತನ ಶಾಲಾ ಕಟ್ಟಡದ ಉದ್ಘಾಟಣೆ, ಸ್ಮರಣ ಸಂಚಿಕೆ, ಸದ್ಗುರು ದರ್ಶನ ಗ್ರಂಥ ಬಿಡುಗಡೆ, ಸುವರ್ಣ ಮಹೋತ್ಸವದ ಅಂಚೆ ಲಕೋಟೆ ಬಿಡುಗಡೆ, ಮಧ್ಯಾಹ್ನ 2.30ಕ್ಕೆ ಚಿಂತನ ಗೋಷ್ಠಿ, ಸಂಜೆ 6ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ಭಕ್ತರಿಗೆ ನಿರಂತರ ಬಸ್ ವ್ಯವಸ್ಥೆ ಸೇರಿ ಸಕಲ ವ್ಯವಸ್ಥೆ ಮಾಡಳ್ಳಲಾಗಿದೆ ಎಂದವರು ತಿಳಿಸಿದರು.
ಸಂಸ್ಥೆಯ ಆಡಳಿತಾಧಿಕಾರಿ ಪೂರ್ಣಾನಂದ ಸ್ವಾಮೀಜಿ ಮಾತನಾಡಿ, ಡಿ.27ರಿಂದ ಜ.2ರವರೆಗೆ ಡಾ.ಶಿವಾನಂದ ಭಾರತಿ ಸ್ವಾಮೀಜಿ ಸಾನ್ನಿಧ್ಯದಲ್ಲಿ ಎಲ್ಲ ಕಾರ್ಯಕ್ರಮಗಳು ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದರು.ಅಂಬಾ ಪರಮೇಶ್ವರಿ ಮಂದಿರದ ಮಹಾದ್ವಾರ ಉದ್ಘಾಟನೆ, ಜಗದ್ಗುರು ಸಿದ್ಧಾರೂಢರ ಕಥಾಮೃತ ಸಾಮೂಹಿಕ ಪಾರಾಯಣ, ಜಗದ್ಗುರು ಸಿದ್ಧಾರೂಢ ಕಥಾಮೃತದ ಶತಮಾನೋತ್ಸವ ಶೋಭಾಯಾತ್ರೆ, ಶ್ರೀಗಳವರ ತೊಟ್ಟಿಲೋತ್ಸವ, ರಜತ ರಥೋತ್ಸವ ಹಾಗೂ ಮಹಾರಥೋತ್ಸವ ನಡೆಯಲಿದೆ. ಡಿ.27ರಿಂದ ಜ.2ರ ವರೆಗೆ ಭಕ್ತರಿಂದ ಸದ್ಗುರು ಸಿದ್ಧಾರೂಢರ ಚರಿತಾಮೃತ ಪಾರಾಯಣ, ಡಿ.29ರಂದು ಬೆಳಗ್ಗೆ 8ಕ್ಕೆ ಬೈಲಹೊಂಗಲ ಪಟ್ಟಣದ ಗೊಂಬಿಗುಡಿಯಿಂದ ಆನೆಯ ಅಂಬಾರಿ ಮೆರವಣಿಗೆ ಮೂಲಕ ಇಂಚಲ ಗ್ರಾಮದ ಮಠದವರೆಗೆ ಸಹಸ್ರ ಕುಂಭೋತ್ಸವದೊಂದಿಗೆ ಮಹಾಮಂಡಲೇಶ್ವರರ ಮೆರವಣಿಗೆ ನಡೆಯಲಿದೆ.
ಈ ವೇಳೆ ಹಂಪಿ ಹೇಮಕೂಟದ ವಿದ್ಯಾನಂದ ಭಾರತಿ ಸ್ವಾಮೀಜಿ, ಡಾ.ಶಿವಾನಂದ ಭಾರತಿ ಸ್ವಾಮೀಜಿ, ಪೂರ್ಣಾನಂದ ಭಾರತಿ ಸ್ವಾಮೀಜಿ, ಮಲ್ಲಾಪುರದ ಚಿದಾನಂದ ಸ್ವಾಮೀಜಿ, ಮಾಜಿ ಶಾಸಕರಾದ ಡಾ.ವಿಶ್ವನಾಥ ಪಾಟೀಲ, ಮಹಾಂತೇಶ ದೊಡಗೌಡರ, ವಿಜಯ ಮೆಟಗುಡ್ಡ, ಬಸವರಾಜ ಜನ್ಮಟ್ಟಿ, ನಾಗಪ್ಪ ಮೇಟಿ, ಸಿಪಿಐ ಐ.ಎಂ. ಮಠಪತಿ, ಪ್ರಾಚಾರ್ಯ ವಿನಯ ಮೋಹನ, ಸುನೀಲ ಮರಕುಂಬಿ, ಶಂಭು ಹೂಲಿ ಇತರರು ಇದ್ದರು.
-ಡಾ.ಶಿವಾನಂದ ಭಾರತಿ ಸ್ವಾಮೀಜಿ ಇಂಚಲ