ಕನ್ನಡಪ್ರಭ ವಾರ್ತೆ ಕೆ.ಎಂ ದೊಡ್ಡಿ
ಮದ್ದೂರು- ಮಳವಳ್ಳಿಯ ಮುಖ್ಯ ರಸ್ತೆಯ ಸರ್.ಎಂ.ವಿಶ್ವೇಶ್ವರಯ್ಯ ವೃತ್ತದಲ್ಲಿ ಸೇರಿದ ಸಮಿತಿ ಪದಾಧಿಕಾರಿಗಳು ಹಾಗೂ ಹೋರಾಟಗಾರರು ರಸ್ತೆತಡೆ ನಡೆಸಿ ಮಾನವ ಸರಪಳಿ ರಚಿಸಿ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆ ಸಮಿತಿ ಅಧ್ಯಕ್ಷ ಪ್ರೊ.ಬಿ.ಬೋರೇಗೌಡ ಮಾತನಾಡಿ, ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ನನ್ನು ಹುಲ್ಲಿನ ಮೆದೆಯೊಂದಿಗೆ ಜೀವಂತವಾಗಿ ಸುಟ್ಟು ದಹನ ಮಾಡಿ ಹತ್ಯೆ ಮಾಡಲಾಗಿದೆ. ಇದು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಘಟನೆಯಾಗಿದೆ ಎಂದು ಆರೋಪಿಸಿದರು.ಯುವಕನನು ಹುಲ್ಲಿನ ಮೆದೆಗೆ ಜೀವಂತವಾಗಿ ಸುಟ್ಟು ಹಾಕಿರುವ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ನ್ಯಾಯ ಒದಗಿಸಬೇಕು ಹಾಗೂ ಸರ್ಕಾರ ಮಧ್ಯೆ ಪ್ರವೇಶಿಸಿ ಜಯಕುಮಾರ್ ರವರ ಕುಟುಂಬಕ್ಕೆ 25 ಲಕ್ಷ ರು. ಪರಿಹಾರ ಹಾಗೂ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕೆಂದು ಅಗ್ರಹಿಸಿದರು.
ಸರ್ಕಾರ ಹಾಗೂ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ ಪುಟ್ಟ ಮಗುವಿನ ಕುಟುಂಬಕ್ಕೆ ನ್ಯಾಯ ಒದಗಿಸಿ ಸೂಕ್ತ ಪರಿಹಾರವನ್ನು ನೀಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಕೆ.ಕಬ್ಬಾಳಯ್ಯ, ಅಣ್ಣೂರು ಮಹೇಂದ್ರ, ಕ್ಯಾತಘಟ್ಟ ರವಿಕುಮಾರ್, ತೊರೆಚಾಕನಹಳ್ಳಿ ಶಂಕರೆಗೌಡ, ಚಿಕ್ಕರಸಿನಕರೆ ಮೂರ್ತಿ, ಕರಡಕೆರೆ ಯೋಗೇಶ್, ಭರತೇಶ್, ಬಿದರಹಳ್ಳಿ ಹನುಮೇಶ್, ಮಹಿಳಾ ಮುಖಂಡರಾದ ಡಿ.ಕೆ.ಲತಾ, ಶೋಭಾ, ದೇವಿರಮ್ಮ, ಬಸವರಾಜು, ಅಪ್ಪು ಸೇರಿದಂತೆ ಹಲವರು ಭಾಗವಹಿಸಿದ್ದರು.