ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರ ರಥಬೀದಿಯ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಶುಕ್ರವಾರ ಸಂಜೆ ಏರ್ಪಡಿಸಿದ್ದ ಚೆಂಡೆ ವಾದ್ಯ ಮೇಳ ವಿಶಿಷ್ಟವಾಗಿತ್ತು.
ವಾಸವಿ ಜಯಂತಿ ಅಂಗವಾಗಿ ದೇವಾಲಯದಲ್ಲಿ ಬೆಳಗಿನಿಂದ ಪೂಜಾ ಕಾರ್ಯಕ್ರಮಗಳು ಜರುಗಿತು. ಅರ್ಚಕರಾದ ಗಿರೀಶ್ ಭಟ್, ಯೋಗೇಶ್ ಭಟ್, ದೇವರಾಜ್ ಭಟ್ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳು ಜರುಗಿತು.ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ಫಲ ತಾಂಬೂಲಗಳೊಂದಿಗೆ ದೇವಾಲಯಕ್ಕೆ ಆಗಮಿಸಿ ಸಾಮೂಹಿಕ ಪೂಜೆ ಸಲ್ಲಿಸಿದರು.
ಆರ್ಯವೈಶ್ಯ ಮಂಡಳಿ ಅಧ್ಯಕ್ಷರಾದ ಬಿ ಎಲ್ ಉದಯಕುಮಾರ್, ಉಪಾಧ್ಯಕ್ಷರಾದ ಎಸ್ ಎಂ ಸತೀಶ್ , ಖಜಾಂಚಿ ನಟರಾಜ್ ಅಶೋಕ್ ಕುಮಾರ್, ಆರ್ಯವೈಶ್ಯ ಮಂಡಳಿಯ ರಾಜ್ಯ ಕಾರ್ಯದರ್ಶಿ ಬಿ ಆರ್ ನಾಗೇಂದ್ರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾದ ಬಿ ಎಲ್ ಸತ್ಯನಾರಾಯಣ , ಮಹಿಳಾ ಘಟಕದ ಲಕ್ಷ್ಮಿ ಶ್ರೀನಿವಾಸ್, ಯುವತಿಯರ ಸಂಘದ ಅಧ್ಯಕ್ಷೆ ಕವಿತಾ ಪ್ರವೀಣ್, ವಾಸವಿ ಯುವಜನ ಸಂಘದ ಅಧ್ಯಕ್ಷರಾದ ಪ್ರವೀಣ್, ಉಪಾಧ್ಯಕ್ಷರಾದ ಬಾಲಾಜಿ, ವೈಶಾಕ್, ರಾಕೇಶ್, ನಿಖಿಲ್ , ರವಿಪ್ರಕಾಶ್, ಕಾರ್ಯದರ್ಶಿ ಅಂಜನ್ ಮತ್ತಿತರರು ಇದ್ದರು.