ಕಮಲಹಾಸನ್ ಹೇಳಿಕೆ ಖಂಡಿಸಿ ವಾಟಾಳ್ ಪ್ರತಿಭಟನೆ

KannadaprabhaNewsNetwork |  
Published : Jun 03, 2025, 12:41 AM IST
3 | Kannada Prabha

ಸಾರಾಂಶ

ಮೈಸೂರು: ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ನಟ ಕಮಲಹಾಸನ್ ಹೇಳಿಕೆ ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಗರದ ಹಾರ್ಡಿಂಜ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ಮೈಸೂರು: ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ನಟ ಕಮಲಹಾಸನ್ ಹೇಳಿಕೆ ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಗರದ ಹಾರ್ಡಿಂಜ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ಈ ವೇಳೆ ವಾಟಾಳ್ ನಾಗರಾಜ್ ಮಾತನಾಡಿ, ನಟ ಕಮಲ್ ಹಾಸನ್ ಕನ್ನಡ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದಾರೆ. ರಾಜ್ಯದ ಜನರು ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತಿದ್ದಾರೆ. ಆದರೆ, ಕಮಲ್ ಹಾಸನ್ ಉದ್ದಟತನ ಮಾಡುತ್ತಿದ್ದಾರೆ. ಕಮಲ್ ಹಾನಸ್ ವಿರುದ್ಧ ಸಿಎಂ ಮೊಕದ್ದಮೆ ಹಾಕಬೇಕು. ಕರ್ನಾಟಕ ಹೈಕೋರ್ಟ್‌ಗೆ ಕರೆದುಕೊಂಡು ಬಂದು ರಾಜ್ಯದ ಜೈಲಿನಲ್ಲಿ ಹಾಕಬೇಕು. ಈ ವಿಚಾರದಲ್ಲಿ ರಾಜಕಾರಣಿಗಳು, ನಟರು ಬೀದಿಗೆ ಬರಬೇಕು ಎಂದು ಒತ್ತಾಯಿಸಿದರು.

ಕರ್ನಾಟಕದಿಂದ ಕಮಲಹಾಸನ್ ಬಹಿಷ್ಕರಿಸಬೇಕು. ಅವರ ಸಿನಿಮಾ ರಾಜ್ಯದಲ್ಲಿ ಬಿಡುಗಡೆಯಾಗಬಾರದು. ಈ ವಿಚಾರದಲ್ಲಿ ಕನ್ನಡ ಚಿತ್ರರಂಗ ಗಂಭೀರ ಚಿಂತನೆ ಮಾಡಬೇಕಿದೆ. ಒಂದು ವೇಳೆ ಕಮಲಹಾಸನ್ ಸಿನಿಮಾ ಬಿಡುಗಡೆಯಾದರೆ ಭಾರೀ ಹೋರಾಟ ಮಾಡುತ್ತೇವೆ. ಎಲ್ಲಾ ಕನ್ನಡ ಪರ ಸಂಘಟನೆಗಳು ಸೇರಿ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಅವರು ಎಚ್ಚರಿಸಿದರು.

ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳು ಇದನ್ನು ಖಂಡಿಸಬೇಕು. ಸಾಹಿತಿಗಳು, ಬರಹಗಾರರು ಈಗ ಕನ್ನಡದ ಪರ ನಿಲ್ಲಬೇಕು. ನಟ ಶಿವರಾಜ್ ಕುಮಾರ್ ಮಾತ್ರವಲ್ಲ, ಎಲ್ಲಾ ನಟರು ಕನ್ನಡದ ಪರ ನಿಲ್ಲಬೇಕು ಎಂದು ಅವರು ಆಗ್ರಹಿಸಿದರು.

ಮುಖಂಡರಾದ ಬಿ.ಎ. ಶಿವಶಂಕರ್, ತೇಜಸ್ ಲೋಕೇಶ್ ಗೌಡ, ಮಧುವನ ಚಂದ್ರು ಮೊದಲಾದವರು ಇದ್ದರು.

----------

ಕೋಟ್...

ಆರ್ ಸಿಬಿ ಗೆದ್ದರೆ ನಮಗೆ ಕಿರೀಟ ಸಿಕ್ಕಂತೆ. ಆರ್ ಸಿಬಿ ಗೆಲ್ಲಬೇಕೆಂಬುದು‌ಸಮಗ್ರ ಕನ್ನಡಿಗರ ಆಶಯವಾಗಿದೆ. ಈ ಬಾರಿ‌ ಆರ್ ಸಿಬಿ ಕಪ್ ಗೆಲ್ಲಲಿ.

- ವಾಟಾಳ್ ನಾಗರಾಜ್

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ