ನಾಗಶೆಟ್ಟಿಕೊಪ್ಪದಲ್ಲಿ ಕೂಲಿಕಾರರಿಗೆ ಮಾಹಿತಿ, ಜಾಬ್ ಕಾರ್ಡ್ ವಿತರಣೆ
ಗ್ರಾಮೀಣ ಜನರಿಗೆ ವಿಬಿ-ಜಿ ರಾಮ್- ಜಿ ಯೋಜನೆ ಹೊಸ ಭರವಸೆಯಾಗಲಿದೆ. ಕೆಲಸಕ್ಕಾಗಿ ಹಳ್ಳಿಯಿಂದ ಪಟ್ಟಣಕ್ಕೆ ವಲಸೆ ಹೋಗದೇ ಸ್ವಂತ ಗ್ರಾಮದಲ್ಲಿಯೇ ಉದ್ಯೋಗ ಪಡೆದು ನೆಮ್ಮದಿಯಿಂದ ಜೀವನ ನಡೆಸಬಹುದಾಗಿದೆ ಎಂದು ಐಇಸಿ ಸಂಯೋಜಕಿ ಸೌಂದರ್ಯಾ ಕುರಕುರಿ ಹೇಳಿದರು.
ತಾಲೂಕಿನ ನಾಗಶೆಟ್ಟಿಕೊಪ್ಪ ಗ್ರಾಮದ ಪಂಚಾಯಿತಿ ವ್ಯಾಪ್ತಿಯ ಅಮೃತ ಸರೋವರ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು ವಿಬಿ-ಜಿ ರಾಮ್-ಜಿ ಕುರಿತು ಕೂಲಿಕಾರರಿಗೆ ಮಾಹಿತಿ ನೀಡಿ, ಜಾಬ್ ಕಾರ್ಡ್ಗಳನ್ನು ವಿತರಿಸಿ ಮಾತನಾಡಿದರು. ಜು. 1ರಿಂದ ಜಾರಿಗೆ ಬಂದಿರುವ ವಿಬಿ-ಜಿ ರಾಮ್-ಜಿ ಯೋಜನೆಯಡಿ ಗ್ರಾಮೀಣ ಅರ್ಹ ಕುಟುಂಬಕ್ಕೆ ವಾರ್ಷಿಕವಾಗಿ ಮಾನವ ದಿನಗಳನ್ನು ಹೆಚ್ಚಿಸಲಾಗಿದ್ದು, ಗಂಡು-ಹೆಣ್ಣಿಗೆ ದಿನಕ್ಕೆ ₹382 ಸಮಾನ ಕೂಲಿ ನೀಡಲಾಗುತ್ತಿದೆ. ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗಾಗಿ ದೀರ್ಘ ಬಾಳಿಕೆಯ ಸಮುದಾಯ ಕಾಮಗಾರಿಗಳು ಹಾಗೂ ಜನರ ಆರ್ಥಿಕ ಭದ್ರತೆಗಾಗಿ ವೈಯಕ್ತಿಕ ಸೌಲಭ್ಯಗಳು ಸೇರಿದಂತೆ ಒಟ್ಟು 318 ಬಗೆಯ ಅನುಮೋದಿತ ಕಾಮಗಾರಿಗಳಿದ್ದು, ಸಾರ್ವಜನಿಕರು ಈ ಯೋಜನೆಯ ಲಾಭ ಪಡೆದು ಗ್ರಾಮದ ಅಭಿವೃದ್ಧಿ ಕಾರ್ಯದಲ್ಲಿ ಕೈಜೋಡಿಸಬೇಕಾಗಿದೆ ಎಂದರು.ಆ. 18ರಿಂದ ಸೆ. 18ರ ವರೆಗೆ ತಾಲೂಕಿನ ಎಲ್ಲ ಗ್ರಾಪಂಗಳಲ್ಲಿ ಜಾಬ್ ಕಾರ್ಡ್ ಮೇಳ ಹಮ್ಮಿಕೊಂಡಿದ್ದು, ಸಕ್ರಿಯ ಕೂಲಿಕಾರರಿಗೆ ಹಾಗೂ ಹೊಸ ಜಾಬ್ ಕಾರ್ಡ್ಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.