ವಿ.ಬಾಡಗ: ಇಂದಿನಿಂದ ಕೌಟುಂಬಿಕ ಹಾಕಿ ಪಂದ್ಯಾವಳಿ

KannadaprabhaNewsNetwork |  
Published : Dec 06, 2024, 09:00 AM IST
32 | Kannada Prabha

ಸಾರಾಂಶ

ವಿ. ಬಾಡಗದ ಹೈ ಪ್ಲೈಯರ್ಸ್ ಸಂಸ್ಥೆಯ ವತಿಯಿಂದ ಮೂರು ಗ್ರಾ. ಪಂ. ವ್ಯಾಪ್ತಿಯ ಕೊಡವ ಕೌಟುಂಬಿಕ 3ನೇ ವರ್ಷದ ಹಾಕಿ ಪಂದ್ಯಾವಳಿ ಶುಕ್ರವಾರ ಆರಂಭಗೊಂಡು ವಿ. ಬಾಡಗದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಒಟ್ಟು 5 ದಿನಗಳ ಕಾಲ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ

ಬಿಟ್ಟಂಗಾಲ ಸಮೀಪದ ವಿ. ಬಾಡಗದ ಹೈ ಪ್ಲೈಯರ್ಸ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಮೂರು ಗ್ರಾ. ಪಂ. ವ್ಯಾಪ್ತಿಯ ಕೊಡವ ಕೌಟುಂಬಿಕ 3ನೇ ವರ್ಷದ ಹಾಕಿ ಪಂದ್ಯಾವಳಿ ಶುಕ್ರವಾರ ಆರಂಭಗೊಳ್ಳಲಿದೆ. ವಿ. ಬಾಡಗದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಒಟ್ಟು 5 ದಿನಗಳ ಕಾಲ ನಡೆಯಲಿರುವ ಈ ಹಾಕಿ ಪಂದ್ಯಾವಳಿಗಾಗಿ ಈಗಾಗಲೇ ಅಗತ್ಯ ಸಿದ್ಧತೆ ಪೂರ್ಣಗೊಂಡಿರುವುದಾಗಿ ವಿ. ಬಾಡಗ ಹೈಪ್ಲೈಯರ್ಸ್ ಸಂಸ್ಥೆಯ ಅಧ್ಯಕ್ಷ ಅಮ್ಮಣಿಚಂಡ ರಂಜು ಪೂಣಚ್ಚ ತಿಳಿಸಿದ್ದಾರೆ.

ದ. ಕೊಡಗಿನ ಬಿಟ್ಟಂಗಾಲ, ಬಿ.ಶೆಟ್ಟಿಗೇರಿ ಮತ್ತು ಹಾತೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಐನ್ ಮನೆ ಹೊಂದಿರುವ ಕೊಡವ ಕುಟುಂಬ ತಂಡಗಳಿಗಾಗಿ ಆಯೋಜಿಸಲಾಗಿರುವ ಈ ಹಾಕಿ ಪಂದ್ಯಾವಳಿಯಲ್ಲಿ ವಿವಿಧ ಅತಿಥಿ ಆಟಗಾರರನ್ನು ಒಳಗೊಂಡ ಒಟ್ಟು 20 ಕುಟುಂಬ ತಂಡಗಳು ಭಾಗವಹಿಸುತ್ತಿದ್ದು, ಚಾಂಪಿಯನ್ ಪಟ್ಟಕ್ಕಾಗಿ ಸೆಣಸಾಡಲಿವೆ.

ಶುಕ್ರವಾರ ಬೆಳಗ್ಗೆ ಜರುಗಲಿರುವ ಕಾರ್ಯಕ್ರಮದಲ್ಲಿ ಮಾಜಿ ಅಂತಾರಾಷ್ಟ್ರೀಯ ಹಾಕಿ ಪಟು, ಒಲಂಪಿಯನ್ ಚೆಪ್ಪುಡೀರ ಪೂಣಚ್ಚ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ. ಹೈಪ್ಲೈಯರ್ಸ್ ಸಂಸ್ಥೆಯ ಸಲಹಾ ಸಮಿತಿ ಅಧ್ಯಕ್ಷ ಮಳವಂಡ ಗಿರೀಶ್ ಮುದ್ದಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ವಿರಾಜಪೇಟೆ ಪೊಲೀಸ್ ವೃತ್ತ ನಿರೀಕ್ಷಕ ಪೆಮ್ಮಚಂಡ ಅನೂಪ್ ಮಾದಪ್ಪ, ರಾಜ್ಯ ತಂಡದ ಮಾಜಿ ಹಾಕಿ ಆಟಗಾರ ಕಂಬಿರಂಡ ಶಾರದಾ ಅಯ್ಯಪ್ಪ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ಹಾಕಿ ಕೂರ್ಗ್ ಸಂಸ್ಥೆ ಅಧ್ಯಕ್ಷ ಪಳಂಗಂಡ ಲವಕುಮಾರ್, ವಿ.ಬಾಡಗ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಂಜಿತಂಡ ಗಿಣಿ ಮೊಣ್ಣಪ್ಪ, ವಿ.ಬಾಡಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೆ.ಸಿ. ಗೀತಾಂಜಲಿ ಭಾಗವಹಿಸಲಿದ್ದಾರೆ ಎಂದು ಅಮ್ಮಣಿಚಂಡ ರಂಜು ಪೂಣಚ್ಚ ಮಾಹಿತಿ ನೀಡಿದ್ದಾರೆ.

ಪಂದ್ಯಾವಳಿ ವ್ಯವಸ್ಥಿತ ಮತ್ತು ಶಿಸ್ತುಬದ್ಧವಾಗಿ ನಡೆಸಲು ಈಗಾಗಲೇ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಹಾಕಿ ಕೂರ್ಗ್ ಸಂಸ್ಥೆಯ ತೀರ್ಪುಗಾರರು ಪಂದ್ಯಾವಳಿ ನಡೆಸಿಕೊಡಲಿದ್ದಾರೆ. ಪಂದ್ಯಾವಳಿಯ ವಿನ್ನರ್ಸ್, ರನ್ನರ್ಸ್ ಮತ್ತು ತೃತೀಯ ಸ್ಥಾನ ವಿಜೇತ ತಂಡಗಳಿಗೆ ನಗದು ಬಹುಮಾನದೊಂದಿಗೆ ಕಳೆದ ಬಾರಿಯಂತೆ ಬೆಳ್ಳಿಯ ಟ್ರೋಫಿ ವಿತರಿಸಲು ನಿರ್ಧರಿಸಲಾಗಿದೆ ಎಂದು ಕ್ರೀಡಾ ಸಮಿತಿ ಅಧ್ಯಕ್ಷ ಕುಪ್ಪಂಡ ದಿಲನ್ ಬೋಪಣ್ಣ ತಿಳಿಸಿದ್ದಾರೆ.

.........................

ಇಂದಿನ ಪಂದ್ಯಾವಳಿಗಳುಪೂರ್ವಾಹ್ನ 10ಕ್ಕೆ: ಕುಪ್ಪಂಡ ಮತ್ತು ಕಂಜಿತಂಡ

ಪೂರ್ವಾಹ್ನ 11ಕ್ಕೆ: ಅಮ್ಮಣಿಚಂಡ ಮತ್ತು ಕಡೇಮಾಡ ಅಪರಾಹ್ನ 12.30ಕ್ಕೆ: ತೀತಿಮಾಡ ಮತ್ತು ಮೇಚಿಯಂಡ

ಅಪರಾಹ್ನ 1.30ಕ್ಕೆ: ಮುರುವಂಡ ಮತ್ತು ಕೊಲ್ಲಿರ ಅಪರಾಹ್ನ 3ಕ್ಕೆ: ನಾಮೇರ ಮತ್ತು ಚೊಟ್ಟೆಪಂಡ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ