ಕನ್ನಡಪ್ರಭ ವಾರ್ತೆ ಮದ್ದೂರು
ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಹಾಗೂ ಆತಗೂರು ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಗ್ರಾಮದ ಕೆರೆಯಂಗಳದಲ್ಲಿ ಬದಲಾದ ನರೇಗಾ ಯೋಜನೆಯ ವಿಬಿಜಿ ರಾಮ್ ಜಿ ಯೋಜನೆಯನ್ನು ಆತಗೂರು ಗ್ರಾಮದಿಂದ ಚಾಲನೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟನೆಗೆ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ರಾಜ್ ಆಯುಕ್ತೆ ಜಿ.ಆರ್.ಜೆ ದಿವ್ಯ ಪ್ರಭು ಆಗಮಿಸಿದ್ದರು. ಬೆಳಗ್ಗೆ 11.30ರ ಸುಮಾರಿಗೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಂದಿನಿ ಅವರೊಂದಿಗೆ ಆಗಮಿಸಿದ ದಿವ್ಯ ಪ್ರಭು ಆಂಧ್ರಪ್ರದೇಶದ ತಿರುಪತಿಯಲ್ಲಿ ರಾಮ್ ಜಿ ಯೋಜನೆಯ ಉದ್ಘಾಟನೆಯನ್ನು ನೇರ ಪ್ರಸಾರದಲ್ಲಿ ವೀಕ್ಷಣೆ ಮಾಡಿದರು.ದಿವ್ಯ ಪ್ರಭು ಅವರು ಯೋಜನೆಯ ಉದ್ಘಾಟನೆಗೆ ಸರ್ಕಾರದ ಅನುಮತಿಗಾಗಿ ಕಾದು ಕುಳಿತಿದ್ದರು. ಮಧ್ಯಾಹ್ನ 1.30 ಗಂಟೆ ಕಳೆದರೂ ಸಹ ಸರ್ಕಾರದ ಅನುಮತಿ ಸಿಗದ ಕಾರಣ ಉದ್ಘಾಟನಾ ಕಾರ್ಯಕ್ರಮ ಮೊಟಕುಗೊಳಿಸಿದ ದಿವ್ಯ ಪ್ರಭು, ಯೋಜನೆಯ ಕೂಲಿ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿ ನಿರ್ಗಮಿಸಿದರು.
ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಆತಗೂರು ಕೆರೆ ಆವರಣದಲ್ಲಿ ಕೂಲಿಕಾರರನ್ನುದ್ದೇಶಿಸಿ ಮಾತನಾಡಿ, ಈ ಹಿಂದೆ ಜಾರಿಯಲ್ಲಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ನೀಡಲಾಗಿದ್ದ ಗುರುತಿನ ಚೀಟಿಯನ್ನು ಮಾರ್ಪಾಡು ಮಾಡಿ ರೋಜ್ಗಾರ್ ಗ್ಯಾರಂಟಿ ಕಾರ್ಡ್ ನೀಡಲು ಯೋಜಿಸಲಾಗಿದೆ. ಯೋಜನೆಯಡಿ ಒಂದು ಕುಟುಂಬಕ್ಕೆ 125 ದಿನಗಳ ಉದ್ಯೋಗ ಖಾತರಿ ಜೊತೆಗೆ 382 ರು. ಕೂಲಿ ಹಣ ಪಾವತಿಸಲಾಗುವುದು ಎಂದರು.
ಈ ವೇಳೆ ಜಿಪಂ ಸಿಇಒ ಕೆ.ಆರ್.ನಂದಿನಿ, ಉಪ ಕಾರ್ಯದರ್ಶಿ ಲಕ್ಷ್ಮೀ, ತಾಪಂ ಇಒ ರಾಮಲಿಂಗಯ್ಯ, ಸಹಾಯಕ ನಿರ್ದೇಶಕ ಟಿ.ವಿ. ಮಂಜುನಾಥ್, ತಾಲೂಕು ಯೋಜನಾಧಿಕಾರಿ ಸುರೇಶ್, ಸಂಯೋಜಕ ರಮೇಶ್, ಪಿಡಿಒ ಶಶಿಕುಮಾರ್ ಸೇರಿದಂತೆ ಹಲವರಿದ್ದರು.ಮುಖ್ಯಾಂಶಗಳು
- ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಕಾದು ಕುಳಿತ ಆಯುಕ್ತೆ; ಅರ್ಧಕ್ಕೆ ಮೊಟಕು