ಮಂಗಳೂರಲ್ಲಿ ವೇದಪಾಠ ಶಾಲೆ ಅಪೂರ್ವ ಅವಕಾಶ: ರಾಘವೇಶ್ವರ ಶ್ರೀ

KannadaprabhaNewsNetwork |  
Published : Apr 30, 2024, 02:06 AM IST
ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಆಶೀರ್ವಚನ ನೀಡಿದರು. | Kannada Prabha

ಸಾರಾಂಶ

ಇದೊಂದು ದುರ್ಲಭವಾದ ಅವಕಾಶ, ಒಳ್ಳೆಯ ವಾತಾವರಣ ಇಲ್ಲಿ ಸಿಕ್ಕಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ಇಲ್ಲಿ ಸಿಕ್ಕಿರುವ ಸಂಸ್ಕಾರದಿಂದ ಬದುಕನ್ನು ಉತ್ತಮವಾಗಿ ಕಳೆಯುವ ಹಾಗಾಗಲಿ ಎಂದು ಶುಭ ಹಾರೈಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಹಾಗೂ ಸಂಸ್ಕೃತಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ನೆರವಾಗುವಂತಹ ವೇದಪಾಠ ಶಾಲೆಯ ಅಪೂರ್ವ ಅವಕಾಶ ಮಂಗಳೂರಿನಲ್ಲಿ ಉಪಲಬ್ಧವಾಗಿದೆ. ಇಲ್ಲಿ ಸಿಕ್ಕಿರುವ ವಿದ್ಯೆಗಳನ್ನು ಮುಂದಿನ ಜೀವನದಲ್ಲೂ ಅಳವಡಿಸಿಕೊಂಡು ಹೋಗಿ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಹೇಳಿದ್ದಾರೆ.ಇಲ್ಲಿನ ಶ್ರೀ ಭಾರತೀ ಕಾಲೇಜು ಆವರಣದ ಶಂಕರ ಶ್ರೀ ವಸಂತ ವೇದಪಾಠ ಶಾಲೆಯಲ್ಲಿ ನಡೆಯುತ್ತಿರುವ ಉಚಿತ ವೇದಪಾಠ ಶಿಬಿರಕ್ಕೆ ಸೋಮವಾರ ಭೇಟಿ ನೀಡಿದ ಅವರು ಮಾತನಾಡಿದರು.ಇದೊಂದು ದುರ್ಲಭವಾದ ಅವಕಾಶ, ಒಳ್ಳೆಯ ವಾತಾವರಣ ಇಲ್ಲಿ ಸಿಕ್ಕಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ಇಲ್ಲಿ ಸಿಕ್ಕಿರುವ ಸಂಸ್ಕಾರದಿಂದ ಬದುಕನ್ನು ಉತ್ತಮವಾಗಿ ಕಳೆಯುವ ಹಾಗಾಗಲಿ ಎಂದು ಶುಭ ಹಾರೈಸಿದರು. ಇದೇ ವೇಳೆ ವೇದಪಾಠ ಶಾಲಾ ವಿದ್ಯಾರ್ಥಿಗಳಿಗೆ ಆಶೀರ್ವಾದ, ಮಂತ್ರಾಕ್ಷತೆ ನೀಡಿ ಹರಸಿದರು.

ಕಾಲೇಜಿನ ಹವ್ಯಕ ಸಭಾ ಅಧ್ಯಕ್ಷೆ ಗೀತಾದೇವಿ ಸಿ, ಭಾರತಿ ಸಮೂಹ ಸಂಸ್ಥೆಗಳ ಕಾರ್ಯಾಧ್ಯಕ್ಷ ಗಣೇಶ್ ಮೋಹನ್ ಕಾಶಿಮಠ, ಕಾರ್ಯದರ್ಶಿ ಶ್ರೀಕೃಷ್ಣ ನೀರಮೂಲೆ, ಹವ್ಯಕ ಮಂಡಲ ಉಪಾಧ್ಯಕ್ಷ ರಾಜಶೇಖರ ಭಟ್ ಕಾಕುಂಜೆ, ಕಾರ್ಯದರ್ಶಿ ರಮೇಶ್ ಭಟ್ ಸರವು, ವೇದಪಾಠಾ ಶಾಲಾ ಶಿಬಿರ ಮುಖ್ಯಸ್ಥ ಕಾಶಿಮಠ ಸುಬ್ರಹ್ಮಣ್ಯ ಭಟ್, ಬಾಲಸುಬ್ರಹ್ಮಣ್ಯ ಭಟ್ ಕಬೆಕೋಡು, ಬಾಯಾಡಿ ಬಾಲಕೃಷ್ಣ ಭಟ್, ರಮೇಶ್ ಭಟ್ ನೂಜಿಬೈಲು, ಮಂಡಲದ ವೈದಿಕ ಪ್ರಧಾನರಾದ ಅಮೈ ಶಿವಪ್ರಸಾದ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ