ಪ್ರಾಕೃತಿಕ ವಿಕೋಪ ಸಂತ್ರಸ್ತರ ನೆರವಿಗೆ ಸರ್ಕಾರ ಕೂಡಲೇ ಧಾವಿಸಲು ವೇದವ್ಯಾಸ್‌ ಕಾಮತ್‌ ಆಗ್ರಹ

KannadaprabhaNewsNetwork |  
Published : Jun 01, 2025, 02:15 AM IST
ಶಾಸಕ ವೇದವ್ಯಾಸ್‌ ಕಾಮತ್‌  | Kannada Prabha

ಸಾರಾಂಶ

ಈ ಹಿಂದೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಮಳೆಹಾನಿಯ ಸಂದರ್ಭದಲ್ಲಿ ಸಂತ್ರಸ್ತರು ಮರಳಿ ಬದುಕು ಕಟ್ಟಿಕೊಳ್ಳಲು ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಪರಿಹಾರ ನೀಡುತ್ತಿತ್ತು. ಅದರಂತೆ ಮನೆಗೆ ನೀರು ನುಗ್ಗಿದರೆ 10 ಸಾವಿರ ರು., ಭಾಗಶಃ ಹಾನಿಯಾಗಿದ್ದರೆ 3 ಲಕ್ಷ ರು. ಮತ್ತು ಸಂಪೂರ್ಣ ಹಾನಿಯಾಗಿದ್ದರೆ 5 ಲಕ್ಷ ರು. ಪರಿಹಾರ ನೀಡುತ್ತಿತ್ತು.

ಕನ್ನಡಪ್ರಭ ವಾರ್ತೆ ಮಂಗಳೂರು

ಹಲವಾರು ವರ್ಷಗಳ ನಂತರ ಮುಂಗಾರು ಮಾರುತಗಳು ಸಾಕಷ್ಟು ಮುಂಚಿತವಾಗಿಯೇ ಕರಾವಳಿಯನ್ನು ಪ್ರವೇಶಿಸಿದೆ. ನಮ್ಮ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿ ಜನಸಾಮಾನ್ಯರು ಅಪಾರ ನಷ್ಟ ಅನುಭವಿಸುವಂತಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ನೆರವಿಗೆ ಧಾವಿಸಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದ್ದಾರೆ.

ಈ ಹಿಂದೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಮಳೆಹಾನಿಯ ಸಂದರ್ಭದಲ್ಲಿ ಸಂತ್ರಸ್ತರು ಮರಳಿ ಬದುಕು ಕಟ್ಟಿಕೊಳ್ಳಲು ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಪರಿಹಾರ ನೀಡುತ್ತಿತ್ತು. ಅದರಂತೆ ಮನೆಗೆ ನೀರು ನುಗ್ಗಿದರೆ 10 ಸಾವಿರ ರು., ಭಾಗಶಃ ಹಾನಿಯಾಗಿದ್ದರೆ 3 ಲಕ್ಷ ರು. ಮತ್ತು ಸಂಪೂರ್ಣ ಹಾನಿಯಾಗಿದ್ದರೆ 5 ಲಕ್ಷ ರು. ಪರಿಹಾರ ನೀಡುತ್ತಿತ್ತು. ಆದರೆ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರಕ್ಕೆ ಜನಸಾಮಾನ್ಯರ ಬಗ್ಗೆ ಕಾಳಜಿಯೇ ಇಲ್ಲವಾಗಿದೆ. ಪರಿಹಾರ ಮೊತ್ತವನ್ನು ಗಣನೀಯವಾಗಿ ಇಳಿಸಿದ ಪರಿಣಾಮ ಇದೀಗ ಮನೆಗೆ ನೀರು ನುಗ್ಗಿದರೆ ಪರಿಹಾರವೇ ಇಲ್ಲ, ಭಾಗಶಃ ಹಾನಿಯಾದರೆ ಕೇವಲ 50 ಸಾವಿರ ರು.ನಿಂದ 1 ಲಕ್ಷ ರು. ಮತ್ತು ಸಂಪೂರ್ಣ ಹಾನಿಯಾದರೆ ಕೇವಲ 1.5 ಲಕ್ಷ ರು. ಪರಿಹಾರ ನೀಡಲಾಗುತ್ತಿದೆ. ಇದರಿಂದ ಅನೇಕ ಬಡ ಕುಟುಂಬಗಳು ತೀವ್ರ ತೊಂದರೆಗೀಡಾಗಿವೆ ಎಂದರು.

ಹಿಂದಿನ ಬಿಜೆಪಿ ಸರ್ಕಾರದ ಮಾದರಿಯಲ್ಲೇ ಪರಿಹಾರ ಒದಗಿಸಿ ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ಶಾಸಕ ವೇದವ್ಯಾಸ್‌ ಕಾಮತ್‌ ಅವರು ಸರ್ಕಾರವನ್ನು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''