ಹುಲುಕುಡಿ ಕ್ಷೇತ್ರದಲ್ಲಿ ವೀರಭದ್ರಸ್ವಾಮಿ ಬ್ರಹ್ಮರಥೋತ್ಸವ

KannadaprabhaNewsNetwork |  
Published : Jan 26, 2026, 01:15 AM IST
ದೊಡ್ಡಬಳ್ಳಾಪುರ ತಾಲೂಕಿನ ಹುಲುಕುಡಿ ಕ್ಷೇತ್ರದಲ್ಲಿ ವೀರಭದ್ರಸ್ವಾಮಿ ಭದ್ರಕಾಳಮ್ಮ ಬ್ರಹ್ಮರಥೋತ್ಸವ ಭಾನುವಾರ ಸಂಭ್ರಮದಿಂದ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಐತಿಹಾಸಿ ಹುಲುಕುಡಿ ಕ್ಷೇತ್ರದಲ್ಲಿ ಶ್ರೀವೀರಭದ್ರಸ್ವಾಮಿ ಭದ್ರಕಾಳಮ್ಮ ಬ್ರಹ್ಮರಥೋತ್ಸವ ರಥಸಪ್ತಮಿಯ ದಿನವಾದ ಭಾನುವಾರ ಸಂಭ್ರಮದಿಂದ ನೆರವೇರಿತು

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಐತಿಹಾಸಿ ಹುಲುಕುಡಿ ಕ್ಷೇತ್ರದಲ್ಲಿ ಶ್ರೀವೀರಭದ್ರಸ್ವಾಮಿ ಭದ್ರಕಾಳಮ್ಮ ಬ್ರಹ್ಮರಥೋತ್ಸವ ರಥಸಪ್ತಮಿಯ ದಿನವಾದ ಭಾನುವಾರ ಸಂಭ್ರಮದಿಂದ ನೆರವೇರಿತು.

ಶ್ರೀ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರಾಭಿವರದ್ದಿ ಟ್ರಸ್ಟ್(ರಿ) ನೇತೃತ್ವದಲ್ಲಿ 45ನೇ ವಾರ್ಷಿಕ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಆಯೋಜಿಸಲಾಗಿತ್ತು. ರಥೋತ್ಸವದಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಶ್ರೀಸ್ವಾಮಿಯ ರಥಕ್ಕೆ ಹಣ್ಣು-ಧವನ ಅರ್ಪಿಸಿ ಧನ್ಯತಾಭಾವ ಮೆರೆದರು.

ರಥಸಪ್ತಮಿಯ ದಿನದಂದು ಬೆಳಗಿನಜಾವ ಹುಲುಕುಡಿ ಬೆಟ್ಟದ ಗುಹಾಂತರ ದೇವಾಲಯದಲ್ಲಿ ನೆಲೆ ನಿಂತಿರುವ ವೀರಭದ್ರಸ್ವಾಮಿ, ಭದ್ರಕಾಳಮ್ಮ ಮೂಲದೇವರುಗಳಿಗೆ ರುದ್ರಾಭಿಷೇಕ ನಡೆಯಿತು. ಮಧ್ಯಾಹ್ನ ವೀರಗಾಸೆ, ಕಂಸಾಳೆ, ಗಾರುಡಿಗೊಂಬೆಗಳು, ಡೊಳ್ಳುಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ತಂಡಗಳೊಂದಿಗೆ ರಥೋತ್ಸವ ನಡೆಯಿತು. ಭಕ್ತಾದಿಗಳಿಗೆ ಅನ್ನದಾಸೋಹ ಏರ್ಪಡಿಸಲಾಗಿತ್ತು.

ಇದೇ ವೇಳೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನೂ ಹಮ್ಮಿಕೊಳ್ಳಲಾಗಿತ್ತು. ನೀರು, ಮಜ್ಜಿಗೆ, ಪಾನಕ ವಿತರಣೆಯೂ ನಡೆಯಿತು. ರಂಭಾಪುರಿ ಬಾಳೆಹೊನ್ನುರು ಮಠದ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ಶಾಸಕರು, ಮಾಜಿ ಶಾಸಕರು, ಅನೇಕ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.

25ಕೆಡಿಬಿಪಿ3- ದೊಡ್ಡಬಳ್ಳಾಪುರ ತಾಲೂಕಿನ ಹುಲುಕುಡಿ ಕ್ಷೇತ್ರದಲ್ಲಿ ವೀರಭದ್ರಸ್ವಾಮಿ ಭದ್ರಕಾಳಮ್ಮ ಬ್ರಹ್ಮರಥೋತ್ಸವ ಭಾನುವಾರ ಸಂಭ್ರಮದಿಂದ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತ್ತೂರು ಬಸಿಲಿಕಾದಲ್ಲಿ ಸಂತ ಲಾರೆನ್ಸ್ ವಾರ್ಷಿಕ ಮಹೋತ್ಸವ ಆರಂಭ
ಯುವಜನತೆಗೆ ಧಾರ್ಮಿಕ ಶಿಕ್ಷಣದ ಅಗತ್ಯವಿದೆ - ಕೇಮಾರು ಶ್ರೀ