ವೀರಕಂಬ: ಬಾಡಿಗೆ ಮನೆಗಳ ಮೇಲೆ ನಿಗಾ ಇಡುವಂತೆ ಗ್ರಾಮಸ್ಥರ ಆಗ್ರಹ

KannadaprabhaNewsNetwork |  
Published : Mar 26, 2025, 01:32 AM IST
ವೀರಕಂಬ ಗ್ರಾಮ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಗಳ ಮೇಲೆ ನಿಗಾ ಇಡುವಂತೆ ಗ್ರಾಮಸ್ಥರ ಆಗ್ರಹ  | Kannada Prabha

ಸಾರಾಂಶ

ಸೋಮವಾರ ವೀರಕಂಭ ಮಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾ ಭವನದಲ್ಲಿ ನಡೆದ ವೀರಕಂಭ ಗ್ರಾಮ ಪಂಚಾಯಿತಿ ದ್ವಿತೀಯ ಸುತ್ತಿನ ಗ್ರಾಮಸಭೆಯಲ್ಲಿ ವೀರಕಂಬ ಗ್ರಾಮ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಗಳ ಮೇಲೆ ನಿಗಾ ಇಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬಂಟ್ವಾಳ

ವೀರಕಂಬ ಗ್ರಾಮ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಗಳ ಮೇಲೆ ನಿಗಾ ಇಡುವಂತೆ ಗ್ರಾಮಸ್ಥರು ಗ್ರಾಮ ಸಭೆಯಲ್ಲಿ ಆಗ್ರಹಿಸಿದ್ದಾರೆ.

ಸೋಮವಾರ ವೀರಕಂಭ ಮಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾ ಭವನದಲ್ಲಿ ನಡೆದ ವೀರಕಂಭ ಗ್ರಾಮ ಪಂಚಾಯಿತಿ ದ್ವಿತೀಯ ಸುತ್ತಿನ ಗ್ರಾಮಸಭೆಯಲ್ಲಿ ಈ ಆಗ್ರಹ ಕೇಳಿಬಂದಿದೆ.

ಗ್ರಾಮ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಗಳಿಂದ ಗ್ರಾಮ ಸ್ವಚ್ಛತೆಗೆ ಅಡ್ಡಿಯಾಗಿದ್ದು, ಪರಿಚಯ ಇಲ್ಲದವರಿಗೆ ಬಾಡಿಗೆ ನೀಡಿರುವುದರಿಂದ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ. ಬಾಡಿಗೆ ಮನೆ ನೀಡುವಾಗ ಸೂಕ್ತ ದಾಖಲಾತಿ ಪಡೆದು ಗ್ರಾಮ ಪಂಚಾಯತಿಗೆ ಮಾಹಿತಿ ನೀಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.

ವೀರಕಂಬ ಗ್ರಾಮದಲ್ಲಿ ಆರೋಗ್ಯ ಕೇಂದ್ರ ನಿರ್ಮಿಸಲು ಕಾದಿರಿಸಿದ ಜಾಗದಲ್ಲಿ ಶೀಘ್ರವೇ ಆರೋಗ್ಯ ಉಪ ಕೇಂದ್ರ ರಚಿಸಬೇಕು, ಗ್ರಾಮದಲ್ಲಿರುವ ಗೋಮಾಳ ಜಾಗ ಗಡಿ ಗುರುತು ಮಾಡಬೇಕು, ಘನ ತ್ಯಾಜ್ಯ ಘಟಕ ಕೂಡಲೇ ಉದ್ಘಾಟಿಸಿ, ರಸ್ತೆ ಬದಿಯಲ್ಲಿ ಕಸ ಎಸೆಯುವವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.

ಗ್ರಾಮಸ್ಥರಿಗೆ ವಿವಿಧ ಇಲಾಖೆಗಳಾದ ಆರೋಗ್ಯ, ಮೆಸ್ಕಾಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಪಶು ಸಂಗೋಪನ ಇಲಾಖೆ, ತೋಟಗಾರಿಕಾ ಇಲಾಖೆ ವತಿಯಿಂದ ಗ್ರಾಮಸ್ಥರಿಗೆ ಇಲಾಖಾವಾರು ಮಾಹಿತಿ ನೀಡಿದರು.

ಗ್ರಾಮ ಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಬಂಟ್ವಾಳ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಭಾಗವಹಿಸಿ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು.

ಗ್ರಾಮಸ್ಥರು ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿದರು.

ಗ್ರಾಮ ಪಂಚಾಯತಿ ಅಧ್ಯಕ್ಷ ಲಲಿತ, ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರುಗಳು, ವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಮಜಿ ಶಾಲಾ ಮಕ್ಕಳು ನಾಡಗೀತೆ ಹಾಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುಷ್ಪ ಎಂ ಸ್ವಾಗತಿಸಿ, ಕಾರ್ಯದರ್ಶಿ ಸವಿತಾ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ