ಅಕ್ಕಮಹಾದೇವಿ ದೇವಸ್ಥಾನದಲ್ಲಿ ನಡೆದ ವೀರಶೈವ ಮುಖಂಡರ ಸಿದ್ಧತಾ ಸಭೆಕನ್ನಡಪ್ರಭ ವಾರ್ತೆ ಚಿತ್ತಾಪುರ
ಪಟ್ಟಣದ ಅಕ್ಕಮಹಾದೇವಿ ದೇವಸ್ಥಾನದಲ್ಲಿ ನಡೆದ ವೀರಶೈವ ಮುಖಂಡರ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ ಸೇರಿ ದೇಶದ ವಿವಿಧ ಭಾಗಗಳಿಂದ ೩ ಲಕ್ಷಕ್ಕೂ ಹೆಚ್ಚು ಜನರು ಈ ಮಹಾ ಅಧಿವೇಶನಕ್ಕೆ ಸಾಕ್ಷಿಯಾಗಳಿದ್ದಾರೆ. ಚಿತ್ತಾಪುರ ತಾಲೂಕಿನಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಭಾಂದವರು ಅಧಿವೇಶನದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಸಮಾಜದ ಸಂಘಟನೆ, ಒಳ ಪಂಗಡಗಳ ಭೇದ ಮರೆತು ಎಲ್ಲರೂ ಸೇರಿ ಒಗ್ಗಟ್ಟು ಪ್ರದರ್ಶನ ಮಾಡಬೇಕು. ಮಹಾ ಅಧಿವೇಶನದಲ್ಲಿ ವಿವಿಧ ವಿಷಯಗಳ ವಿಶೇಷ ಮಂಡನೆ, ಚರ್ಚೆ ಇರಲ್ಲಿದ್ದು, ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ, ಯುವಕರಿಗೆ ಸಂಬಂಧಿಸಿದ ಅನೇಕ ವಿಷಯಗಳು ಇರುತ್ತವೆ. ಈ ಅಧಿವೇಶನದಲ್ಲಿ ಭಾಗವಹಿಸಿಸುವರು ರು.೫೦೦ ಕೊಟ್ಟು ಡಿ.೧೫ರೊಳಗೆ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡವರಿಗೆ ೨ದಿನಗಳ ಕಾಲ ವಸತಿ ಮತ್ತು ಊಟದ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ ಮಹಾಸಭಾ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಿರಿ ಎಂದರು.ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ನಾಗರಾಜ ಭಂಕಲಗಿ, ಗೌರವಾಧ್ಯಕ್ಷ ಲಿಂಗಾರೆಡ್ಡಿಗೌಡ ಭಾಸರೆಡ್ಡಿ ಮುಖಂಡರಾದ ಮಲ್ಲಣ ಮಾಸ್ಟರ್ ಮೂಡಬುಳ, ನಾಗರೆಡ್ಡಿ ಪಾಟೀಲ್ ಕರದಾಳ, ಸೋಮಶೇಖರ್ ಪಾಟೀಲ್ ಬೆಳಗುಂಪಾ, ಚಂದ್ರಶೇಖರ ಅವಂಟಿ, ಅಂಬರೀಶ್ ಸುಲೇಗಾಂವ, ಸಿದ್ರಾಮಪ್ಪ ಗೊಂಬಿಮಠ ಮಾತನಾಡಿದರು.